AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಇತಿಹಾಸ ಸೃಷ್ಟಿಸಿದ ಪ್ರಿನ್ಸ್ ಯಾದವ್

Prince Yadav Shines on T20 Debut: ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಸೋತರೂ, ಪ್ರಿನ್ಸ್ ಯಾದವ್ ಚೊಚ್ಚಲ ಪಂದ್ಯದಲ್ಲಿ ಮಿಂಚಿದ್ದಾರೆ. 3 ವಿಕೆಟ್ ಪಡೆದು ಗಮನ ಸೆಳೆದ ಪ್ರಿನ್ಸ್, ತಾವು ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿ ಇತಿಹಾಸ ನಿರ್ಮಿಸಿದರು. T20I ವೃತ್ತಿಜೀವನದ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಪೃಥ್ವಿಶಂಕರ
|

Updated on:Jun 29, 2026 | 9:16 PM

Share
ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಸೋತಿದೆ. ತಂಡದ ಈ ಸೋಲಿಗೆ ಬ್ಯಾಟ್ಸ್‌ಮನ್​ಗಳ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಆದಾಗ್ಯೂ ಈ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ಪ್ರಿನ್ಸ್ ಯಾದವ್ ತಮ್ಮ ಮೊದಲ ಪಂದ್ಯದಲ್ಲೇ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು (PC-PTI).

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಸೋತಿದೆ. ತಂಡದ ಈ ಸೋಲಿಗೆ ಬ್ಯಾಟ್ಸ್‌ಮನ್​ಗಳ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಆದಾಗ್ಯೂ ಈ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ಪ್ರಿನ್ಸ್ ಯಾದವ್ ತಮ್ಮ ಮೊದಲ ಪಂದ್ಯದಲ್ಲೇ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು (PC-PTI).

1 / 5
ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಪ್ರಿನ್ಸ್ ಯಾದವ್ ಅದ್ಭುತ ಬೌಲಿಂಗ್ ಮಾಡಿದರು. ತಮ್ಮ ಖೋಟಾದ 4 ಓವರ್‌ಗಳಲ್ಲಿ ಕೇವಲ 22 ರನ್‌ಗಳನ್ನು ಬಿಟ್ಟುಕೊಟ್ಟ ಪ್ರಿನ್ಸ್ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಈ ಪಂದ್ಯದಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಕೂಡ ಎನಿಸಿಕೊಂಡರು (PC-PTI).

ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಪ್ರಿನ್ಸ್ ಯಾದವ್ ಅದ್ಭುತ ಬೌಲಿಂಗ್ ಮಾಡಿದರು. ತಮ್ಮ ಖೋಟಾದ 4 ಓವರ್‌ಗಳಲ್ಲಿ ಕೇವಲ 22 ರನ್‌ಗಳನ್ನು ಬಿಟ್ಟುಕೊಟ್ಟ ಪ್ರಿನ್ಸ್ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಈ ಪಂದ್ಯದಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಕೂಡ ಎನಿಸಿಕೊಂಡರು (PC-PTI).

2 / 5
ಇನ್ನು ಈ ಪಂದ್ಯದಲ್ಲಿ ಪ್ರಿನ್ಸ್ ಯಾದವ್​ಗೆ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ ಮಾಡುವ ಅವಕಾಶವೂ ಸಿಕ್ಕಿತು. ಭಾರತದ ಇನ್ನಿಂಗ್ಸ್​ನ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಬ್ಯಾಟಿಂಗ್​ಗೆ ಬಂದ ಪ್ರಿನ್ಸ್ ಯಾದವ್ ತಾವು ಎದುರಿಸಿದ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರು. ಆದಾಗ್ಯೂ ಟೀಂ ಇಂಡಿಯಾ ಈ ಪಂದ್ಯವನ್ನು ಒಂದು ರನ್ ನಿಂದ ಸೋತಿತು(PC-PTI).

ಇನ್ನು ಈ ಪಂದ್ಯದಲ್ಲಿ ಪ್ರಿನ್ಸ್ ಯಾದವ್​ಗೆ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ ಮಾಡುವ ಅವಕಾಶವೂ ಸಿಕ್ಕಿತು. ಭಾರತದ ಇನ್ನಿಂಗ್ಸ್​ನ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಬ್ಯಾಟಿಂಗ್​ಗೆ ಬಂದ ಪ್ರಿನ್ಸ್ ಯಾದವ್ ತಾವು ಎದುರಿಸಿದ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರು. ಆದಾಗ್ಯೂ ಟೀಂ ಇಂಡಿಯಾ ಈ ಪಂದ್ಯವನ್ನು ಒಂದು ರನ್ ನಿಂದ ಸೋತಿತು(PC-PTI).

3 / 5
ಆದರೆ ಚೊಚ್ಚಲ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪ್ರಿನ್ಸ್ ಯಾದವ್ ತಮ್ಮ ಟಿ20 ವೃತ್ತಿಜೀವನದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು (PC-PTI).

ಆದರೆ ಚೊಚ್ಚಲ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪ್ರಿನ್ಸ್ ಯಾದವ್ ತಮ್ಮ ಟಿ20 ವೃತ್ತಿಜೀವನದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು (PC-PTI).

4 / 5
ಪ್ರಿನ್ಸ್ ಯಾದವ್​ಗಿಂತ ಮೊದಲು, ಸೂರ್ಯಕುಮಾರ್ ಯಾದವ್ ಮತ್ತು ರಮಣದೀಪ್ ಸಿಂಗ್ ತಮ್ಮ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನುಸಿಕ್ಸರ್ ಬಾರಿಸುವ ಮೂಲಕ ಪ್ರಾರಂಭಿಸಿದ್ದರು. ಇದೀಗ ಪ್ರಿನ್ಸ್ ಯಾದವ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು (PC-PTI).

ಪ್ರಿನ್ಸ್ ಯಾದವ್​ಗಿಂತ ಮೊದಲು, ಸೂರ್ಯಕುಮಾರ್ ಯಾದವ್ ಮತ್ತು ರಮಣದೀಪ್ ಸಿಂಗ್ ತಮ್ಮ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನುಸಿಕ್ಸರ್ ಬಾರಿಸುವ ಮೂಲಕ ಪ್ರಾರಂಭಿಸಿದ್ದರು. ಇದೀಗ ಪ್ರಿನ್ಸ್ ಯಾದವ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು (PC-PTI).

5 / 5

Published On - 9:16 pm, Mon, 29 June 26

Follow Us
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ