AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2023: ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ ರಿಝ್ವಾನ್

PSL 2023: ವಿನ್ಸ್​ ಹೊರತುಪಡಿಸಿ ಕರಾಚಿ ಕಿಂಗ್ಸ್​ ತಂಡದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು 40 ರನ್​ಗಳ ಅವಶ್ಯಕತೆಯಿತ್ತು.

TV9 Web
| Edited By: |

Updated on: Feb 22, 2023 | 11:57 PM

Share
ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಝ್ವಾನ್ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರಾಚಿ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಝ್ವಾನ್ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರಾಚಿ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮುಲ್ತಾನ್ ಸುಲ್ತಾನ್ಸ್ ಪರ ಇನಿಂಗ್ಸ್ ಆರಂಭಿಸಿದ ಶಾನ್ ಮಸೂದ್ ಹಾಗೂ ಮೊಹಮ್ಮದ್ ರಿಝ್ವಾನ್ ಅತ್ಯಾಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. 10.2 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 85 ರನ್​ ಪೇರಿಸಿದ ಬಳಿಕ ಮಸೂದ್ (51) ಔಟಾದರು. ಆ ಬಳಿಕ ರಿಲೀ ರೊಸ್ಸೊ ಜೊತೆಗೂಡಿದ ರಿಝ್ವಾನ್ ಬಿರುಸಿನ ಬ್ಯಾಟಿಂಗ್ ಮಾಡಿದರು.

ಅದರಂತೆ ಮುಲ್ತಾನ್ ಸುಲ್ತಾನ್ಸ್ ಪರ ಇನಿಂಗ್ಸ್ ಆರಂಭಿಸಿದ ಶಾನ್ ಮಸೂದ್ ಹಾಗೂ ಮೊಹಮ್ಮದ್ ರಿಝ್ವಾನ್ ಅತ್ಯಾಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. 10.2 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 85 ರನ್​ ಪೇರಿಸಿದ ಬಳಿಕ ಮಸೂದ್ (51) ಔಟಾದರು. ಆ ಬಳಿಕ ರಿಲೀ ರೊಸ್ಸೊ ಜೊತೆಗೂಡಿದ ರಿಝ್ವಾನ್ ಬಿರುಸಿನ ಬ್ಯಾಟಿಂಗ್ ಮಾಡಿದರು.

2 / 7
ಕರಾಚಿ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ರಿಝ್ವಾನ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 64 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 110 ರನ್​ ಕಲೆಹಾಕಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮುಲ್ತಾನ್ ಸುಲ್ತಾನ್ಸ್​ ತಂಡದ ಮೊತ್ತ 2 ವಿಕೆಟ್ ನಷ್ಟಕ್ಕೆ 192 ಕ್ಕೆ ಬಂದು ನಿಂತಿತು.

ಕರಾಚಿ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ರಿಝ್ವಾನ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 64 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ ಅಜೇಯ 110 ರನ್​ ಕಲೆಹಾಕಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮುಲ್ತಾನ್ ಸುಲ್ತಾನ್ಸ್​ ತಂಡದ ಮೊತ್ತ 2 ವಿಕೆಟ್ ನಷ್ಟಕ್ಕೆ 192 ಕ್ಕೆ ಬಂದು ನಿಂತಿತು.

3 / 7
193 ರನ್​ಗಳ ಕಠಿಣ ಗುರಿ ಪಡೆದ ಕರಾಚಿ ಕಿಂಗ್ಸ್ ತಂಡಕ್ಕೆ ಆರಂಭಿಕ ಆಟಗಾರ ಜೇಮ್ಸ್​ ವಿನ್ಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವಿನ್ಸ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 34 ಎಸೆತಗಳಲ್ಲಿ 75 ರನ್ ಬಾರಿಸಿದ್ದರು. ಈ ವೇಳೆ ರನೌಟ್ ಆಗುವ ಮೂಲಕ ಹೊರನಡೆಯಬೇಕಾಯಿತು.

193 ರನ್​ಗಳ ಕಠಿಣ ಗುರಿ ಪಡೆದ ಕರಾಚಿ ಕಿಂಗ್ಸ್ ತಂಡಕ್ಕೆ ಆರಂಭಿಕ ಆಟಗಾರ ಜೇಮ್ಸ್​ ವಿನ್ಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವಿನ್ಸ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 34 ಎಸೆತಗಳಲ್ಲಿ 75 ರನ್ ಬಾರಿಸಿದ್ದರು. ಈ ವೇಳೆ ರನೌಟ್ ಆಗುವ ಮೂಲಕ ಹೊರನಡೆಯಬೇಕಾಯಿತು.

4 / 7
ವಿನ್ಸ್​ ಹೊರತುಪಡಿಸಿ ಕರಾಚಿ ಕಿಂಗ್ಸ್​ ತಂಡದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು 40 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ 2 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಇಮಾದ್ ವಾಸಿಂ ಪಂದ್ಯವನ್ನು ರೋಚಕತೆಯ ಹಂತಕ್ಕೆ ಕೊಂಡೊಯ್ದರು. ಪರಿಣಾಮ ಕೊನೆಯ 1 ಓವರ್​ನಲ್ಲಿ 22 ರನ್​ಗಳು ಬೇಕಿತ್ತು.

ವಿನ್ಸ್​ ಹೊರತುಪಡಿಸಿ ಕರಾಚಿ ಕಿಂಗ್ಸ್​ ತಂಡದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಗೆಲ್ಲಲು 40 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ 2 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಇಮಾದ್ ವಾಸಿಂ ಪಂದ್ಯವನ್ನು ರೋಚಕತೆಯ ಹಂತಕ್ಕೆ ಕೊಂಡೊಯ್ದರು. ಪರಿಣಾಮ ಕೊನೆಯ 1 ಓವರ್​ನಲ್ಲಿ 22 ರನ್​ಗಳು ಬೇಕಿತ್ತು.

5 / 7
ಅಬ್ಬಾಸ್ ಅಫ್ರಿದಿ ಎಸೆದ ಕೊನೆಯ ಓವರ್​ನ ಮೊದಲ ಎಸೆತವು ನೋಬಾಲ್ ಆಗಿತ್ತು. ಅದಕ್ಕೆ ಇಮಾದ್ ಸಿಕ್ಸ್ ಉತ್ತರ ನೀಡಿದರು. 2ನೇ ಎಸೆತದಲ್ಲಿ 1 ರನ್​. 3ನೇ ಎಸೆತದಲ್ಲಿ ಬೆನ್ ಕಟ್ಟಿಂಗ್ ಭರ್ಜರಿ ಸಿಕ್ಸ್ ಬಾರಿಸಿದರು. 4ನೇ ಎಸೆತದಲ್ಲಿ ಕಟ್ಟಿಂಗ್ ಔಟಾದರು. ಅಂತಿಮ 2 ಎಸೆತಗಳಲ್ಲಿ 6 ರನ್​ಗಳು ಬೇಕಿತ್ತು. ಕೊನೆಯ ಎರಡು ಎಸೆತಗಳಲ್ಲಿ ಕರಾಚಿ ಕಿಂಗ್ಸ್​ 2 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಮುಲ್ತಾನ್ ಸುಲ್ತಾನ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿತು.

ಅಬ್ಬಾಸ್ ಅಫ್ರಿದಿ ಎಸೆದ ಕೊನೆಯ ಓವರ್​ನ ಮೊದಲ ಎಸೆತವು ನೋಬಾಲ್ ಆಗಿತ್ತು. ಅದಕ್ಕೆ ಇಮಾದ್ ಸಿಕ್ಸ್ ಉತ್ತರ ನೀಡಿದರು. 2ನೇ ಎಸೆತದಲ್ಲಿ 1 ರನ್​. 3ನೇ ಎಸೆತದಲ್ಲಿ ಬೆನ್ ಕಟ್ಟಿಂಗ್ ಭರ್ಜರಿ ಸಿಕ್ಸ್ ಬಾರಿಸಿದರು. 4ನೇ ಎಸೆತದಲ್ಲಿ ಕಟ್ಟಿಂಗ್ ಔಟಾದರು. ಅಂತಿಮ 2 ಎಸೆತಗಳಲ್ಲಿ 6 ರನ್​ಗಳು ಬೇಕಿತ್ತು. ಕೊನೆಯ ಎರಡು ಎಸೆತಗಳಲ್ಲಿ ಕರಾಚಿ ಕಿಂಗ್ಸ್​ 2 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಮುಲ್ತಾನ್ ಸುಲ್ತಾನ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿತು.

6 / 7
ಇನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಮೊಹಮ್ಮದ್ ರಿಝ್ವಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಮೊಹಮ್ಮದ್ ರಿಝ್ವಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

7 / 7
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ