AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಇಂಗ್ಲೆಂಡ್​ನಲ್ಲಿ 23 ವಿಕೆಟ್ ಉರುಳಿಸಿ 12 ಸ್ಥಾನ ಮೇಲೇರಿದ ಮೊಹಮ್ಮದ್ ಸಿರಾಜ್

ICC Test Rankings: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ಅವರಿಗೆ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭರ್ಜರಿ ಏರಿಕೆ ದೊರೆತಿದೆ. 23 ವಿಕೆಟ್‌ಗಳೊಂದಿಗೆ ಸರಣಿಯನ್ನು ಮುಗಿಸಿರುವ ಸಿರಾಜ್ 12 ಸ್ಥಾನಗಳನ್ನು ಏರಿ 15ನೇ ಸ್ಥಾನಕ್ಕೆ ತಲುಪಿದ್ದಾರೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ಶ್ರೇಯಾಂಕದಲ್ಲಿ ಸುಧಾರಣೆ ಕಂಡಿದ್ದಾರೆ. ಇದು ಇಬ್ಬರೂ ಆಟಗಾರರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಶ್ರೇಯಾಂಕವಾಗಿದೆ.

ಪೃಥ್ವಿಶಂಕರ
|

Updated on: Aug 06, 2025 | 6:12 PM

Share
ಇಂಗ್ಲೆಂಡ್‌ ಪ್ರವಾಸದಲ್ಲಿ ತನ್ನ ಮಾರಕ ದಾಳಿಯ ಮೂಲಕವೇ ಸಂಚಲನ ಮೂಡಿಸಿದ್ದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ಇದೀಗ ಐಸಿಸಿ ಕೂಡ ಟೆಸ್ಟ್ ಬೌಲರ್​ಗಳ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ನೀಡಿದೆ. 23 ವಿಕೆಟ್​ಗಳೊಂದಿಗೆ ಆಂಗ್ಲ ಪ್ರವಾಸವನ್ನು ಮುಗಿಸಿರುವ ಸಿರಾಜ್ ಇದೀಗ ಐಸಿಸಿ ರ್ಯಾಂಕಿಂಗ್​ನಲ್ಲಿ ಬರೋಬ್ಬರಿ 12 ಸ್ಥಾನ ಮೇಲೇರಿದ್ದಾರೆ.

ಇಂಗ್ಲೆಂಡ್‌ ಪ್ರವಾಸದಲ್ಲಿ ತನ್ನ ಮಾರಕ ದಾಳಿಯ ಮೂಲಕವೇ ಸಂಚಲನ ಮೂಡಿಸಿದ್ದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ಇದೀಗ ಐಸಿಸಿ ಕೂಡ ಟೆಸ್ಟ್ ಬೌಲರ್​ಗಳ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ನೀಡಿದೆ. 23 ವಿಕೆಟ್​ಗಳೊಂದಿಗೆ ಆಂಗ್ಲ ಪ್ರವಾಸವನ್ನು ಮುಗಿಸಿರುವ ಸಿರಾಜ್ ಇದೀಗ ಐಸಿಸಿ ರ್ಯಾಂಕಿಂಗ್​ನಲ್ಲಿ ಬರೋಬ್ಬರಿ 12 ಸ್ಥಾನ ಮೇಲೇರಿದ್ದಾರೆ.

1 / 6
ಲೀಡ್ಸ್‌ ಟೆಸ್ಟ್​​ನಿಂದ ಆರಂಭವಾದ ಟೀಂ ಇಂಡಿಯಾದ ಇಂಗ್ಲೆಂಡ್‌ ಪ್ರವಾಸ ಓವಲ್ ಟೆಸ್ಟ್ ಪಂದ್ಯದೊಂದಿಗೆ ಮುಕ್ತಾಯವಾಯಿತು. ಈ ಪ್ರವಾಸದಲ್ಲಿ ನಡೆದ ಐದಕ್ಕೆ ಐದು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ಆಡಿದ ಏಕೈಕ ವೇಗದ ಬೌಲರ್ ಎಂದರೇ ಅದು ಮೊಹಮ್ಮದ್ ಸಿರಾಜ್. ಅದರಲ್ಲೂ ಬುಮ್ರಾ ಅನುಪಸ್ಥಿತಿಯಲ್ಲಿ ತಂಡದ ವೇಗದ ದಾಳಿಯನ್ನು ಸಿರಾಜ್ ಅಚ್ಚುಕಟ್ಟಾಗಿ ಮುನ್ನಡೆಸಿದರು.

ಲೀಡ್ಸ್‌ ಟೆಸ್ಟ್​​ನಿಂದ ಆರಂಭವಾದ ಟೀಂ ಇಂಡಿಯಾದ ಇಂಗ್ಲೆಂಡ್‌ ಪ್ರವಾಸ ಓವಲ್ ಟೆಸ್ಟ್ ಪಂದ್ಯದೊಂದಿಗೆ ಮುಕ್ತಾಯವಾಯಿತು. ಈ ಪ್ರವಾಸದಲ್ಲಿ ನಡೆದ ಐದಕ್ಕೆ ಐದು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ಆಡಿದ ಏಕೈಕ ವೇಗದ ಬೌಲರ್ ಎಂದರೇ ಅದು ಮೊಹಮ್ಮದ್ ಸಿರಾಜ್. ಅದರಲ್ಲೂ ಬುಮ್ರಾ ಅನುಪಸ್ಥಿತಿಯಲ್ಲಿ ತಂಡದ ವೇಗದ ದಾಳಿಯನ್ನು ಸಿರಾಜ್ ಅಚ್ಚುಕಟ್ಟಾಗಿ ಮುನ್ನಡೆಸಿದರು.

2 / 6
ಸರಣಿಯಲ್ಲಿ 23 ವಿಕೆಟ್ ಉರುಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿರುವ ಸಿರಾಜ್ ಇದೀಗ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿಯೂ ದೊಡ್ಡ ಜಿಗಿತವನ್ನು ಮಾಡಿದ್ದಾರೆ. ಸಿರಾಜ್ ಜೊತೆಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಶ್ರೇಯಾಂಕವೂ ಸಹ ಸುಧಾರಿಸಿದೆ.

ಸರಣಿಯಲ್ಲಿ 23 ವಿಕೆಟ್ ಉರುಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿರುವ ಸಿರಾಜ್ ಇದೀಗ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿಯೂ ದೊಡ್ಡ ಜಿಗಿತವನ್ನು ಮಾಡಿದ್ದಾರೆ. ಸಿರಾಜ್ ಜೊತೆಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಶ್ರೇಯಾಂಕವೂ ಸಹ ಸುಧಾರಿಸಿದೆ.

3 / 6
ಐದನೇ ಟೆಸ್ಟ್ ಪಂದ್ಯದಲ್ಲಿ ಒಟ್ಟಾರೆ 9 ವಿಕೆಟ್ ಉರುಳಿಸಿದ ಮೊಹಮ್ಮದ್ ಸಿರಾಜ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಈ ಮೂಲಕ ಐಸಿಸಿ ಪುರುಷರ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ 674 ಅಂಕಗಳನ್ನು ಹೊಂದಿರುವ ಸಿರಾಜ್, ಬರೋಬ್ಬರಿ 12 ಸ್ಥಾನಗಳನ್ನು ಮೇಲೇರುವುದರೊಂದಿಗೆ 15 ನೇ ಸ್ಥಾನವನ್ನು ತಲುಪಿದ್ದಾರೆ.

ಐದನೇ ಟೆಸ್ಟ್ ಪಂದ್ಯದಲ್ಲಿ ಒಟ್ಟಾರೆ 9 ವಿಕೆಟ್ ಉರುಳಿಸಿದ ಮೊಹಮ್ಮದ್ ಸಿರಾಜ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಈ ಮೂಲಕ ಐಸಿಸಿ ಪುರುಷರ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ 674 ಅಂಕಗಳನ್ನು ಹೊಂದಿರುವ ಸಿರಾಜ್, ಬರೋಬ್ಬರಿ 12 ಸ್ಥಾನಗಳನ್ನು ಮೇಲೇರುವುದರೊಂದಿಗೆ 15 ನೇ ಸ್ಥಾನವನ್ನು ತಲುಪಿದ್ದಾರೆ.

4 / 6
ಸಿರಾಜ್ ಜೊತೆಗೆ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವ ಕೆಲಸ ಮಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ರ್ಯಾಂಕಿಂಗ್​ನಲ್ಲಿ ಸುಧಾರಣೆ ಕಂಡಿದ್ದಾರೆ. ಈ ಹಿಂದೆ 84 ನೇ ಸ್ಥಾನದಲ್ಲಿದ್ದ ಪ್ರಸಿದ್ಧ್ ಕೃಷ್ಣ ಈಗ 59 ನೇ ಸ್ಥಾನವನ್ನು ತಲುಪಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಇಬ್ಬರೂ ಆಟಗಾರರ ಅತ್ಯುತ್ತಮ ಶ್ರೇಯಾಂಕವಾಗಿದೆ.

ಸಿರಾಜ್ ಜೊತೆಗೆ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವ ಕೆಲಸ ಮಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ರ್ಯಾಂಕಿಂಗ್​ನಲ್ಲಿ ಸುಧಾರಣೆ ಕಂಡಿದ್ದಾರೆ. ಈ ಹಿಂದೆ 84 ನೇ ಸ್ಥಾನದಲ್ಲಿದ್ದ ಪ್ರಸಿದ್ಧ್ ಕೃಷ್ಣ ಈಗ 59 ನೇ ಸ್ಥಾನವನ್ನು ತಲುಪಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಇಬ್ಬರೂ ಆಟಗಾರರ ಅತ್ಯುತ್ತಮ ಶ್ರೇಯಾಂಕವಾಗಿದೆ.

5 / 6
ಉಳಿದಂತೆ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ಜಸ್ಪ್ರಿತ್ ಬುಮ್ರಾ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಎರಡನೇ ಸ್ಥಾನದಲ್ಲಿದ್ದಾರೆ. ಇವರ ಜೊತೆಗೆ ಇಂಗ್ಲೆಂಡ್‌ನ ವೇಗಿ ಗಸ್ ಅಟ್ಕಿನ್ಸನ್ ಓವಲ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳನ್ನು ಕಬಳಿಸಿ ಮೊದಲ ಬಾರಿಗೆ ಟಾಪ್ 10 ರಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಹಾಗೆಯೇ ಜೋಶ್ ಟಂಗ್ ಕೂಡ ಎಂಟು ವಿಕೆಟ್‌ಗಳನ್ನು ಕಬಳಿಸಿ ಈಗ 46 ನೇ ಸ್ಥಾನಕ್ಕೆ ತಲುಪಿದ್ದಾರೆ.

ಉಳಿದಂತೆ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ಜಸ್ಪ್ರಿತ್ ಬುಮ್ರಾ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಎರಡನೇ ಸ್ಥಾನದಲ್ಲಿದ್ದಾರೆ. ಇವರ ಜೊತೆಗೆ ಇಂಗ್ಲೆಂಡ್‌ನ ವೇಗಿ ಗಸ್ ಅಟ್ಕಿನ್ಸನ್ ಓವಲ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳನ್ನು ಕಬಳಿಸಿ ಮೊದಲ ಬಾರಿಗೆ ಟಾಪ್ 10 ರಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಹಾಗೆಯೇ ಜೋಶ್ ಟಂಗ್ ಕೂಡ ಎಂಟು ವಿಕೆಟ್‌ಗಳನ್ನು ಕಬಳಿಸಿ ಈಗ 46 ನೇ ಸ್ಥಾನಕ್ಕೆ ತಲುಪಿದ್ದಾರೆ.

6 / 6
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು