AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಫಾರ್ಮ್​ನಿಂದ ಹೊರಬರಲು ವಿರಾಟ್ ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಪ್ರೇಮಾನಂದ ಮಹಾರಾಜ್

Virat Kohli: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ ಕೇವಲ 190 ರನ್​ ಮಾತ್ರ ಕಲೆಹಾಕಿದ್ದರು. ಈ ಕಳಪೆಯಾಟದ ಬೆನ್ನಲ್ಲೇ ಇದೀಗ ಕಿಂಗ್ ಕೊಹ್ಲಿ ಆಧ್ಯಾತ್ಮಿಕ ಗುರೂಜಿಯನ್ನು ಭೇಟಿಯಾಗಿದ್ದಾರೆ. 2023 ರಲ್ಲಿ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾದ ಬಳಿಕ ಕೊಹ್ಲಿ ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ್ದರು. ಹೀಗಾಗಿ 2025 ರಲ್ಲಿ ಕೊಹ್ಲಿ ಮತ್ತೆ ಫಾರ್ಮ್​ ಕಂಡುಕೊಳ್ಳುವ ನಿರೀಕ್ಷೆಯಿದೆ.

ಝಾಹಿರ್ ಯೂಸುಫ್
|

Updated on:Jan 11, 2025 | 10:57 AM

Share
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಶುಕ್ರವಾರ (ಜ.10) ಉತ್ತರದ ಪ್ರದೇಶದ ವೃಂದಾವನದಲ್ಲಿರುವ ಪ್ರೇಮಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯ ವೇಳೆ ಆಶೀರ್ವಾದ ಪಡೆದ ಕೊಹ್ಲಿಗೆ ಗುರೂಜಿ ಕೆಲ ವಿಶೇಷ ಸಲಹೆಗಳನ್ನು ನೀಡಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಶುಕ್ರವಾರ (ಜ.10) ಉತ್ತರದ ಪ್ರದೇಶದ ವೃಂದಾವನದಲ್ಲಿರುವ ಪ್ರೇಮಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯ ವೇಳೆ ಆಶೀರ್ವಾದ ಪಡೆದ ಕೊಹ್ಲಿಗೆ ಗುರೂಜಿ ಕೆಲ ವಿಶೇಷ ಸಲಹೆಗಳನ್ನು ನೀಡಿದ್ದಾರೆ.

1 / 5
ವಿರುಷ್ಕಾ ಜೋಡಿಯ ಭೇಟಿಗೆ ಸಂತೋಷ ವ್ಯಕ್ತಪಡಿಸಿದ ಪ್ರೇಮಾನಂದ ಜಿ ಮಹಾರಾಜ್, ಯಶಸ್ಸಿನ ಉತ್ತುಂಗಕ್ಕೇರಿದರೂ ನೀವಿಬ್ಬರೂ ಆಧ್ಯಾತ್ಮಿಕತೆಯತ್ತ ಮುಖ ಮಾಡುತ್ತಿರುವುದು ದೊಡ್ಡ ವಿಷಯ ಎಂದರು. ಅಲ್ಲದೆ ಕಳಪೆ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿಯನ್ನು ಸಂತೈಸುವ ಮಾತುಗಳನ್ನಾಡಿದರು.

ವಿರುಷ್ಕಾ ಜೋಡಿಯ ಭೇಟಿಗೆ ಸಂತೋಷ ವ್ಯಕ್ತಪಡಿಸಿದ ಪ್ರೇಮಾನಂದ ಜಿ ಮಹಾರಾಜ್, ಯಶಸ್ಸಿನ ಉತ್ತುಂಗಕ್ಕೇರಿದರೂ ನೀವಿಬ್ಬರೂ ಆಧ್ಯಾತ್ಮಿಕತೆಯತ್ತ ಮುಖ ಮಾಡುತ್ತಿರುವುದು ದೊಡ್ಡ ವಿಷಯ ಎಂದರು. ಅಲ್ಲದೆ ಕಳಪೆ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿಯನ್ನು ಸಂತೈಸುವ ಮಾತುಗಳನ್ನಾಡಿದರು.

2 / 5
ಕ್ರಿಕೆಟ್ ಕೂಡ ಆಧ್ಯಾತ್ಮಿಕ ಅಭ್ಯಾಸ ಎಂದು ಬಣ್ಣಿಸಿದ ಪ್ರೇಮಾನಂದ ಜಿ ಮಹಾರಾಜ್, ಅಭ್ಯಾಸ ನಡೆಸುವುದನ್ನು ಎಂದಿಗೂ ಬಿಡಬಾರದು ಎಂದರು. ಅಲ್ಲದೆ ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನೀವೇನು ಸಾಧಿಸಬೇಕೆಂದು ಬಯಸುತ್ತಿರೋ ಅದನ್ನು ಮುಟ್ಟಬಹುದು ಎಂದು ಆಶೀರ್ವಾದ ಮಾಡಿದರು.

ಕ್ರಿಕೆಟ್ ಕೂಡ ಆಧ್ಯಾತ್ಮಿಕ ಅಭ್ಯಾಸ ಎಂದು ಬಣ್ಣಿಸಿದ ಪ್ರೇಮಾನಂದ ಜಿ ಮಹಾರಾಜ್, ಅಭ್ಯಾಸ ನಡೆಸುವುದನ್ನು ಎಂದಿಗೂ ಬಿಡಬಾರದು ಎಂದರು. ಅಲ್ಲದೆ ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನೀವೇನು ಸಾಧಿಸಬೇಕೆಂದು ಬಯಸುತ್ತಿರೋ ಅದನ್ನು ಮುಟ್ಟಬಹುದು ಎಂದು ಆಶೀರ್ವಾದ ಮಾಡಿದರು.

3 / 5
ಅಭ್ಯಾಸವನ್ನು ಬಲಪಡಿಸುವುದು ನಿಮ್ಮ ಕರ್ತವ್ಯ. ಅದು ಕ್ರೀಡೆಯಾಗಿದ್ದರೂ, ನಿಮ್ಮ ಆಟದಿಂದ ಇಡೀ ಭಾರತ ಸಂತೋಷಪಡುತ್ತದೆ. ಹೀಗಾಗಿ ನಿಮ್ಮ ಅಭ್ಯಾಸದಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದರ ಜತೆ ದೇವರ ಸ್ಮರಣೆ ಕೂಡ ಇರಲಿ. ಇದುವೇ ನಿಮ್ಮ ಸಾಧನ ಎಂದು ವಿರಾಟ್ ಕೊಹ್ಲಿಗೆ ಪ್ರೇಮಾನಂದ ಜಿ ಮಹಾರಾಜ್ ತಿಳಿಸಿದರು. ಈ ಮೂಲಕ ಕಳಪೆ ಫಾರ್ಮ್​ನಿಂದ ಮರಳಲು ಕಠಿಣ ಅಭ್ಯಾಸವೇ ಮೂಲಮಂತ್ರ ಎಂಬುದನ್ನು ಒತ್ತಿ ಹೇಳಿದರು.

ಅಭ್ಯಾಸವನ್ನು ಬಲಪಡಿಸುವುದು ನಿಮ್ಮ ಕರ್ತವ್ಯ. ಅದು ಕ್ರೀಡೆಯಾಗಿದ್ದರೂ, ನಿಮ್ಮ ಆಟದಿಂದ ಇಡೀ ಭಾರತ ಸಂತೋಷಪಡುತ್ತದೆ. ಹೀಗಾಗಿ ನಿಮ್ಮ ಅಭ್ಯಾಸದಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದರ ಜತೆ ದೇವರ ಸ್ಮರಣೆ ಕೂಡ ಇರಲಿ. ಇದುವೇ ನಿಮ್ಮ ಸಾಧನ ಎಂದು ವಿರಾಟ್ ಕೊಹ್ಲಿಗೆ ಪ್ರೇಮಾನಂದ ಜಿ ಮಹಾರಾಜ್ ತಿಳಿಸಿದರು. ಈ ಮೂಲಕ ಕಳಪೆ ಫಾರ್ಮ್​ನಿಂದ ಮರಳಲು ಕಠಿಣ ಅಭ್ಯಾಸವೇ ಮೂಲಮಂತ್ರ ಎಂಬುದನ್ನು ಒತ್ತಿ ಹೇಳಿದರು.

4 / 5
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಸರಣಿ ಮುಕ್ತಾಯದ ಬೆನ್ನಲ್ಲೇ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾಗಿರುವುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಗುರೂಜಿಯನ್ನು ಭೇಟಿಯಾದ ಬಳಿಕ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಿಂಗ್ ಕೊಹ್ಲಿ ಕಡೆಯಿಂದ ಭರ್ಜರಿ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಸರಣಿ ಮುಕ್ತಾಯದ ಬೆನ್ನಲ್ಲೇ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾಗಿರುವುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಗುರೂಜಿಯನ್ನು ಭೇಟಿಯಾದ ಬಳಿಕ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಿಂಗ್ ಕೊಹ್ಲಿ ಕಡೆಯಿಂದ ಭರ್ಜರಿ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

5 / 5

Published On - 10:30 am, Sat, 11 January 25

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ