AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಆಫರ್… ಪಿಎಸ್​ಎಲ್​ಗೆ ಕೈಕೊಟ್ಟ ವಿಂಡೀಸ್ ಆಟಗಾರ

Gudakesh Motie: ವೆಸ್ಟ್ ಇಂಡೀಸ್​ನ ಡಗೈ ಸ್ಪಿನ್ನರ್ ಗುಡಕೇಶ್ ಮೋಟಿ ಅವರು 2026ರ ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮೋಟಿ ಒಟ್ಟು 10 ವಿಕೆಟ್ ಕಬಳಿಸಿದ್ದರು. ಈ ಪ್ರದರ್ಶನದ ಫಲವಾಗಿ ಇದೀಗ ವಿಂಡೀಸ್​ ಸ್ಪಿನ್ನರ್​ಗೆ ಐಪಿಎಲ್​ನಿಂದ ಭರ್ಜರಿ ಆಫರ್ ಸಿಕ್ಕಿದೆ.

ಝಾಹಿರ್ ಯೂಸುಫ್
|

Updated on: Mar 15, 2026 | 10:01 AM

Share
PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಹಿಂದೆ ಸರಿದಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ನೀಡದಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಸಿಕ್ಕ ಆಫರ್​ನಿಂದಾಗಿ ಗುಡಕೇಶ್ ಮೋಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಹಿಂದೆ ಸರಿದಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ನೀಡದಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಸಿಕ್ಕ ಆಫರ್​ನಿಂದಾಗಿ ಗುಡಕೇಶ್ ಮೋಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಗುಡಕೇಶ್ ಮೋಟಿ ಅವರನ್ನು ಲಾಹೋರ್ ಖಲಂದರ್ಸ್ ಫ್ರಾಂಚೈಸಿಯು ₹1.1 ಕೋಟಿಗೆ (PKR) ಖರೀದಿಸಿತ್ತು. ಆದರೀಗ ಪಿಎಸ್​ಎಲ್​ ಶುರುವಾಗಲು 10 ದಿನಗಳಿರುವಾಗ ವೆಸ್ಟ್ ಇಂಡೀಸ್ ಸ್ಪಿನ್ನರ್ ಟೂರ್ನಿಯಿಂದ ಹಿಂದೆ ಸರಿದ್ದಾರೆ.

ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಗುಡಕೇಶ್ ಮೋಟಿ ಅವರನ್ನು ಲಾಹೋರ್ ಖಲಂದರ್ಸ್ ಫ್ರಾಂಚೈಸಿಯು ₹1.1 ಕೋಟಿಗೆ (PKR) ಖರೀದಿಸಿತ್ತು. ಆದರೀಗ ಪಿಎಸ್​ಎಲ್​ ಶುರುವಾಗಲು 10 ದಿನಗಳಿರುವಾಗ ವೆಸ್ಟ್ ಇಂಡೀಸ್ ಸ್ಪಿನ್ನರ್ ಟೂರ್ನಿಯಿಂದ ಹಿಂದೆ ಸರಿದ್ದಾರೆ.

2 / 5
ಇದರ ಬೆನ್ನಲ್ಲೇ ಗುಡಕೇಶ್ ಮೋಟಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.

ಇದರ ಬೆನ್ನಲ್ಲೇ ಗುಡಕೇಶ್ ಮೋಟಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.

3 / 5
ಇತ್ತ ವನಿಂದು ಹಸರಂಗ ಐಪಿಎಲ್​ಗೆ ಅಲಭ್ಯರಾಗುವ ಸೂಚನೆ ಸಿಕ್ಕ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್ಮೆಂಟ್ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ  ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದಾಗಿ ಮೋಟಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇತ್ತ ವನಿಂದು ಹಸರಂಗ ಐಪಿಎಲ್​ಗೆ ಅಲಭ್ಯರಾಗುವ ಸೂಚನೆ ಸಿಕ್ಕ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್ಮೆಂಟ್ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ  ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದಾಗಿ ಮೋಟಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

4 / 5
ಇದಕ್ಕೂ ಮುನ್ನ ಝಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಝರಬಾನಿ ಕೂಡ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದರು. ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಆಯ್ಕೆಯಾಗಿದ್ದ ಮುಝರಬಾನಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಬ್ಲೆಸ್ಸಿಂಗ್ ಮುಝರಬಾನಿ ಪಿಎಸ್​ಎಲ್​ಗೆ ಕೈ ಕೊಟ್ಟಿದ್ದರು. ಇದೀಗ ಗುಡಕೇಶ್ ಮೋಟಿ ಕೂಡ ಐಪಿಎಲ್​ನಲ್ಲಿ ಚಾನ್ಸ್ ಸಿಕ್ಕಿರುವ ಕಾರಣ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಇದಕ್ಕೂ ಮುನ್ನ ಝಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಝರಬಾನಿ ಕೂಡ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದರು. ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಆಯ್ಕೆಯಾಗಿದ್ದ ಮುಝರಬಾನಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಬ್ಲೆಸ್ಸಿಂಗ್ ಮುಝರಬಾನಿ ಪಿಎಸ್​ಎಲ್​ಗೆ ಕೈ ಕೊಟ್ಟಿದ್ದರು. ಇದೀಗ ಗುಡಕೇಶ್ ಮೋಟಿ ಕೂಡ ಐಪಿಎಲ್​ನಲ್ಲಿ ಚಾನ್ಸ್ ಸಿಕ್ಕಿರುವ ಕಾರಣ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

5 / 5
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!