AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಫಾರ್ಮ್​ನಿಂದ ಹೊರಬರಲು ವಿರಾಟ್ ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಪ್ರೇಮಾನಂದ ಮಹಾರಾಜ್

Virat Kohli: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ ಕೇವಲ 190 ರನ್​ ಮಾತ್ರ ಕಲೆಹಾಕಿದ್ದರು. ಈ ಕಳಪೆಯಾಟದ ಬೆನ್ನಲ್ಲೇ ಇದೀಗ ಕಿಂಗ್ ಕೊಹ್ಲಿ ಆಧ್ಯಾತ್ಮಿಕ ಗುರೂಜಿಯನ್ನು ಭೇಟಿಯಾಗಿದ್ದಾರೆ. 2023 ರಲ್ಲಿ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾದ ಬಳಿಕ ಕೊಹ್ಲಿ ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ್ದರು. ಹೀಗಾಗಿ 2025 ರಲ್ಲಿ ಕೊಹ್ಲಿ ಮತ್ತೆ ಫಾರ್ಮ್​ ಕಂಡುಕೊಳ್ಳುವ ನಿರೀಕ್ಷೆಯಿದೆ.

ಝಾಹಿರ್ ಯೂಸುಫ್
|

Updated on:Jan 11, 2025 | 10:57 AM

Share
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಶುಕ್ರವಾರ (ಜ.10) ಉತ್ತರದ ಪ್ರದೇಶದ ವೃಂದಾವನದಲ್ಲಿರುವ ಪ್ರೇಮಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯ ವೇಳೆ ಆಶೀರ್ವಾದ ಪಡೆದ ಕೊಹ್ಲಿಗೆ ಗುರೂಜಿ ಕೆಲ ವಿಶೇಷ ಸಲಹೆಗಳನ್ನು ನೀಡಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಶುಕ್ರವಾರ (ಜ.10) ಉತ್ತರದ ಪ್ರದೇಶದ ವೃಂದಾವನದಲ್ಲಿರುವ ಪ್ರೇಮಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯ ವೇಳೆ ಆಶೀರ್ವಾದ ಪಡೆದ ಕೊಹ್ಲಿಗೆ ಗುರೂಜಿ ಕೆಲ ವಿಶೇಷ ಸಲಹೆಗಳನ್ನು ನೀಡಿದ್ದಾರೆ.

1 / 5
ವಿರುಷ್ಕಾ ಜೋಡಿಯ ಭೇಟಿಗೆ ಸಂತೋಷ ವ್ಯಕ್ತಪಡಿಸಿದ ಪ್ರೇಮಾನಂದ ಜಿ ಮಹಾರಾಜ್, ಯಶಸ್ಸಿನ ಉತ್ತುಂಗಕ್ಕೇರಿದರೂ ನೀವಿಬ್ಬರೂ ಆಧ್ಯಾತ್ಮಿಕತೆಯತ್ತ ಮುಖ ಮಾಡುತ್ತಿರುವುದು ದೊಡ್ಡ ವಿಷಯ ಎಂದರು. ಅಲ್ಲದೆ ಕಳಪೆ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿಯನ್ನು ಸಂತೈಸುವ ಮಾತುಗಳನ್ನಾಡಿದರು.

ವಿರುಷ್ಕಾ ಜೋಡಿಯ ಭೇಟಿಗೆ ಸಂತೋಷ ವ್ಯಕ್ತಪಡಿಸಿದ ಪ್ರೇಮಾನಂದ ಜಿ ಮಹಾರಾಜ್, ಯಶಸ್ಸಿನ ಉತ್ತುಂಗಕ್ಕೇರಿದರೂ ನೀವಿಬ್ಬರೂ ಆಧ್ಯಾತ್ಮಿಕತೆಯತ್ತ ಮುಖ ಮಾಡುತ್ತಿರುವುದು ದೊಡ್ಡ ವಿಷಯ ಎಂದರು. ಅಲ್ಲದೆ ಕಳಪೆ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿಯನ್ನು ಸಂತೈಸುವ ಮಾತುಗಳನ್ನಾಡಿದರು.

2 / 5
ಕ್ರಿಕೆಟ್ ಕೂಡ ಆಧ್ಯಾತ್ಮಿಕ ಅಭ್ಯಾಸ ಎಂದು ಬಣ್ಣಿಸಿದ ಪ್ರೇಮಾನಂದ ಜಿ ಮಹಾರಾಜ್, ಅಭ್ಯಾಸ ನಡೆಸುವುದನ್ನು ಎಂದಿಗೂ ಬಿಡಬಾರದು ಎಂದರು. ಅಲ್ಲದೆ ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನೀವೇನು ಸಾಧಿಸಬೇಕೆಂದು ಬಯಸುತ್ತಿರೋ ಅದನ್ನು ಮುಟ್ಟಬಹುದು ಎಂದು ಆಶೀರ್ವಾದ ಮಾಡಿದರು.

ಕ್ರಿಕೆಟ್ ಕೂಡ ಆಧ್ಯಾತ್ಮಿಕ ಅಭ್ಯಾಸ ಎಂದು ಬಣ್ಣಿಸಿದ ಪ್ರೇಮಾನಂದ ಜಿ ಮಹಾರಾಜ್, ಅಭ್ಯಾಸ ನಡೆಸುವುದನ್ನು ಎಂದಿಗೂ ಬಿಡಬಾರದು ಎಂದರು. ಅಲ್ಲದೆ ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನೀವೇನು ಸಾಧಿಸಬೇಕೆಂದು ಬಯಸುತ್ತಿರೋ ಅದನ್ನು ಮುಟ್ಟಬಹುದು ಎಂದು ಆಶೀರ್ವಾದ ಮಾಡಿದರು.

3 / 5
ಅಭ್ಯಾಸವನ್ನು ಬಲಪಡಿಸುವುದು ನಿಮ್ಮ ಕರ್ತವ್ಯ. ಅದು ಕ್ರೀಡೆಯಾಗಿದ್ದರೂ, ನಿಮ್ಮ ಆಟದಿಂದ ಇಡೀ ಭಾರತ ಸಂತೋಷಪಡುತ್ತದೆ. ಹೀಗಾಗಿ ನಿಮ್ಮ ಅಭ್ಯಾಸದಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದರ ಜತೆ ದೇವರ ಸ್ಮರಣೆ ಕೂಡ ಇರಲಿ. ಇದುವೇ ನಿಮ್ಮ ಸಾಧನ ಎಂದು ವಿರಾಟ್ ಕೊಹ್ಲಿಗೆ ಪ್ರೇಮಾನಂದ ಜಿ ಮಹಾರಾಜ್ ತಿಳಿಸಿದರು. ಈ ಮೂಲಕ ಕಳಪೆ ಫಾರ್ಮ್​ನಿಂದ ಮರಳಲು ಕಠಿಣ ಅಭ್ಯಾಸವೇ ಮೂಲಮಂತ್ರ ಎಂಬುದನ್ನು ಒತ್ತಿ ಹೇಳಿದರು.

ಅಭ್ಯಾಸವನ್ನು ಬಲಪಡಿಸುವುದು ನಿಮ್ಮ ಕರ್ತವ್ಯ. ಅದು ಕ್ರೀಡೆಯಾಗಿದ್ದರೂ, ನಿಮ್ಮ ಆಟದಿಂದ ಇಡೀ ಭಾರತ ಸಂತೋಷಪಡುತ್ತದೆ. ಹೀಗಾಗಿ ನಿಮ್ಮ ಅಭ್ಯಾಸದಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದರ ಜತೆ ದೇವರ ಸ್ಮರಣೆ ಕೂಡ ಇರಲಿ. ಇದುವೇ ನಿಮ್ಮ ಸಾಧನ ಎಂದು ವಿರಾಟ್ ಕೊಹ್ಲಿಗೆ ಪ್ರೇಮಾನಂದ ಜಿ ಮಹಾರಾಜ್ ತಿಳಿಸಿದರು. ಈ ಮೂಲಕ ಕಳಪೆ ಫಾರ್ಮ್​ನಿಂದ ಮರಳಲು ಕಠಿಣ ಅಭ್ಯಾಸವೇ ಮೂಲಮಂತ್ರ ಎಂಬುದನ್ನು ಒತ್ತಿ ಹೇಳಿದರು.

4 / 5
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಸರಣಿ ಮುಕ್ತಾಯದ ಬೆನ್ನಲ್ಲೇ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾಗಿರುವುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಗುರೂಜಿಯನ್ನು ಭೇಟಿಯಾದ ಬಳಿಕ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಿಂಗ್ ಕೊಹ್ಲಿ ಕಡೆಯಿಂದ ಭರ್ಜರಿ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಸರಣಿ ಮುಕ್ತಾಯದ ಬೆನ್ನಲ್ಲೇ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾಗಿರುವುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಗುರೂಜಿಯನ್ನು ಭೇಟಿಯಾದ ಬಳಿಕ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಿಂಗ್ ಕೊಹ್ಲಿ ಕಡೆಯಿಂದ ಭರ್ಜರಿ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

5 / 5

Published On - 10:30 am, Sat, 11 January 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ