AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ಭರ್ಜರಿ ಸಿಕ್ಸ್, 9 ಫೋರ್​: ಟಿ20 ಲೀಗ್​ನಲ್ಲಿ ತೂಫಾನ್ ಶತಕ..!

Prabhsimran Singh: ಡಿವೈ ಪಾಟೀಲ್ ಕಪ್​ನ ಗ್ರೂಪ್ ಸಿ ಪಂದ್ಯದಲ್ಲಿ ಸಿಎಜಿ ಹಾಗೂ ಇನ್​ಕಮ್ ಟ್ಯಾಕ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ.

TV9 Web
| Edited By: |

Updated on: Feb 21, 2023 | 10:30 PM

Share
ಬರೋಬ್ಬರಿ 17 ಸಿಕ್ಸ್ ಹಾಗೂ 9 ಫೋರ್​ಗಳು...ಇದು ಡಿವೈ ಪಾಟೀಲ್ ಕಪ್​ನಲ್ಲಿ ಆಟಗಾರರೊಬ್ಬರ ಬ್ಯಾಟ್​ನಿಂದ ಮೂಡಿಬಂದ ಬೌಂಡರಿಗಳು. ಅಷ್ಟೇ ಅಲ್ಲದೆ ಈ ಬೌಂಡರಿಗಳ ನೆರವಿನಿಂದ ಭರ್ಜರಿ ಶತಕವನ್ನೂ ಕೂಡ ಸಿಡಿಸಿ ಅಬ್ಬರಿಸಿದರು.

ಬರೋಬ್ಬರಿ 17 ಸಿಕ್ಸ್ ಹಾಗೂ 9 ಫೋರ್​ಗಳು...ಇದು ಡಿವೈ ಪಾಟೀಲ್ ಕಪ್​ನಲ್ಲಿ ಆಟಗಾರರೊಬ್ಬರ ಬ್ಯಾಟ್​ನಿಂದ ಮೂಡಿಬಂದ ಬೌಂಡರಿಗಳು. ಅಷ್ಟೇ ಅಲ್ಲದೆ ಈ ಬೌಂಡರಿಗಳ ನೆರವಿನಿಂದ ಭರ್ಜರಿ ಶತಕವನ್ನೂ ಕೂಡ ಸಿಡಿಸಿ ಅಬ್ಬರಿಸಿದರು.

1 / 6
ಹೌದು, ದೇಶೀಯ ಅಂಗಳದಲ್ಲಿ ಇಂತಹದೊಂದು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನ ಹೆಸರು ಪ್ರಭ್​ಸಿಮ್ರಾನ್ ಸಿಂಗ್. ಡಿವೈ ಪಾಟೀಲ್ ಕಪ್​ನ ಗ್ರೂಪ್ ಸಿ ಪಂದ್ಯದಲ್ಲಿ ಸಿಎಜಿ ಹಾಗೂ ಇನ್​ಕಮ್ ಟ್ಯಾಕ್ಸ್​ ತಂಡಗಳು ಮುಖಾಮುಖಿಯಾಗಿತ್ತು.

ಹೌದು, ದೇಶೀಯ ಅಂಗಳದಲ್ಲಿ ಇಂತಹದೊಂದು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನ ಹೆಸರು ಪ್ರಭ್​ಸಿಮ್ರಾನ್ ಸಿಂಗ್. ಡಿವೈ ಪಾಟೀಲ್ ಕಪ್​ನ ಗ್ರೂಪ್ ಸಿ ಪಂದ್ಯದಲ್ಲಿ ಸಿಎಜಿ ಹಾಗೂ ಇನ್​ಕಮ್ ಟ್ಯಾಕ್ಸ್​ ತಂಡಗಳು ಮುಖಾಮುಖಿಯಾಗಿತ್ತು.

2 / 6
ಈ ಪಂದ್ಯದಲ್ಲಿ ಸಿಎಜಿ ಪರ ಆರಂಭಿಕನಾಗಿ ಆಡಿದ ಪ್ರಭ್​ಸಿಮ್ರಾನ್ ಸಿಂಗ್ ಅಕ್ಷರಶಃ ಅಬ್ಬರಿಸಿದರು. ಐಟಿ ತಂಡ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಸಿಮ್ರಾನ್ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಸ್ಪೋಟಕ ಶತಕ ಮೂಡಿಬಂತು.

ಈ ಪಂದ್ಯದಲ್ಲಿ ಸಿಎಜಿ ಪರ ಆರಂಭಿಕನಾಗಿ ಆಡಿದ ಪ್ರಭ್​ಸಿಮ್ರಾನ್ ಸಿಂಗ್ ಅಕ್ಷರಶಃ ಅಬ್ಬರಿಸಿದರು. ಐಟಿ ತಂಡ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಸಿಮ್ರಾನ್ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಸ್ಪೋಟಕ ಶತಕ ಮೂಡಿಬಂತು.

3 / 6
ಭರ್ಜರಿ ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪ್ರಭ್​ಸಿಮ್ರಾನ್ 17 ಸಿಡಿಲಬ್ಬರದ ಸಿಕ್ಸ್ ಹಾಗೂ 9 ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 55 ಎಸೆತಗಳಲ್ಲಿ 161 ರನ್​ ಚಚ್ಚಿದರು. ಪರಿಣಾಮ ಸಿಎಜಿ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್​ ಕಲೆಹಾಕಿತು.

ಭರ್ಜರಿ ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪ್ರಭ್​ಸಿಮ್ರಾನ್ 17 ಸಿಡಿಲಬ್ಬರದ ಸಿಕ್ಸ್ ಹಾಗೂ 9 ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 55 ಎಸೆತಗಳಲ್ಲಿ 161 ರನ್​ ಚಚ್ಚಿದರು. ಪರಿಣಾಮ ಸಿಎಜಿ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್​ ಕಲೆಹಾಕಿತು.

4 / 6
268 ರನ್​ಗಳ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಐಟಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಜಿ ತಂಡವು 115 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ 161 ರನ್​ ಬಾರಿಸಿ ಮಿಂಚಿದ್ದ ಪ್ರಭ್​ಸಿಮ್ರಾನ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

268 ರನ್​ಗಳ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಐಟಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಜಿ ತಂಡವು 115 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ 161 ರನ್​ ಬಾರಿಸಿ ಮಿಂಚಿದ್ದ ಪ್ರಭ್​ಸಿಮ್ರಾನ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

5 / 6
ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿರುವ ಪ್ರಭ್​ಸಿಮ್ರಾನ್ ಸಿಂಗ್ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನ ಅಬ್ಬರಿಸುವ ಮೂಲಕ ಈ ಬಾರಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿರುವ ಪ್ರಭ್​ಸಿಮ್ರಾನ್ ಸಿಂಗ್ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನ ಅಬ್ಬರಿಸುವ ಮೂಲಕ ಈ ಬಾರಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

6 / 6
Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು