- Kannada News Photo gallery Cricket photos Prasidh Krishna gave big update regarding injury cricket news in kannada
Prasidh Krishna: ಇಂಜುರಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ; ಮತ್ತೆ ತಂಡಕ್ಕೆ ರೀ ಎಂಟ್ರಿ ಯಾವಾಗ?
Prasidh Krishna: ಭಾರತದ ಯುವ ಬೌಲರ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಳೆದ ಆರು ತಿಂಗಳಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಗಾಯದಿಂದಾಗಿ ಚೇತರಿಸಿಕೊಳ್ಳುತ್ತಿರುವ ಪ್ರಸಿದ್ಧ್, ಇದೀಗ ಯಾವಾಗ ಕ್ರಿಕೆಟ್ಗೆ ಮರಳಲಿದ್ದಾರೆ ಎಂಬುದರ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.
Updated on:Feb 16, 2023 | 5:45 PM

ಭಾರತದ ಯುವ ಬೌಲರ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಳೆದ ಆರು ತಿಂಗಳಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಗಾಯದಿಂದಾಗಿ ಚೇತರಿಸಿಕೊಳ್ಳುತ್ತಿರುವ ಪ್ರಸಿದ್ಧ್, ಇದೀಗ ಯಾವಾಗ ಕ್ರಿಕೆಟ್ಗೆ ಮರಳಲಿದ್ದಾರೆ ಎಂಬುದರ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರಸಿದ್ಧ್ ಕೃಷ್ಣ ಫೋಟೋವೊಂದನ್ನು ಹಂಚಿಕೊಂಡಿದ್ದು, ಆಸ್ಪತ್ರೆಯ ಬಟ್ಟೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವುದನ್ನು ಕಾಣಬಹುದಾಗಿದೆ. ಫೋಟೋ ಶೇರ್ ಮಾಡಿರುವ ಪ್ರಸಿದ್ಧ್, ‘ನಾನು ಕ್ರಿಕೆಟ್ನಿಂದ ಪಡೆದಕೊಂಡಿರುವ ವಿರಾಮದಿಂದಾಗಿ ತುಂಬಾ ದುಃಖಿತನಾಗಿದ್ದೇನೆ. ಶೀಘ್ರದಲ್ಲೇ ಆಟಕ್ಕೆ ಹಿಂತಿರುಗಲಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಪ್ರಸಿದ್ಧ್ ಕನಿಷ್ಠ 6 ತಿಂಗಳು ಅಥವಾ 1 ವರ್ಷದವರೆಗೆ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ 2023ರ ಏಕದಿನ ವಿಶ್ವಕಪ್ನಲ್ಲಿ ಪ್ರಸಿದ್ಧ್ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೆ, ಇದೀಗ ಕೃಷ್ಣ ಅವರು ಶೀಘ್ರದಲ್ಲೇ ಫಿಟ್ ಕಮ್ಬ್ಯಾಕ್ ಮಾಡುವ ಸಾಧ್ಯತೆಗಳಿವೆ ಎಂಬುದು ಅವರ ಫೋಟೋದಲ್ಲಿಯೇ ತಿಳಿದುಬರುತ್ತಿದೆ.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನ್ಯೂಜಿಲೆಂಡ್ ಎ ತಂಡದ ವಿರುದ್ಧ ಆಡಿದ 3 ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ ಗಾಯಗೊಂಡಿದ್ದರು. ಇದಾದ ಬಳಿಕ ಅವರ ಜಾಗಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

2021ರಲ್ಲಿ ಏಕದಿನ ಮಾದರಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟ ಪ್ರಸಿದ್ಧ್ ಕೃಷ್ಣ, ಇದುವರೆಗೆ 14 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 23.92 ಸರಾಸರಿಯಲ್ಲಿ 25 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ, ಐಪಿಎಲ್ನಲ್ಲಿಯೂ ಉತ್ತಮ ಪ್ರದರ್ಶನ ನೀಡಿರುವ ಪ್ರಸಿದ್ಧ್, ಇದುವರೆಗೆ 51 ಪಂದ್ಯಗಳಲ್ಲಿ 34.76 ಸರಾಸರಿಯಲ್ಲಿ ಒಟ್ಟು 49 ವಿಕೆಟ್ ಪಡೆದಿದ್ದಾರೆ.
Published On - 5:42 pm, Thu, 16 February 23




