Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!

PSL 2025: ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-10 ಏಪ್ರಿಲ್ 10 ರಿಂದ ಶುರುವಾಗಲಿದೆ. 6 ತಂಡಗಳ ಈ ಕದನದಲ್ಲಿ ಕರಾಚಿ ಕಿಂಗ್ಸ್ ತಂಡವನ್ನು ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ. ಕಳೆದ ಸೀಸನ್​ನಲ್ಲಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಇದೀಗ ವಾರ್ನರ್ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 25, 2025 | 9:53 AM

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್​ಎಲ್​ನತ್ತ ಮುಖ ಮಾಡಿದ್ದರು.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್​ಎಲ್​ನತ್ತ ಮುಖ ಮಾಡಿದ್ದರು.

1 / 5
ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-10 ರ ಡ್ರಾಫ್ಟ್​ನಲ್ಲಿ ಕಾಣಿಸಿಕೊಂಡಿದ್ದ ಡೇವಿಡ್ ವಾರ್ನರ್ ಅವರನ್ನು ಕರಾಚಿ ಕಿಂಗ್ಸ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಇದೀಗ ವಾರ್ನರ್ ಅವರಿಗೆ ಕರಾಚಿ ಕಿಂಗ್ಸ್ ತಂಡದ ನಾಯಕತ್ವವನ್ನು ಸಹ ನೀಡಲಾಗಿದೆ.

ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-10 ರ ಡ್ರಾಫ್ಟ್​ನಲ್ಲಿ ಕಾಣಿಸಿಕೊಂಡಿದ್ದ ಡೇವಿಡ್ ವಾರ್ನರ್ ಅವರನ್ನು ಕರಾಚಿ ಕಿಂಗ್ಸ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಇದೀಗ ವಾರ್ನರ್ ಅವರಿಗೆ ಕರಾಚಿ ಕಿಂಗ್ಸ್ ತಂಡದ ನಾಯಕತ್ವವನ್ನು ಸಹ ನೀಡಲಾಗಿದೆ.

2 / 5
ಇನ್ನು ಕರಾಚಿ ಕಿಂಗ್ಸ್ ತಂಡದಲ್ಲಿ ಡೇವಿಡ್ ವಾರ್ನರ್ ಅವರೊಂದಿಗೆ ಕೇನ್ ವಿಲಿಯಮ್ಸನ್ ಅವರು ಸಹ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ವಾರ್ನರ್ ಆಟಗಾರನಾಗಿ ಕಣಕ್ಕಿಳಿದರೆ, ವಿಲಿಯಮ್ಸನ್ ಹೆಚ್ಚುವರಿ ಆಟಗಾರನಾಗಿ ತಂಡದಲ್ಲಿ ಇರಲಿದ್ದಾರೆ. ಅಂದರೆ ಯಾವುದಾದರೂ ಆಟಗಾರ ಹೊರಗುಳಿದರೆ ಕೇನ್ ವಿಲಿಯಮ್ಸನ್​ಗೆ ಅವಕಾಶ ದೊರೆಯಲಿದೆ.

ಇನ್ನು ಕರಾಚಿ ಕಿಂಗ್ಸ್ ತಂಡದಲ್ಲಿ ಡೇವಿಡ್ ವಾರ್ನರ್ ಅವರೊಂದಿಗೆ ಕೇನ್ ವಿಲಿಯಮ್ಸನ್ ಅವರು ಸಹ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ವಾರ್ನರ್ ಆಟಗಾರನಾಗಿ ಕಣಕ್ಕಿಳಿದರೆ, ವಿಲಿಯಮ್ಸನ್ ಹೆಚ್ಚುವರಿ ಆಟಗಾರನಾಗಿ ತಂಡದಲ್ಲಿ ಇರಲಿದ್ದಾರೆ. ಅಂದರೆ ಯಾವುದಾದರೂ ಆಟಗಾರ ಹೊರಗುಳಿದರೆ ಕೇನ್ ವಿಲಿಯಮ್ಸನ್​ಗೆ ಅವಕಾಶ ದೊರೆಯಲಿದೆ.

3 / 5
ವಿಶೇಷ ಎಂದರೆ ಈ ಹಿಂದೆ ಡೇವಿಡ್ ವಾರ್ನರ್ ಹಾಗೂ ಕೇನ್ ವಿಲಿಯಮ್ಸನ್ ಐಪಿಎಲ್​ನಲ್ಲಿ ಜೊತೆಯಾಗಿ ಆಡಿದ್ದರು. 2015 ರಿಂದ 2020 ರವರೆಗೆ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಈ ಜೋಡಿಯು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲು ಇಬ್ಬರು ದಿಗ್ಗಜರು ಸಜ್ಜಾಗಿದ್ದಾರೆ.

ವಿಶೇಷ ಎಂದರೆ ಈ ಹಿಂದೆ ಡೇವಿಡ್ ವಾರ್ನರ್ ಹಾಗೂ ಕೇನ್ ವಿಲಿಯಮ್ಸನ್ ಐಪಿಎಲ್​ನಲ್ಲಿ ಜೊತೆಯಾಗಿ ಆಡಿದ್ದರು. 2015 ರಿಂದ 2020 ರವರೆಗೆ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಈ ಜೋಡಿಯು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲು ಇಬ್ಬರು ದಿಗ್ಗಜರು ಸಜ್ಜಾಗಿದ್ದಾರೆ.

4 / 5
ಕರಾಚಿ ಕಿಂಗ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಆ್ಯಡಂ ಮಿಲ್ನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಹಸನ್ ಅಲಿ, ಜೇಮ್ಸ್ ವಿನ್ಸ್, ಖುಶ್ದಿಲ್ ಶಾ, ಅಮೀರ್ ಜಮಾಲ್, ಮುಹಮ್ಮದ್ ಇರ್ಫಾನ್ ಖಾನ್, ಶಾನ್ ಮಸೂದ್, ಅರಾಫತ್ ಮಿನ್ಹಾಸ್, ಲಿಟ್ಟನ್ ದಾಸ್, ಮೀರ್ ಹಮ್ಝ, ಟಿಮ್ ಸೀಫರ್ಟ್, ಝಾಹಿದ್ ಮೆಹಮೂದ್, ಫವಾದ್ ಅಲಿ, ರಿಯಾಜುಲ್ಲಾ. ಪೂರಕ ಆಟಗಾರರು: ಕೇನ್ ವಿಲಿಯಮ್ಸನ್, ಮೊಹಮ್ಮದ್ ನಬಿ, ಒಮೈರ್ ಬಿನ್ ಯೂಸುಫ್, ಮಿರ್ಝ ಮಾಮೂನ್.

ಕರಾಚಿ ಕಿಂಗ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಆ್ಯಡಂ ಮಿಲ್ನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಹಸನ್ ಅಲಿ, ಜೇಮ್ಸ್ ವಿನ್ಸ್, ಖುಶ್ದಿಲ್ ಶಾ, ಅಮೀರ್ ಜಮಾಲ್, ಮುಹಮ್ಮದ್ ಇರ್ಫಾನ್ ಖಾನ್, ಶಾನ್ ಮಸೂದ್, ಅರಾಫತ್ ಮಿನ್ಹಾಸ್, ಲಿಟ್ಟನ್ ದಾಸ್, ಮೀರ್ ಹಮ್ಝ, ಟಿಮ್ ಸೀಫರ್ಟ್, ಝಾಹಿದ್ ಮೆಹಮೂದ್, ಫವಾದ್ ಅಲಿ, ರಿಯಾಜುಲ್ಲಾ. ಪೂರಕ ಆಟಗಾರರು: ಕೇನ್ ವಿಲಿಯಮ್ಸನ್, ಮೊಹಮ್ಮದ್ ನಬಿ, ಒಮೈರ್ ಬಿನ್ ಯೂಸುಫ್, ಮಿರ್ಝ ಮಾಮೂನ್.

5 / 5
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್