AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಅತೀ ದೊಡ್ಡ ಗೌರವ: ಪ್ರಧಾನಿ ಮೋದಿ ಜೊತೆಗಿನ ಫೋಟೋ ಹಂಚಿಕೊಂಡ ಟೀಮ್ ಇಂಡಿಯಾ ಆಟಗಾರರು

T20 World Cup 2024: ಶನಿವಾರ (ಜೂ.29) ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳಿಂದ ಜಯ ಸಾಧಿಸಿ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿತ್ತು.

ಝಾಹಿರ್ ಯೂಸುಫ್
|

Updated on: Jul 04, 2024 | 3:18 PM

Share
ಟಿ20 ವಿಶ್ವಕಪ್ ಗೆದ್ದು ಆಗಮಿಸಿರುವ ಟೀಮ್ ಇಂಡಿಯಾ ಆಟಗಾರರು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್​ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದರು.

ಟಿ20 ವಿಶ್ವಕಪ್ ಗೆದ್ದು ಆಗಮಿಸಿರುವ ಟೀಮ್ ಇಂಡಿಯಾ ಆಟಗಾರರು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್​ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದರು.

1 / 9
ಈ ವೇಳೆ ಟೀಮ್ ಇಂಡಿಯಾ ಆಟಗಾರರ ಜೊತೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಈ ವೇಳೆ ಟೀಮ್ ಇಂಡಿಯಾ ಆಟಗಾರರ ಜೊತೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

2 / 9
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಧಾನಿ ಮೋದಿ ಜೊತೆ ಸಿಂಗಲ್ ಫೋಟೋ ತೆಗೆಸಿಕೊಂಡರು. ಇದೇ ವೇಳೆ ವಿಶ್ವಕಪ್​ನಲ್ಲಿ ಭಾರತವನ್ನು ಯಶಸ್ವಿಯಾಗಿ ಮುನ್ನಡೆಸಿದ ಹಿಟ್​ಮ್ಯಾನ್ ಅವರ ನಾಯಕತ್ವವನ್ನು ಪ್ರಧಾನಿ ಹಾಡಿಹೊಗಳಿದ್ದಾರೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಧಾನಿ ಮೋದಿ ಜೊತೆ ಸಿಂಗಲ್ ಫೋಟೋ ತೆಗೆಸಿಕೊಂಡರು. ಇದೇ ವೇಳೆ ವಿಶ್ವಕಪ್​ನಲ್ಲಿ ಭಾರತವನ್ನು ಯಶಸ್ವಿಯಾಗಿ ಮುನ್ನಡೆಸಿದ ಹಿಟ್​ಮ್ಯಾನ್ ಅವರ ನಾಯಕತ್ವವನ್ನು ಪ್ರಧಾನಿ ಹಾಡಿಹೊಗಳಿದ್ದಾರೆ.

3 / 9
ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ವಿಶೇಷ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೊಹ್ಲಿ, ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾದದ್ದು ದೊಡ್ಡ ಗೌರವ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ನಮ್ಮನ್ನು ಆಹ್ವಾನಿಸಿದಕ್ಕಾಗಿ ಪ್ರಧಾನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ವಿಶೇಷ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೊಹ್ಲಿ, ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾದದ್ದು ದೊಡ್ಡ ಗೌರವ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ನಮ್ಮನ್ನು ಆಹ್ವಾನಿಸಿದಕ್ಕಾಗಿ ಪ್ರಧಾನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

4 / 9
ಇನ್ನು ಈ ಭೇಟಿ ವೇಳೆ ಜಸ್​ಪ್ರೀತ್ ಬುಮ್ರಾ ಅವರ ಪತ್ನಿ ಮತ್ತು ಪುತ್ರ ಅಂಗದ್ ಕಾಣಿಸಿಕೊಂಡಿದ್ದರು. ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನ ಆ್ಯಂಕರ್ ಆಗಿರುವ ಬುಮ್ರಾ ಪತ್ನಿ ಸಂಜನಾ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಪತಿ ಬುಮ್ರಾ ಜೊತೆ ಪ್ರಧಾನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಈ ಭೇಟಿ ವೇಳೆ ಜಸ್​ಪ್ರೀತ್ ಬುಮ್ರಾ ಅವರ ಪತ್ನಿ ಮತ್ತು ಪುತ್ರ ಅಂಗದ್ ಕಾಣಿಸಿಕೊಂಡಿದ್ದರು. ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನ ಆ್ಯಂಕರ್ ಆಗಿರುವ ಬುಮ್ರಾ ಪತ್ನಿ ಸಂಜನಾ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಪತಿ ಬುಮ್ರಾ ಜೊತೆ ಪ್ರಧಾನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

5 / 9
ಟೀಮ್ ಇಂಡಿಯಾ ಅರ್ಷದೀಪ್ ಸಿಂಗ್ ಅವರ ಪೋಷಕರು ಕೂಡ ಭಾರತ ತಂಡದ ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಅರ್ಷದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೀಮ್ ಇಂಡಿಯಾ ಅರ್ಷದೀಪ್ ಸಿಂಗ್ ಅವರ ಪೋಷಕರು ಕೂಡ ಭಾರತ ತಂಡದ ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಅರ್ಷದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

6 / 9
ಇನ್ನು ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಇದೇ ವೇಳೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಇನ್ನು ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಇದೇ ವೇಳೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

7 / 9
ಹಾಗೆಯೇ ಫೈನಲ್ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಷಾ ಶೆಟ್ಟಿ ಜೊತೆ ಪ್ರಧಾನಿ ಮೋದಿ ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಹಾಗೆಯೇ ಫೈನಲ್ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಷಾ ಶೆಟ್ಟಿ ಜೊತೆ ಪ್ರಧಾನಿ ಮೋದಿ ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

8 / 9
ಈ ಭೇಟಿ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಕೂಡ ಹಾಜರಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲುವಿನ ಸ್ಮರಣಿಕೆಯಾಗಿ ನಮೋ ಹೆಸರಿನ ಟೀಮ್ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಭೇಟಿ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಕೂಡ ಹಾಜರಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲುವಿನ ಸ್ಮರಣಿಕೆಯಾಗಿ ನಮೋ ಹೆಸರಿನ ಟೀಮ್ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

9 / 9
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ