AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್​ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

PSL 2025: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯ ಭಾಗವಾಗಿ ಪಾಕ್​ನಲ್ಲಿನ 9 ಸ್ಥಳಗಳ ಮೇಲೆ ಇಂಡಿಯನ್ ಆರ್ಮಿ ವಾಯು ದಾಳಿ ನಡೆಸಿದೆ. ಈ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿರುವ ವಿದೇಶಿ ಆಟಗಾರರು ಆತಂಕಕ್ಕೊಳಗಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 08, 2025 | 11:54 AM

Share
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2025) ಭಾಗವಹಿಸಿರುವ ವಿದೇಶಿ ಆಟಗಾರರಿಗೆ ಆತಂಕ ಶುರುವಾಗಿದೆ. ಅದರಲ್ಲೂ ಪಾಕ್ ಮೇಲೆ ಭಾರತ ಯುದ್ಧ ಘೋಷಿಸಲಿದೆಯಾ ಎಂಬ ಟೆನ್ಶನ್​ನಲ್ಲಿದ್ದಾರೆ ಪಿಎಸ್​ಎಲ್​ನ ಫಾರಿನ್ ಪ್ಲೇಯರ್ಸ್.

ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2025) ಭಾಗವಹಿಸಿರುವ ವಿದೇಶಿ ಆಟಗಾರರಿಗೆ ಆತಂಕ ಶುರುವಾಗಿದೆ. ಅದರಲ್ಲೂ ಪಾಕ್ ಮೇಲೆ ಭಾರತ ಯುದ್ಧ ಘೋಷಿಸಲಿದೆಯಾ ಎಂಬ ಟೆನ್ಶನ್​ನಲ್ಲಿದ್ದಾರೆ ಪಿಎಸ್​ಎಲ್​ನ ಫಾರಿನ್ ಪ್ಲೇಯರ್ಸ್.

1 / 6
ಇದರ ನಡುವೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿರುವ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್​, ಭಾರತ ಮತ್ತು ಪಾಕಿಸ್ತಾನ್ ನಡುವಣ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ಇದರ ನಡುವೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿರುವ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್​, ಭಾರತ ಮತ್ತು ಪಾಕಿಸ್ತಾನ್ ನಡುವಣ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

2 / 6
ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸ್ಯಾಮ್ ಬಿಲ್ಲಿಂಗ್ ಲಾಹೋರ್ ಖಲಂದರ್ಸ್ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ.  ಇದೀಗ ಬಿಲ್ಲಿಂಗ್ಸ್ ಸೇರಿದಂತೆ ಇಂಗ್ಲೆಂಡ್​ನ ಹಲವು ಆಟಗಾರರು ಅರ್ಧದಲ್ಲೇ ಟೂರ್ನಿ ತೊರೆಯುವ ಬಗ್ಗೆ ಪಿಎಸ್​​ಎಲ್ ಆಯೋಜಕರೊಂದಿಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸ್ಯಾಮ್ ಬಿಲ್ಲಿಂಗ್ ಲಾಹೋರ್ ಖಲಂದರ್ಸ್ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ.  ಇದೀಗ ಬಿಲ್ಲಿಂಗ್ಸ್ ಸೇರಿದಂತೆ ಇಂಗ್ಲೆಂಡ್​ನ ಹಲವು ಆಟಗಾರರು ಅರ್ಧದಲ್ಲೇ ಟೂರ್ನಿ ತೊರೆಯುವ ಬಗ್ಗೆ ಪಿಎಸ್​​ಎಲ್ ಆಯೋಜಕರೊಂದಿಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

3 / 6
ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇಂಗ್ಲೆಂಡ್​ನ ಜೇಮ್ಸ್ ವಿನ್ಸ್, ಟಾಮ್ ಕರನ್, ಸ್ಯಾಮ್ ಬಿಲ್ಲಿಂಗ್ಸ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಲ್ಯೂಕ್ ವುಡ್ ಮತ್ತು ಟಾಮ್ ಕೊಹ್ಲರ್-ಕ್ಯಾಡ್ಮೋರ್ ಕಾಣಿಸಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆ ಈ ಆಟಗಾರರು ತವರಿಗೆ ವಾಪಾಸಾಗುವ ಸಾಧ್ಯತೆ ಹೆಚ್ಚಿದೆ.

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇಂಗ್ಲೆಂಡ್​ನ ಜೇಮ್ಸ್ ವಿನ್ಸ್, ಟಾಮ್ ಕರನ್, ಸ್ಯಾಮ್ ಬಿಲ್ಲಿಂಗ್ಸ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಲ್ಯೂಕ್ ವುಡ್ ಮತ್ತು ಟಾಮ್ ಕೊಹ್ಲರ್-ಕ್ಯಾಡ್ಮೋರ್ ಕಾಣಿಸಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆ ಈ ಆಟಗಾರರು ತವರಿಗೆ ವಾಪಾಸಾಗುವ ಸಾಧ್ಯತೆ ಹೆಚ್ಚಿದೆ.

4 / 6
ಅಂದಹಾಗೆ ಸ್ಯಾಮ್ ಬಿಲ್ಲಿಂಗ್ ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 27 ಇನಿಂಗ್ಸ್ ಆಡಿದ್ದ ಬಿಲ್ಲಿಂಗ್ಸ್ 3 ಅರ್ಧಶತಕಗಳೊಂದಿಗೆ ಒಟ್ಟು 503 ರನ್ ಕಲೆಹಾಕಿದ್ದರು.

ಅಂದಹಾಗೆ ಸ್ಯಾಮ್ ಬಿಲ್ಲಿಂಗ್ ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 27 ಇನಿಂಗ್ಸ್ ಆಡಿದ್ದ ಬಿಲ್ಲಿಂಗ್ಸ್ 3 ಅರ್ಧಶತಕಗಳೊಂದಿಗೆ ಒಟ್ಟು 503 ರನ್ ಕಲೆಹಾಕಿದ್ದರು.

5 / 6
ಆದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದಿರುವ ಕಾರಣ ಅವರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದರು. ಇದೀಗ ಯುದ್ಧದ ಭೀತಿ ಹಿನ್ನಲೆಯಲ್ಲಿ ಉಭಯ ದೇಶಗಳ ಪರಿಸ್ಥಿತಿಯು ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಸ್ಯಾಮ್ ಬಿಲ್ಲಿಂಗ್ಸ್ ತಿಳಿಸಿದ್ದಾರೆ.

ಆದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದಿರುವ ಕಾರಣ ಅವರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದರು. ಇದೀಗ ಯುದ್ಧದ ಭೀತಿ ಹಿನ್ನಲೆಯಲ್ಲಿ ಉಭಯ ದೇಶಗಳ ಪರಿಸ್ಥಿತಿಯು ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಸ್ಯಾಮ್ ಬಿಲ್ಲಿಂಗ್ಸ್ ತಿಳಿಸಿದ್ದಾರೆ.

6 / 6
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್