AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಂದ ಡೇವಿಡ್ ವಾರ್ನರ್​ಗೆ ವಿಶೇಷ ಬೇಡಿಕೆ: ಈಡೇರಿಸ್ತಾರ ಆಸೀಸ್ ಕ್ರಿಕೆಟಿಗ?

Puneeth Rajkumar: ಪುನೀತ್ ಅವರಿಗೆ ಕೇವಲ ಕರ್ನಾಟಕ, ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಇದರಲ್ಲಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಕೂಡ ಒಬ್ಬರು. ಸದ್ಯ ವಾರ್ನರ್ ಅವರು ಪುನೀತ್ ಅವರನ್ನು ನೆನೆದು ವಿಶೇಷವಾಗಿ ಗೌರವಿಸಿದ್ದು ಇದನ್ನು ಕಂಡು ಅಪ್ಪು ಅಭಿಮಾನಿಗಳು ಅವರಲ್ಲಿ ವಿಶೇಷ ಬೇಡಿಕೆ ಕೂಡ ಇಟ್ಟಿದ್ದಾರೆ.

TV9 Web
| Updated By: Vinay Bhat

Updated on: Dec 07, 2021 | 7:38 AM

ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ ಒಂದು ತಿಂಗಳು ಕಳೆದರೂ ಅವರ ನೆನಪಿನಿಂದ ಹೊರ ಬರಲು ಸಾಧ್ಯವಾಗುತ್ತಲೇ ಇಲ್ಲ. ಅಕ್ಟೋಬರ್ 29ರ ಕರಾಳ ಶುಕ್ರವಾರ ಈಗಲೂ ಸಹ ಪ್ರತಿಯೊಬ್ಬ ಕನ್ನಡಿಗನ ಮನದಲ್ಲಿ ದುಃಖವನ್ನೇ ತರಿಸುತ್ತದೆ. ಇಡೀ ಕರುನಾಡು ಪ್ರತಿದಿನ ಅಪ್ಪು ಅವರನ್ನು ನೆನದು ಕೊರಗುತ್ತಿದೆ. ಅವರ ಅಭಿಮಾನಿಗಳು ಇನ್ನೂ ಆ ಶಾಕ್​ನಿಂದ ಹೊರಬರಲಾಗದೇ ನೋವು ತಿಂತಿದ್ದಾರೆ.

ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ ಒಂದು ತಿಂಗಳು ಕಳೆದರೂ ಅವರ ನೆನಪಿನಿಂದ ಹೊರ ಬರಲು ಸಾಧ್ಯವಾಗುತ್ತಲೇ ಇಲ್ಲ. ಅಕ್ಟೋಬರ್ 29ರ ಕರಾಳ ಶುಕ್ರವಾರ ಈಗಲೂ ಸಹ ಪ್ರತಿಯೊಬ್ಬ ಕನ್ನಡಿಗನ ಮನದಲ್ಲಿ ದುಃಖವನ್ನೇ ತರಿಸುತ್ತದೆ. ಇಡೀ ಕರುನಾಡು ಪ್ರತಿದಿನ ಅಪ್ಪು ಅವರನ್ನು ನೆನದು ಕೊರಗುತ್ತಿದೆ. ಅವರ ಅಭಿಮಾನಿಗಳು ಇನ್ನೂ ಆ ಶಾಕ್​ನಿಂದ ಹೊರಬರಲಾಗದೇ ನೋವು ತಿಂತಿದ್ದಾರೆ.

1 / 9
ಪುನೀತ್ ಅಭಿಮಾನಿಗಳು ಒಂದು ಕಡೆಯಾದರೆ, ಸಾಕಷ್ಟು ಗಣ್ಯರು ಈಗಲೂ ಪುನೀತ್ ಅವರ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಇತ್ತೀಚೆಗಷ್ಟೆ ಕಮಲ್ ಹಾಸನ್ ಅವರು ಬಿಗ್​ಬಾಸ್ ವೇದಿಕೆಯಲ್ಲಿ ಪುನೀತ್ ಅವರನ್ನು ನೆನೆದು ಕಣ್ಣೀರು ಹಾಕಿದ್ದರು. ಇದೀಗ ಖ್ಯಾತ ಕ್ರಿಕೆಟಿಗರೊಬ್ಬರು ಪುನೀತ್ ಅವರನ್ನು ವಿಶೇಷವಾಗಿ ಸ್ಮರಿಸಿದ್ದಾರೆ. ಆದರೆ, ಅವರು ಟೀಮ್ ಇಂಡಿಯಾ ಆಟಗಾರನಲ್ಲ.

ಪುನೀತ್ ಅಭಿಮಾನಿಗಳು ಒಂದು ಕಡೆಯಾದರೆ, ಸಾಕಷ್ಟು ಗಣ್ಯರು ಈಗಲೂ ಪುನೀತ್ ಅವರ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಇತ್ತೀಚೆಗಷ್ಟೆ ಕಮಲ್ ಹಾಸನ್ ಅವರು ಬಿಗ್​ಬಾಸ್ ವೇದಿಕೆಯಲ್ಲಿ ಪುನೀತ್ ಅವರನ್ನು ನೆನೆದು ಕಣ್ಣೀರು ಹಾಕಿದ್ದರು. ಇದೀಗ ಖ್ಯಾತ ಕ್ರಿಕೆಟಿಗರೊಬ್ಬರು ಪುನೀತ್ ಅವರನ್ನು ವಿಶೇಷವಾಗಿ ಸ್ಮರಿಸಿದ್ದಾರೆ. ಆದರೆ, ಅವರು ಟೀಮ್ ಇಂಡಿಯಾ ಆಟಗಾರನಲ್ಲ.

2 / 9
ಪುನೀತ್ ಅವರಿಗೆ ಕೇವಲ ಕರ್ನಾಟಕ, ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಇದರಲ್ಲಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಕೂಡ ಒಬ್ಬರು. ಸದ್ಯ ವಾರ್ನರ್ ಅವರು ಪುನೀತ್ ಅವರನ್ನು ನೆನೆದು ವಿಶೇಷವಾಗಿ ಗೌರವಿಸಿದ್ದಾರೆ. ಇದನ್ನು ಕಂಡು ಅಪ್ಪು ಅಭಿಮಾನಿಗಳು ಅವರಲ್ಲಿ ವಿಶೇಷ ಬೇಡಿಕೆ ಕೂಡ ಇಟ್ಟಿದ್ದಾರೆ.

ಪುನೀತ್ ಅವರಿಗೆ ಕೇವಲ ಕರ್ನಾಟಕ, ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಇದರಲ್ಲಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಕೂಡ ಒಬ್ಬರು. ಸದ್ಯ ವಾರ್ನರ್ ಅವರು ಪುನೀತ್ ಅವರನ್ನು ನೆನೆದು ವಿಶೇಷವಾಗಿ ಗೌರವಿಸಿದ್ದಾರೆ. ಇದನ್ನು ಕಂಡು ಅಪ್ಪು ಅಭಿಮಾನಿಗಳು ಅವರಲ್ಲಿ ವಿಶೇಷ ಬೇಡಿಕೆ ಕೂಡ ಇಟ್ಟಿದ್ದಾರೆ.

3 / 9
 ವಾರ್ನರ್ ಅವರಿಗೆ ಭಾರತದ ಮೇಲೆ ಪ್ರೀತಿ ಜಾಸ್ತಿ ಎಂದು ಎಲ್ಲರಿಗೂ ಗೊತ್ತಿದೆ. ಐಪಿಎಲ್ ಆಡಲು ಬೆಂಗಳೂರಿಗೆ ಬಂದಾಗ ಅವರಿಗೆ ಬೆಂಗಳೂರಿನ ಜನ ತೋರಿಸಿದ ಪ್ರೀತಿ ತುಂಬಾ ಇಷ್ಟ. ಪ್ರತಿ ಬಾರಿ ತಮ್ಮ ಟಿಕ್​ಟಾಕ್ ಮೂಲಕವೇ ವಾರ್ನರ್ ರಂಜಿಸುತ್ತಿರುತ್ತಾರೆ. ಈ  ಬಾರಿಯೂ ವಾರ್ನರ್ ಪುನೀತ್ ರಾಜ್​ಕುಮಾರ್ ಅವರ ಬೊಂಬೆ ಹೇಳುತೈತೆ ಹಾಡಿಗೆ ಫೇಸ್ ಸ್ವಾಪ್ ಮಾಡಿ ಪೋಸ್ಟ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ವಾರ್ನರ್ ಅವರಿಗೆ ಭಾರತದ ಮೇಲೆ ಪ್ರೀತಿ ಜಾಸ್ತಿ ಎಂದು ಎಲ್ಲರಿಗೂ ಗೊತ್ತಿದೆ. ಐಪಿಎಲ್ ಆಡಲು ಬೆಂಗಳೂರಿಗೆ ಬಂದಾಗ ಅವರಿಗೆ ಬೆಂಗಳೂರಿನ ಜನ ತೋರಿಸಿದ ಪ್ರೀತಿ ತುಂಬಾ ಇಷ್ಟ. ಪ್ರತಿ ಬಾರಿ ತಮ್ಮ ಟಿಕ್​ಟಾಕ್ ಮೂಲಕವೇ ವಾರ್ನರ್ ರಂಜಿಸುತ್ತಿರುತ್ತಾರೆ. ಈ ಬಾರಿಯೂ ವಾರ್ನರ್ ಪುನೀತ್ ರಾಜ್​ಕುಮಾರ್ ಅವರ ಬೊಂಬೆ ಹೇಳುತೈತೆ ಹಾಡಿಗೆ ಫೇಸ್ ಸ್ವಾಪ್ ಮಾಡಿ ಪೋಸ್ಟ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

4 / 9
ಹೌದು, ಅಪ್ಪು ಅವರ ಮುಖಕ್ಕೆ ಇವರ ಮುಖಕ್ಕೆ ಜೋಡಿಸಿ ಎಡಿಟ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಜೊತೆಗೆ ರೆಸ್ಪೆಕ್ಟ್ ಎಂದು ಬರೆದುಕೊಂಡು ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಇದಕ್ಕೆ ಪುನೀತ್ ಅಭಿಮಾನಿಗಳು ಸಂತಸಗೊಂಡಿದ್ದು, ಪುನೀತ್ ಮೇಲೆ ಡೇವಿಡ್ ವಾರ್ನರ್ ಇಟ್ಟಿರುವ ಪ್ರೀತಿಗೆ ಫಿದಾ ಆಗಿದ್ದಾರೆ. ತಡವಾಗಿ ಆದರೂ ಪುನೀತ್ ಅವರನ್ನು ಸ್ಮರಣೆ ಮಾಡಿರೋದಕ್ಕೆ ಸಂತಸಗೊಂಡಿದ್ದಾರೆ.

ಹೌದು, ಅಪ್ಪು ಅವರ ಮುಖಕ್ಕೆ ಇವರ ಮುಖಕ್ಕೆ ಜೋಡಿಸಿ ಎಡಿಟ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಜೊತೆಗೆ ರೆಸ್ಪೆಕ್ಟ್ ಎಂದು ಬರೆದುಕೊಂಡು ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಇದಕ್ಕೆ ಪುನೀತ್ ಅಭಿಮಾನಿಗಳು ಸಂತಸಗೊಂಡಿದ್ದು, ಪುನೀತ್ ಮೇಲೆ ಡೇವಿಡ್ ವಾರ್ನರ್ ಇಟ್ಟಿರುವ ಪ್ರೀತಿಗೆ ಫಿದಾ ಆಗಿದ್ದಾರೆ. ತಡವಾಗಿ ಆದರೂ ಪುನೀತ್ ಅವರನ್ನು ಸ್ಮರಣೆ ಮಾಡಿರೋದಕ್ಕೆ ಸಂತಸಗೊಂಡಿದ್ದಾರೆ.

5 / 9
ಡೇವಿಡ್ ವಾರ್ನರ್ ಪುನೀತ್ ರಾಜ್ ಕುಮಾರ್ ಕುರಿತಾಗಿ ಹಾಕಿರುವ ಈ ಪೋಸ್ಟ್​ಗೆ 15 ಸಾವಿರಕ್ಕೂ ಹೆಚ್ಚು ಕಾಮೆಂಟ್ ಬಂದಿದ್ದು, ಅಪ್ಪು ಅವರನ್ನು ಸ್ಮರಿಸಿದ ವಾರ್ನರ್ ಅವರಿಗೆ ಕೆಲವರು ಕೃತಜ್ಞತೆ ಸಲ್ಲಿಸಿದ್ದಾರೆ.

ಡೇವಿಡ್ ವಾರ್ನರ್ ಪುನೀತ್ ರಾಜ್ ಕುಮಾರ್ ಕುರಿತಾಗಿ ಹಾಕಿರುವ ಈ ಪೋಸ್ಟ್​ಗೆ 15 ಸಾವಿರಕ್ಕೂ ಹೆಚ್ಚು ಕಾಮೆಂಟ್ ಬಂದಿದ್ದು, ಅಪ್ಪು ಅವರನ್ನು ಸ್ಮರಿಸಿದ ವಾರ್ನರ್ ಅವರಿಗೆ ಕೆಲವರು ಕೃತಜ್ಞತೆ ಸಲ್ಲಿಸಿದ್ದಾರೆ.

6 / 9
ಇದರ ಜೊತೆಗೆ ಅನೇಕ ಅಪ್ಪು ಹಾಗೂ ಆರ್​ಸಿಬಿ ಅಭಿಮಾನಿಗಳು ಡೇವಿಡ್ ವಾರ್ನರ್ ಅವರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿ ನಾವು ನಿಮಗೆ ಬೆಂಬಲ ನೀಡುತ್ತೇವೆ ಎಂದು ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ವಾರ್ನರ್​ಗೆ ಆರ್​ಸಿಬಿ ಸೇರುವಂತೆ ವಿಶೇಷ ಬೇಡಿಕೆ ಇಟ್ಟಿದ್ದಾರೆ.

ಇದರ ಜೊತೆಗೆ ಅನೇಕ ಅಪ್ಪು ಹಾಗೂ ಆರ್​ಸಿಬಿ ಅಭಿಮಾನಿಗಳು ಡೇವಿಡ್ ವಾರ್ನರ್ ಅವರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿ ನಾವು ನಿಮಗೆ ಬೆಂಬಲ ನೀಡುತ್ತೇವೆ ಎಂದು ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ವಾರ್ನರ್​ಗೆ ಆರ್​ಸಿಬಿ ಸೇರುವಂತೆ ವಿಶೇಷ ಬೇಡಿಕೆ ಇಟ್ಟಿದ್ದಾರೆ.

7 / 9
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಯಾವುದೇ ಮಾಹಿತಿ ನೀಡಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ನಡೆದ ರಿಟೈನ್ ಪ್ರಕ್ರಿಯೆಯ ವೇಳೆ ವಾರ್ನರ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಬಿಡುಗಡೆ ಮಾಡಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಯಾವುದೇ ಮಾಹಿತಿ ನೀಡಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ನಡೆದ ರಿಟೈನ್ ಪ್ರಕ್ರಿಯೆಯ ವೇಳೆ ವಾರ್ನರ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಬಿಡುಗಡೆ ಮಾಡಿತ್ತು.

8 / 9
ಹೀಗಾಗಿ ಈ ಬಾರಿ ಹರಾಜಿನಲ್ಲಿ ವಾರ್ನರ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಇವರನ್ನು ಖರೀದಿ ಮಾಡುತ್ತಾ ಎಂಬುದು ನೋಡಬೇಕಿದೆ. ಅಲ್ಲದೆ ಬೆಂಗಳೂರು ತಂಡಕ್ಕೆ ಹೊಸ ನಾಯಕನ ಅವಶ್ಯತೆ ಕೂಡ ಇದ್ದು, ಇವರಿಗೆ ಅವರ ಅನುಭವ ಕೂಡ ಇದೆ.

ಹೀಗಾಗಿ ಈ ಬಾರಿ ಹರಾಜಿನಲ್ಲಿ ವಾರ್ನರ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಇವರನ್ನು ಖರೀದಿ ಮಾಡುತ್ತಾ ಎಂಬುದು ನೋಡಬೇಕಿದೆ. ಅಲ್ಲದೆ ಬೆಂಗಳೂರು ತಂಡಕ್ಕೆ ಹೊಸ ನಾಯಕನ ಅವಶ್ಯತೆ ಕೂಡ ಇದ್ದು, ಇವರಿಗೆ ಅವರ ಅನುಭವ ಕೂಡ ಇದೆ.

9 / 9
Follow us
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ