Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2023: ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ ರಿಝ್ವಾನ್

PSL 2023: ವಿನ್ಸ್​ ಹೊರತುಪಡಿಸಿ ಕರಾಚಿ ಕಿಂಗ್ಸ್​ ತಂಡದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು 40 ರನ್​ಗಳ ಅವಶ್ಯಕತೆಯಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Feb 22, 2023 | 11:57 PM

ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಝ್ವಾನ್ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರಾಚಿ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಝ್ವಾನ್ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರಾಚಿ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮುಲ್ತಾನ್ ಸುಲ್ತಾನ್ಸ್ ಪರ ಇನಿಂಗ್ಸ್ ಆರಂಭಿಸಿದ ಶಾನ್ ಮಸೂದ್ ಹಾಗೂ ಮೊಹಮ್ಮದ್ ರಿಝ್ವಾನ್ ಅತ್ಯಾಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. 10.2 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 85 ರನ್​ ಪೇರಿಸಿದ ಬಳಿಕ ಮಸೂದ್ (51) ಔಟಾದರು. ಆ ಬಳಿಕ ರಿಲೀ ರೊಸ್ಸೊ ಜೊತೆಗೂಡಿದ ರಿಝ್ವಾನ್ ಬಿರುಸಿನ ಬ್ಯಾಟಿಂಗ್ ಮಾಡಿದರು.

ಅದರಂತೆ ಮುಲ್ತಾನ್ ಸುಲ್ತಾನ್ಸ್ ಪರ ಇನಿಂಗ್ಸ್ ಆರಂಭಿಸಿದ ಶಾನ್ ಮಸೂದ್ ಹಾಗೂ ಮೊಹಮ್ಮದ್ ರಿಝ್ವಾನ್ ಅತ್ಯಾಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. 10.2 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 85 ರನ್​ ಪೇರಿಸಿದ ಬಳಿಕ ಮಸೂದ್ (51) ಔಟಾದರು. ಆ ಬಳಿಕ ರಿಲೀ ರೊಸ್ಸೊ ಜೊತೆಗೂಡಿದ ರಿಝ್ವಾನ್ ಬಿರುಸಿನ ಬ್ಯಾಟಿಂಗ್ ಮಾಡಿದರು.

2 / 7
ಕರಾಚಿ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ರಿಝ್ವಾನ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 64 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 110 ರನ್​ ಕಲೆಹಾಕಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮುಲ್ತಾನ್ ಸುಲ್ತಾನ್ಸ್​ ತಂಡದ ಮೊತ್ತ 2 ವಿಕೆಟ್ ನಷ್ಟಕ್ಕೆ 192 ಕ್ಕೆ ಬಂದು ನಿಂತಿತು.

ಕರಾಚಿ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ರಿಝ್ವಾನ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 64 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 110 ರನ್​ ಕಲೆಹಾಕಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮುಲ್ತಾನ್ ಸುಲ್ತಾನ್ಸ್​ ತಂಡದ ಮೊತ್ತ 2 ವಿಕೆಟ್ ನಷ್ಟಕ್ಕೆ 192 ಕ್ಕೆ ಬಂದು ನಿಂತಿತು.

3 / 7
193 ರನ್​ಗಳ ಕಠಿಣ ಗುರಿ ಪಡೆದ ಕರಾಚಿ ಕಿಂಗ್ಸ್ ತಂಡಕ್ಕೆ ಆರಂಭಿಕ ಆಟಗಾರ ಜೇಮ್ಸ್​ ವಿನ್ಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವಿನ್ಸ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 34 ಎಸೆತಗಳಲ್ಲಿ 75 ರನ್ ಬಾರಿಸಿದ್ದರು. ಈ ವೇಳೆ ರನೌಟ್ ಆಗುವ ಮೂಲಕ ಹೊರನಡೆಯಬೇಕಾಯಿತು.

193 ರನ್​ಗಳ ಕಠಿಣ ಗುರಿ ಪಡೆದ ಕರಾಚಿ ಕಿಂಗ್ಸ್ ತಂಡಕ್ಕೆ ಆರಂಭಿಕ ಆಟಗಾರ ಜೇಮ್ಸ್​ ವಿನ್ಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವಿನ್ಸ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 34 ಎಸೆತಗಳಲ್ಲಿ 75 ರನ್ ಬಾರಿಸಿದ್ದರು. ಈ ವೇಳೆ ರನೌಟ್ ಆಗುವ ಮೂಲಕ ಹೊರನಡೆಯಬೇಕಾಯಿತು.

4 / 7
ವಿನ್ಸ್​ ಹೊರತುಪಡಿಸಿ ಕರಾಚಿ ಕಿಂಗ್ಸ್​ ತಂಡದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು 40 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ 2 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಇಮಾದ್ ವಾಸಿಂ ಪಂದ್ಯವನ್ನು ರೋಚಕತೆಯ ಹಂತಕ್ಕೆ ಕೊಂಡೊಯ್ದರು. ಪರಿಣಾಮ ಕೊನೆಯ 1 ಓವರ್​ನಲ್ಲಿ 22 ರನ್​ಗಳು ಬೇಕಿತ್ತು.

ವಿನ್ಸ್​ ಹೊರತುಪಡಿಸಿ ಕರಾಚಿ ಕಿಂಗ್ಸ್​ ತಂಡದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು 40 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ 2 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಇಮಾದ್ ವಾಸಿಂ ಪಂದ್ಯವನ್ನು ರೋಚಕತೆಯ ಹಂತಕ್ಕೆ ಕೊಂಡೊಯ್ದರು. ಪರಿಣಾಮ ಕೊನೆಯ 1 ಓವರ್​ನಲ್ಲಿ 22 ರನ್​ಗಳು ಬೇಕಿತ್ತು.

5 / 7
ಅಬ್ಬಾಸ್ ಅಫ್ರಿದಿ ಎಸೆದ ಕೊನೆಯ ಓವರ್​ನ ಮೊದಲ ಎಸೆತವು ನೋಬಾಲ್ ಆಗಿತ್ತು. ಅದಕ್ಕೆ ಇಮಾದ್ ಸಿಕ್ಸ್ ಉತ್ತರ ನೀಡಿದರು. 2ನೇ ಎಸೆತದಲ್ಲಿ 1 ರನ್​. 3ನೇ ಎಸೆತದಲ್ಲಿ ಬೆನ್ ಕಟ್ಟಿಂಗ್ ಭರ್ಜರಿ ಸಿಕ್ಸ್ ಬಾರಿಸಿದರು. 4ನೇ ಎಸೆತದಲ್ಲಿ ಕಟ್ಟಿಂಗ್ ಔಟಾದರು. ಅಂತಿಮ 2 ಎಸೆತಗಳಲ್ಲಿ 6 ರನ್​ಗಳು ಬೇಕಿತ್ತು. ಕೊನೆಯ ಎರಡು ಎಸೆತಗಳಲ್ಲಿ ಕರಾಚಿ ಕಿಂಗ್ಸ್​ 2 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಮುಲ್ತಾನ್ ಸುಲ್ತಾನ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿತು.

ಅಬ್ಬಾಸ್ ಅಫ್ರಿದಿ ಎಸೆದ ಕೊನೆಯ ಓವರ್​ನ ಮೊದಲ ಎಸೆತವು ನೋಬಾಲ್ ಆಗಿತ್ತು. ಅದಕ್ಕೆ ಇಮಾದ್ ಸಿಕ್ಸ್ ಉತ್ತರ ನೀಡಿದರು. 2ನೇ ಎಸೆತದಲ್ಲಿ 1 ರನ್​. 3ನೇ ಎಸೆತದಲ್ಲಿ ಬೆನ್ ಕಟ್ಟಿಂಗ್ ಭರ್ಜರಿ ಸಿಕ್ಸ್ ಬಾರಿಸಿದರು. 4ನೇ ಎಸೆತದಲ್ಲಿ ಕಟ್ಟಿಂಗ್ ಔಟಾದರು. ಅಂತಿಮ 2 ಎಸೆತಗಳಲ್ಲಿ 6 ರನ್​ಗಳು ಬೇಕಿತ್ತು. ಕೊನೆಯ ಎರಡು ಎಸೆತಗಳಲ್ಲಿ ಕರಾಚಿ ಕಿಂಗ್ಸ್​ 2 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಮುಲ್ತಾನ್ ಸುಲ್ತಾನ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿತು.

6 / 7
ಇನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಮೊಹಮ್ಮದ್ ರಿಝ್ವಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಮೊಹಮ್ಮದ್ ರಿಝ್ವಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

7 / 7
Follow us
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು