AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಕನ್ನಡಿಗ

IPL 2025 Purple Cap List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್​-18ರ 36 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 9 ಬೌಲರ್​ಗಳು 10 ಕ್ಕಿಂತ ಅಧಿಕ ವಿಕೆಟ್ ಪಡೆದಿದ್ದಾರೆ. ಇವರಲ್ಲಿ ಐವರ ವಿಕೆಟ್​ಗಳ ಸಂಖ್ಯೆ 12 ಮುಟ್ಟಿದೆ. ಈ ಐವರಲ್ಲಿ ಕರ್ನಾಟಕದ ವೇಗ ಬೌಲರ್ ಕೂಡ ಇರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 20, 2025 | 1:55 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಮುಕ್ತಾಯಗೊಂಡಿದೆ. ಮೊದಲ ಸುತ್ತಿನ 7 ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಪಡೆದಿರುವುದು ಕನ್ನಡಿಗ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಮುಕ್ತಾಯಗೊಂಡಿದೆ. ಮೊದಲ ಸುತ್ತಿನ 7 ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಪಡೆದಿರುವುದು ಕನ್ನಡಿಗ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.

1 / 6
7 ಪಂದ್ಯಗಳಲ್ಲಿ 27 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್​ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ.

7 ಪಂದ್ಯಗಳಲ್ಲಿ 27 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್​ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ.

2 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3 / 6
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್​ಗಳನ್ನು ಎಸೆದಿರುವ ನೂರ್ ಅಹ್ಮದ್ 171 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್​ಗಳನ್ನು ಎಸೆದಿರುವ ನೂರ್ ಅಹ್ಮದ್ 171 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

4 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಝಲ್​ವುಡ್ ಕೂಡ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆರ್​ಸಿಬಿ ಪರ 7 ಪಂದ್ಯಗಳಲ್ಲಿ 24.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 203 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಝಲ್​ವುಡ್ ಕೂಡ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆರ್​ಸಿಬಿ ಪರ 7 ಪಂದ್ಯಗಳಲ್ಲಿ 24.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 203 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

5 / 6
ಐದನೇ ಸ್ಥಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿರುವ ಶಾರ್ದೂಲ್ ಠಾಕೂರ್ ಇದ್ದಾರೆ. 8 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಶಾರ್ದೂಲ್ ಒಟ್ಟು 308 ರನ್ ಬಿಟ್ಟು ಕೊಡುವ ಮೂಲಕ 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

ಐದನೇ ಸ್ಥಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿರುವ ಶಾರ್ದೂಲ್ ಠಾಕೂರ್ ಇದ್ದಾರೆ. 8 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಶಾರ್ದೂಲ್ ಒಟ್ಟು 308 ರನ್ ಬಿಟ್ಟು ಕೊಡುವ ಮೂಲಕ 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ