AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ

Punjab Kings playoffs scenario: ಐಪಿಎಲ್ 2026ರ ಲೀಗ್ ಹಂತವು ಕ್ಲೈಮ್ಯಾಕ್ಸ್ ತಲುಪಿದೆ. ಇದಾಗ್ಯೂ ಪ್ಲೇಆಫ್‌ನ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ 13 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ (PBKS) ತಂಡದ ಭವಿಷ್ಯ ಈಗ ಅಂತಿಮ ವಾರಾಂತ್ಯದ ಪಂದ್ಯಗಳ ಮೇಲೆ ನಿಂತಿದೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡದ ಪ್ಲೇಆಫ್ ಲೆಕ್ಕಾಚಾರ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 23, 2026 | 11:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳು ಪ್ಲೇಆಫ್​ ರೇಸ್​ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಡುವೆ ನೇರ ಪೈಪೋಟಿ ಇದೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳು ಪ್ಲೇಆಫ್​ ರೇಸ್​ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಡುವೆ ನೇರ ಪೈಪೋಟಿ ಇದೆ. (PC: IPL)

1 / 5
ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡ ನೇರವಾಗಿ ಪ್ಲೇಆಫ್​ಗೇರುವುದಿಲ್ಲ. ಬದಲಾಗಿ ಇತರೆ ಎರಡು ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅದರಂತೆ ಪಂಜಾಬ್ ಪಡೆಯ ಪ್ಲೇಆಫ್ ಲೆಕ್ಕಾಚಾರ ಈ ಕೆಳಗಿನಂತಿದೆ... (PC: IPL)

ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡ ನೇರವಾಗಿ ಪ್ಲೇಆಫ್​ಗೇರುವುದಿಲ್ಲ. ಬದಲಾಗಿ ಇತರೆ ಎರಡು ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅದರಂತೆ ಪಂಜಾಬ್ ಪಡೆಯ ಪ್ಲೇಆಫ್ ಲೆಕ್ಕಾಚಾರ ಈ ಕೆಳಗಿನಂತಿದೆ... (PC: IPL)

2 / 5
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಫಲಿತಾಂಶವನ್ನು ಎದುರು ನೋಡಬೇಕು. ಅಂದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಅನಿವಾರ್ಯ. (PC: IPL)

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಫಲಿತಾಂಶವನ್ನು ಎದುರು ನೋಡಬೇಕು. ಅಂದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಅನಿವಾರ್ಯ. (PC: IPL)

3 / 5
ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು, ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ ಮತ್ತೊಂದು ಪಂದ್ಯದ ಫಲಿತಾಂಶವನ್ನು ಸಹ ಪಂಜಾಬ್ ಪಡೆ ಎದುರು ನೋಡಬೇಕು. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಬೇಕು. (PC: IPL)

ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು, ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ ಮತ್ತೊಂದು ಪಂದ್ಯದ ಫಲಿತಾಂಶವನ್ನು ಸಹ ಪಂಜಾಬ್ ಪಡೆ ಎದುರು ನೋಡಬೇಕು. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಬೇಕು. (PC: IPL)

4 / 5
ಅಂದರೆ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ಬಳಿಕ, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೋಲಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಮಾತ್ರ ಪಂಜಾಬ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಹೀಗಾಗಿ ಪಂಜಾಬ್ ಪಾಲಿಗೆ ಇಂದಿನ ಮ್ಯಾಚ್ ಅಲ್ಲದೆ, ಇತರೆ ತಂಡಗಳ ಮುಂದಿನ ಪಂದ್ಯಗಳು ಕೂಡ ನಿರ್ಣಾಯಕ. (PC: IPL)

ಅಂದರೆ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ಬಳಿಕ, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೋಲಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಮಾತ್ರ ಪಂಜಾಬ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಹೀಗಾಗಿ ಪಂಜಾಬ್ ಪಾಲಿಗೆ ಇಂದಿನ ಮ್ಯಾಚ್ ಅಲ್ಲದೆ, ಇತರೆ ತಂಡಗಳ ಮುಂದಿನ ಪಂದ್ಯಗಳು ಕೂಡ ನಿರ್ಣಾಯಕ. (PC: IPL)

5 / 5
Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ