Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್ 32 ಇನಿಂಗ್ಸ್​​​ನಲ್ಲಿ ವಿಶ್ವ ದಾಖಲೆ ಬರೆದ ಪ್ರಭಾತ್ ಜಯಸೂರ್ಯ

South Africa vs Sri Lanka: ಡರ್ಬನ್​​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪ್ರಥಮ ಇನಿಂಗ್ಸ್​​ನಲ್ಲಿ 191 ರನ್ ಕಲೆಹಾಕಿದರೆ, ಶ್ರೀಲಂಕಾ 42 ರನ್​​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ 366 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ.

ಝಾಹಿರ್ ಯೂಸುಫ್
|

Updated on: Nov 30, 2024 | 9:54 AM

ಡರ್ಬನ್​​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ 2 ವಿಕೆಟ್ ಕಬಳಿಸಿದ್ದ ಪ್ರಭಾತ್ ದ್ವಿತೀಯ ಇನಿಂಗ್ಸ್​​ನಲ್ಲಿ ಮತ್ತೆರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಡರ್ಬನ್​​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ 2 ವಿಕೆಟ್ ಕಬಳಿಸಿದ್ದ ಪ್ರಭಾತ್ ದ್ವಿತೀಯ ಇನಿಂಗ್ಸ್​​ನಲ್ಲಿ ಮತ್ತೆರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

1 / 5
ಈ ನಾಲ್ಕು ವಿಕೆಟ್​​ಗಳೊಂದಿಗೆ ಪ್ರಭಾತ್ ಜಯಸೂರ್ಯ ಟೆಸ್ಟ್ ಕ್ರಿಕೆಟ್​​ನಲ್ಲಿ 100 ವಿಕೆಟ್​​​ಗಳ ಸಾಧನೆ ಮಾಡಿದ್ದಾರೆ. ಅದು ಕೂಡ ಕೇವಲ 32 ಇನಿಂಗ್ಸ್​​ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಅತೀ ಕಡಿಮೆ ಇನಿಂಗ್ಸ್​​ ಮೂಲಕ ನೂರು ವಿಕೆಟ್​​ ಕಬಳಿಸಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಈ ನಾಲ್ಕು ವಿಕೆಟ್​​ಗಳೊಂದಿಗೆ ಪ್ರಭಾತ್ ಜಯಸೂರ್ಯ ಟೆಸ್ಟ್ ಕ್ರಿಕೆಟ್​​ನಲ್ಲಿ 100 ವಿಕೆಟ್​​​ಗಳ ಸಾಧನೆ ಮಾಡಿದ್ದಾರೆ. ಅದು ಕೂಡ ಕೇವಲ 32 ಇನಿಂಗ್ಸ್​​ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಅತೀ ಕಡಿಮೆ ಇನಿಂಗ್ಸ್​​ ಮೂಲಕ ನೂರು ವಿಕೆಟ್​​ ಕಬಳಿಸಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

2 / 5
ಈ ಪಟ್ಟಿಯ ಮೊದಲೆರಡು ಸ್ಥಾನಗಳಲ್ಲಿ ಆಸ್ಟ್ರೇಲಿಯಾದ ಚಾರ್ಲಿ ಟರ್ನರ್ ಹಾಗೂ ಕ್ಲಾರಿ ಗ್ರಿಮೆಟ್ಟ್ ಇದ್ದಾರೆ. ಟರ್ನರ್ 30 ಇನಿಂಗ್ಸ್​​ ಮೂಲಕ 100 ವಿಕೆಟ್ ಕಬಳಿಸಿದರೆ, ಗ್ರಿಮೆಟ್ಟ 31 ಇನಿಂಗ್ಸ್​ನಲ್ಲಿ​ ಈ ಸಾಧನೆ ಮಾಡಿದ್ದರು. ಇದೀಗ 32 ಇನಿಂಗ್ಸ್​ 100 ವಿಕೆಟ್ ಉರುಳಿಸಿ ಪ್ರಭಾತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

ಈ ಪಟ್ಟಿಯ ಮೊದಲೆರಡು ಸ್ಥಾನಗಳಲ್ಲಿ ಆಸ್ಟ್ರೇಲಿಯಾದ ಚಾರ್ಲಿ ಟರ್ನರ್ ಹಾಗೂ ಕ್ಲಾರಿ ಗ್ರಿಮೆಟ್ಟ್ ಇದ್ದಾರೆ. ಟರ್ನರ್ 30 ಇನಿಂಗ್ಸ್​​ ಮೂಲಕ 100 ವಿಕೆಟ್ ಕಬಳಿಸಿದರೆ, ಗ್ರಿಮೆಟ್ಟ 31 ಇನಿಂಗ್ಸ್​ನಲ್ಲಿ​ ಈ ಸಾಧನೆ ಮಾಡಿದ್ದರು. ಇದೀಗ 32 ಇನಿಂಗ್ಸ್​ 100 ವಿಕೆಟ್ ಉರುಳಿಸಿ ಪ್ರಭಾತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

3 / 5
ಶ್ರೀಲಂಕಾ ಪರ 17 ಟೆಸ್ಟ್ ಪಂದ್ಯಗಳಲ್ಲಿ 32 ಇನಿಂಗ್ಸ್ ಆಡಿರುವ ಪ್ರಭಾತ್ ಜಯಸೂರ್ಯ ಈವರೆಗೆ 5513 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 101 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​​​ಗಳಲ್ಲಿ 100 ವಿಕೆಟ್​​ಳ ಸಾಧನೆ ಮಾಡಿದ ಏಷ್ಯನ್ ಬೌಲರ್​​ ಎನಿಸಿಕೊಂಡಿದ್ದಾರೆ.

ಶ್ರೀಲಂಕಾ ಪರ 17 ಟೆಸ್ಟ್ ಪಂದ್ಯಗಳಲ್ಲಿ 32 ಇನಿಂಗ್ಸ್ ಆಡಿರುವ ಪ್ರಭಾತ್ ಜಯಸೂರ್ಯ ಈವರೆಗೆ 5513 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 101 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​​​ಗಳಲ್ಲಿ 100 ವಿಕೆಟ್​​ಳ ಸಾಧನೆ ಮಾಡಿದ ಏಷ್ಯನ್ ಬೌಲರ್​​ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪ್ರಥಮ ಇನಿಂಗ್ಸ್​​ನಲ್ಲಿ 191 ರನ್ ಕಲೆಹಾಕಿದರೆ, ಶ್ರೀಲಂಕಾ 42 ರನ್​​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ 366 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 149 ರನ್​​​ಗಳ ಹಿನ್ನಡೆ ಹೊಂದಿದ್ದ ಶ್ರೀಲಂಕಾ ತಂಡವು ಈ ಪಂದ್ಯದಲ್ಲಿ ಗೆಲ್ಲಲು ದ್ವಿತೀಯ ಇನಿಂಗ್ಸ್​​ನಲ್ಲಿ 516 ರನ್ ಕಲೆಹಾಕಬೇಕು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪ್ರಥಮ ಇನಿಂಗ್ಸ್​​ನಲ್ಲಿ 191 ರನ್ ಕಲೆಹಾಕಿದರೆ, ಶ್ರೀಲಂಕಾ 42 ರನ್​​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ 366 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 149 ರನ್​​​ಗಳ ಹಿನ್ನಡೆ ಹೊಂದಿದ್ದ ಶ್ರೀಲಂಕಾ ತಂಡವು ಈ ಪಂದ್ಯದಲ್ಲಿ ಗೆಲ್ಲಲು ದ್ವಿತೀಯ ಇನಿಂಗ್ಸ್​​ನಲ್ಲಿ 516 ರನ್ ಕಲೆಹಾಕಬೇಕು.

5 / 5
Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ