AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ಭರ್ಜರಿ ಸಿಕ್ಸ್, 9 ಫೋರ್​: ಟಿ20 ಲೀಗ್​ನಲ್ಲಿ ತೂಫಾನ್ ಶತಕ..!

Prabhsimran Singh: ಡಿವೈ ಪಾಟೀಲ್ ಕಪ್​ನ ಗ್ರೂಪ್ ಸಿ ಪಂದ್ಯದಲ್ಲಿ ಸಿಎಜಿ ಹಾಗೂ ಇನ್​ಕಮ್ ಟ್ಯಾಕ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ.

TV9 Web
| Edited By: |

Updated on: Feb 21, 2023 | 10:30 PM

Share
ಬರೋಬ್ಬರಿ 17 ಸಿಕ್ಸ್ ಹಾಗೂ 9 ಫೋರ್​ಗಳು...ಇದು ಡಿವೈ ಪಾಟೀಲ್ ಕಪ್​ನಲ್ಲಿ ಆಟಗಾರರೊಬ್ಬರ ಬ್ಯಾಟ್​ನಿಂದ ಮೂಡಿಬಂದ ಬೌಂಡರಿಗಳು. ಅಷ್ಟೇ ಅಲ್ಲದೆ ಈ ಬೌಂಡರಿಗಳ ನೆರವಿನಿಂದ ಭರ್ಜರಿ ಶತಕವನ್ನೂ ಕೂಡ ಸಿಡಿಸಿ ಅಬ್ಬರಿಸಿದರು.

ಬರೋಬ್ಬರಿ 17 ಸಿಕ್ಸ್ ಹಾಗೂ 9 ಫೋರ್​ಗಳು...ಇದು ಡಿವೈ ಪಾಟೀಲ್ ಕಪ್​ನಲ್ಲಿ ಆಟಗಾರರೊಬ್ಬರ ಬ್ಯಾಟ್​ನಿಂದ ಮೂಡಿಬಂದ ಬೌಂಡರಿಗಳು. ಅಷ್ಟೇ ಅಲ್ಲದೆ ಈ ಬೌಂಡರಿಗಳ ನೆರವಿನಿಂದ ಭರ್ಜರಿ ಶತಕವನ್ನೂ ಕೂಡ ಸಿಡಿಸಿ ಅಬ್ಬರಿಸಿದರು.

1 / 6
ಹೌದು, ದೇಶೀಯ ಅಂಗಳದಲ್ಲಿ ಇಂತಹದೊಂದು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನ ಹೆಸರು ಪ್ರಭ್​ಸಿಮ್ರಾನ್ ಸಿಂಗ್. ಡಿವೈ ಪಾಟೀಲ್ ಕಪ್​ನ ಗ್ರೂಪ್ ಸಿ ಪಂದ್ಯದಲ್ಲಿ ಸಿಎಜಿ ಹಾಗೂ ಇನ್​ಕಮ್ ಟ್ಯಾಕ್ಸ್​ ತಂಡಗಳು ಮುಖಾಮುಖಿಯಾಗಿತ್ತು.

ಹೌದು, ದೇಶೀಯ ಅಂಗಳದಲ್ಲಿ ಇಂತಹದೊಂದು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನ ಹೆಸರು ಪ್ರಭ್​ಸಿಮ್ರಾನ್ ಸಿಂಗ್. ಡಿವೈ ಪಾಟೀಲ್ ಕಪ್​ನ ಗ್ರೂಪ್ ಸಿ ಪಂದ್ಯದಲ್ಲಿ ಸಿಎಜಿ ಹಾಗೂ ಇನ್​ಕಮ್ ಟ್ಯಾಕ್ಸ್​ ತಂಡಗಳು ಮುಖಾಮುಖಿಯಾಗಿತ್ತು.

2 / 6
ಈ ಪಂದ್ಯದಲ್ಲಿ ಸಿಎಜಿ ಪರ ಆರಂಭಿಕನಾಗಿ ಆಡಿದ ಪ್ರಭ್​ಸಿಮ್ರಾನ್ ಸಿಂಗ್ ಅಕ್ಷರಶಃ ಅಬ್ಬರಿಸಿದರು. ಐಟಿ ತಂಡ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಸಿಮ್ರಾನ್ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಸ್ಪೋಟಕ ಶತಕ ಮೂಡಿಬಂತು.

ಈ ಪಂದ್ಯದಲ್ಲಿ ಸಿಎಜಿ ಪರ ಆರಂಭಿಕನಾಗಿ ಆಡಿದ ಪ್ರಭ್​ಸಿಮ್ರಾನ್ ಸಿಂಗ್ ಅಕ್ಷರಶಃ ಅಬ್ಬರಿಸಿದರು. ಐಟಿ ತಂಡ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಸಿಮ್ರಾನ್ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಸ್ಪೋಟಕ ಶತಕ ಮೂಡಿಬಂತು.

3 / 6
ಭರ್ಜರಿ ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪ್ರಭ್​ಸಿಮ್ರಾನ್ 17 ಸಿಡಿಲಬ್ಬರದ ಸಿಕ್ಸ್ ಹಾಗೂ 9 ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 55 ಎಸೆತಗಳಲ್ಲಿ 161 ರನ್​ ಚಚ್ಚಿದರು. ಪರಿಣಾಮ ಸಿಎಜಿ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್​ ಕಲೆಹಾಕಿತು.

ಭರ್ಜರಿ ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪ್ರಭ್​ಸಿಮ್ರಾನ್ 17 ಸಿಡಿಲಬ್ಬರದ ಸಿಕ್ಸ್ ಹಾಗೂ 9 ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 55 ಎಸೆತಗಳಲ್ಲಿ 161 ರನ್​ ಚಚ್ಚಿದರು. ಪರಿಣಾಮ ಸಿಎಜಿ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್​ ಕಲೆಹಾಕಿತು.

4 / 6
268 ರನ್​ಗಳ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಐಟಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಜಿ ತಂಡವು 115 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ 161 ರನ್​ ಬಾರಿಸಿ ಮಿಂಚಿದ್ದ ಪ್ರಭ್​ಸಿಮ್ರಾನ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

268 ರನ್​ಗಳ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಐಟಿ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಜಿ ತಂಡವು 115 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ 161 ರನ್​ ಬಾರಿಸಿ ಮಿಂಚಿದ್ದ ಪ್ರಭ್​ಸಿಮ್ರಾನ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

5 / 6
ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿರುವ ಪ್ರಭ್​ಸಿಮ್ರಾನ್ ಸಿಂಗ್ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನ ಅಬ್ಬರಿಸುವ ಮೂಲಕ ಈ ಬಾರಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿರುವ ಪ್ರಭ್​ಸಿಮ್ರಾನ್ ಸಿಂಗ್ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನ ಅಬ್ಬರಿಸುವ ಮೂಲಕ ಈ ಬಾರಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

6 / 6
Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ