AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಓವರ್‌ಗಳಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪ್ರಸಿದ್ಧ್ ಕೃಷ್ಣ

India vs England 2nd Test: ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 407 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ ಇಂಗ್ಲೆಂಡ್ ತಂಡವು ಕೊನೆಯ ಇನಿಂಗ್ಸ್​ನಲ್ಲಿ 608 ರನ್​ಗಳ ಗುರಿ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 06, 2025 | 11:05 AM

Share
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಮುಕ್ತಾಯದ ವೇಳೆ ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಒಟ್ಟು 16 ಓವರ್​ಗಳನ್ನು ಎಸೆದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 13 ಓವರ್ ಬೌಲಿಂಗ್ ಮಾಡಿದ್ದ ಪ್ರಸಿದ್ಧ್, ದ್ವಿತೀಯ ಇನಿಂಗ್ಸ್​ನಲ್ಲಿ 3 ಓವರ್​ಗಳನ್ನು ಎಸೆದಿದ್ದಾರೆ.

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಮುಕ್ತಾಯದ ವೇಳೆ ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಒಟ್ಟು 16 ಓವರ್​ಗಳನ್ನು ಎಸೆದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 13 ಓವರ್ ಬೌಲಿಂಗ್ ಮಾಡಿದ್ದ ಪ್ರಸಿದ್ಧ್, ದ್ವಿತೀಯ ಇನಿಂಗ್ಸ್​ನಲ್ಲಿ 3 ಓವರ್​ಗಳನ್ನು ಎಸೆದಿದ್ದಾರೆ.

1 / 6
ಈ 16 ಓವರ್​ಗಳೊಂದಿಗೆ ಪ್ರಸಿದ್ಧ್ ಕೃಷ್ಣ ಟೆಸ್ಟ್ ಕ್ರಿಕೆಟ್​ನಲ್ಲಿ 100 ಓವರ್​ಗಳನ್ನು ಪೂರೈಸಿದ್ದಾರೆ. ಈವರೆಗೆ 5 ಟೆಸ್ಟ್ ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ವೇಗಿ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಎಸೆದಿರುವುದು ಬರೋಬ್ಬರಿ 636 ಎಸೆತಗಳು. ಅಂದರೆ 106 ಓವರ್​ಗಳು. ಈ ಮೂಲಕ ನೀಡಿರುವುದು ಬರೋಬ್ಬರಿ 535 ರನ್​ಗಳು.

ಈ 16 ಓವರ್​ಗಳೊಂದಿಗೆ ಪ್ರಸಿದ್ಧ್ ಕೃಷ್ಣ ಟೆಸ್ಟ್ ಕ್ರಿಕೆಟ್​ನಲ್ಲಿ 100 ಓವರ್​ಗಳನ್ನು ಪೂರೈಸಿದ್ದಾರೆ. ಈವರೆಗೆ 5 ಟೆಸ್ಟ್ ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ವೇಗಿ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಎಸೆದಿರುವುದು ಬರೋಬ್ಬರಿ 636 ಎಸೆತಗಳು. ಅಂದರೆ 106 ಓವರ್​ಗಳು. ಈ ಮೂಲಕ ನೀಡಿರುವುದು ಬರೋಬ್ಬರಿ 535 ರನ್​ಗಳು.

2 / 6
ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಮೊದಲ 100 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎಂಬ ಕಳಪೆ ದಾಖಲೆಯೊಂದು ಪ್ರಸಿದ್ಧ್ ಕೃಷ್ಣ ಪಾಲಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಇದ್ದದ್ದು ಟೀಮ್ ಇಂಡಿಯಾದ ಮಾಜಿ ವೇಗಿಯ ಹೆಸರಿನಲ್ಲಿ ಎಂಬುದು ವಿಶೇಷ. 

ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಮೊದಲ 100 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎಂಬ ಕಳಪೆ ದಾಖಲೆಯೊಂದು ಪ್ರಸಿದ್ಧ್ ಕೃಷ್ಣ ಪಾಲಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಇದ್ದದ್ದು ಟೀಮ್ ಇಂಡಿಯಾದ ಮಾಜಿ ವೇಗಿಯ ಹೆಸರಿನಲ್ಲಿ ಎಂಬುದು ವಿಶೇಷ. 

3 / 6
ಭಾರತದ ಪರ 9 ಟೆಸ್ಟ್ ಪಂದ್ಯಗಳನ್ನಾಡಿರುವ ವರುಣ್ ಆರೋನ್ ಮೊದಲ 100 ಓವರ್​ಗಳಲ್ಲಿ 480 ರನ್​ಗಳನ್ನು ನೀಡಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಆರಂಭಿಕ ನೂರು ಓವರ್​ಗಳಲ್ಲಿ ಅತೀ ಹೆಚ್ಚು ರನ್ ನೀಡಿದ ಬೌಲರ್ ಎಂಬ ಕಳಪೆ ದಾಖಲೆಯನ್ನು ವರುಣ್ ನಿರ್ಮಿಸಿದ್ದರು.

ಭಾರತದ ಪರ 9 ಟೆಸ್ಟ್ ಪಂದ್ಯಗಳನ್ನಾಡಿರುವ ವರುಣ್ ಆರೋನ್ ಮೊದಲ 100 ಓವರ್​ಗಳಲ್ಲಿ 480 ರನ್​ಗಳನ್ನು ನೀಡಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಆರಂಭಿಕ ನೂರು ಓವರ್​ಗಳಲ್ಲಿ ಅತೀ ಹೆಚ್ಚು ರನ್ ನೀಡಿದ ಬೌಲರ್ ಎಂಬ ಕಳಪೆ ದಾಖಲೆಯನ್ನು ವರುಣ್ ನಿರ್ಮಿಸಿದ್ದರು.

4 / 6
ಇದೀಗ ಈ ದಾಖಲೆಯನ್ನು ಪ್ರಸಿದ್ಧ್ ಕೃಷ್ಣ ಮುರಿದಿದ್ದಾರೆ. ಅದು ಕೂಡ 100 ಓವರ್​ಗಳಲ್ಲಿ ಬರೋಬ್ಬರಿ 510 ರನ್​ಗಳನ್ನು ನೀಡುವ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸಿದ್ಧ್ ತನ್ನ ಟೆಸ್ಟ್ ಕೆರಿಯರ್​ನ ಮೊದಲ 600 ಎಸೆತಗಳಲ್ಲಿ 510 ರನ್​ಗಳನ್ನು ನೀಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 100 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಪ್ರಸಿದ್ಧ್ ಕೃಷ್ಣ ಮುರಿದಿದ್ದಾರೆ. ಅದು ಕೂಡ 100 ಓವರ್​ಗಳಲ್ಲಿ ಬರೋಬ್ಬರಿ 510 ರನ್​ಗಳನ್ನು ನೀಡುವ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸಿದ್ಧ್ ತನ್ನ ಟೆಸ್ಟ್ ಕೆರಿಯರ್​ನ ಮೊದಲ 600 ಎಸೆತಗಳಲ್ಲಿ 510 ರನ್​ಗಳನ್ನು ನೀಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 100 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು 5 ಟೆಸ್ಟ್ ಪಂದ್ಯಗಳ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಪ್ರಸಿದ್ಧ್ ಕೃಷ್ಣ ಈವರೆಗೆ 13 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಆದರೆ ಈ ವೇಳೆ ಪ್ರತಿ ಓವರ್​ಗೆ 5.05 ಸರಾಸರಿಯಲ್ಲಿ ರನ್ ನೀಡಿದ್ದಾರೆ. ಹೀಗಾಗಿ ಎಡ್ಜ್​ಬಾಸ್ಟನ್ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಉತ್ತಮ ಬೌಲಿಂಗ್ ಸಂಘಟಿಸದಿದ್ದರೆ ಮುಂದಿನ ಪಂದ್ಯದಿಂದ ಹೊರಬೀಳುವುದು ಖಚಿತ ಎನ್ನಬಹುದು.

ಇನ್ನು 5 ಟೆಸ್ಟ್ ಪಂದ್ಯಗಳ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಪ್ರಸಿದ್ಧ್ ಕೃಷ್ಣ ಈವರೆಗೆ 13 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಆದರೆ ಈ ವೇಳೆ ಪ್ರತಿ ಓವರ್​ಗೆ 5.05 ಸರಾಸರಿಯಲ್ಲಿ ರನ್ ನೀಡಿದ್ದಾರೆ. ಹೀಗಾಗಿ ಎಡ್ಜ್​ಬಾಸ್ಟನ್ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಉತ್ತಮ ಬೌಲಿಂಗ್ ಸಂಘಟಿಸದಿದ್ದರೆ ಮುಂದಿನ ಪಂದ್ಯದಿಂದ ಹೊರಬೀಳುವುದು ಖಚಿತ ಎನ್ನಬಹುದು.

6 / 6
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ