Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಬಳಗಕ್ಕೆ ಕ್ವಿಂಟನ್ ಡಿಕಾಕ್ ಎಂಟ್ರಿ

MLC 2025: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಗಾಗಿ ಸಿದ್ಧತೆಗಳು ಶುರುವಾಗಿದೆ. ಅಮೆರಿಕದಲ್ಲಿ 2023 ರಲ್ಲಿ ಆರಂಭವಾದ ಈ ಟೂರ್ನಿಯ ಮೊದಲ ಸೀಸನ್​ನಲ್ಲಿ ಎಂಐ ನ್ಯೂಯಾರ್ಕ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು 2024 ರಲ್ಲಿ ವಾಷಿಂಗ್ಟನ್ ಫ್ರೀಡಂ ತಂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.

ಝಾಹಿರ್ ಯೂಸುಫ್
|

Updated on: Apr 06, 2025 | 11:54 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2025) ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಕ್ವಿಂಟನ್ ಡಿಕಾಕ್ (Quinton De Kock )ಮುಂಬೈ ಇಂಡಿಯನ್ಸ್ ಬಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಮುಂಬರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಗಾಗಿ ಎಂಬುದು ವಿಶೇಷ. ಅಂದರೆ ಅಮೆರಿಕದಲ್ಲಿ ನಡೆಯಲಿರುವ MLC 2025 ಟಿ20 ಲೀಗ್​ನಲ್ಲಿ ಕ್ವಿಂಟನ್ ಡಿಕಾಕ್ ಮುಂಬೈ ಇಂಡಿಯನ್ಸ್ (MI) ನ್ಯೂಯಾರ್ಕ್​ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2025) ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಕ್ವಿಂಟನ್ ಡಿಕಾಕ್ (Quinton De Kock )ಮುಂಬೈ ಇಂಡಿಯನ್ಸ್ ಬಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಮುಂಬರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಗಾಗಿ ಎಂಬುದು ವಿಶೇಷ. ಅಂದರೆ ಅಮೆರಿಕದಲ್ಲಿ ನಡೆಯಲಿರುವ MLC 2025 ಟಿ20 ಲೀಗ್​ನಲ್ಲಿ ಕ್ವಿಂಟನ್ ಡಿಕಾಕ್ ಮುಂಬೈ ಇಂಡಿಯನ್ಸ್ (MI) ನ್ಯೂಯಾರ್ಕ್​ ತಂಡದ ಪರ ಕಣಕ್ಕಿಳಿಯಲಿದ್ದಾರೆ.

1 / 5
2023 ರಿಂದ ಶುರುವಾದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯುತ್ತಿದ್ದು, ಇದೀಗ ಈ ತಂಡಗಳ ಡ್ರಾಫ್ಟ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರ ನಡುವೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ನ್ಯೂಯಾರ್ಕ್ ತಂಡಕ್ಕೆ ಸೌತ್ ಆಫ್ರಿಕಾದ ದಾಂಡಿಗ ಕ್ವಿಂಟನ್ ಡಿಕಾಕ್ ಅವರನ್ನು ಆಯ್ಕೆ ಮಾಡಿಕೊಂಡಿದೆ. 

2023 ರಿಂದ ಶುರುವಾದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯುತ್ತಿದ್ದು, ಇದೀಗ ಈ ತಂಡಗಳ ಡ್ರಾಫ್ಟ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರ ನಡುವೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ನ್ಯೂಯಾರ್ಕ್ ತಂಡಕ್ಕೆ ಸೌತ್ ಆಫ್ರಿಕಾದ ದಾಂಡಿಗ ಕ್ವಿಂಟನ್ ಡಿಕಾಕ್ ಅವರನ್ನು ಆಯ್ಕೆ ಮಾಡಿಕೊಂಡಿದೆ. 

2 / 5
ಇನ್ನು ಕಳೆದ ಸೀಸನ್​ನಲ್ಲಿ MI ನ್ಯೂಯಾರ್ಕ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್, ಅನ್ರಿಕ್ ನೋಕಿಯಾ, ಕಗಿಸೊ ರಬಾಡ ಮತ್ತು ಉದಯೋನ್ಮುಖ ತಾರೆ ಡೆವಾಲ್ಡ್ ಬ್ರೆವಿಸ್ ಸೇರಿದಂತೆ ಪ್ರಮುಖ ಅಂತರರಾಷ್ಟ್ರೀಯ ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದಾರೆ. ಈ ಮೂಲಕ ಡಿಕಾಕ್ ಸೇರಿದಂತೆ ಒಂದಷ್ಟು ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ.

ಇನ್ನು ಕಳೆದ ಸೀಸನ್​ನಲ್ಲಿ MI ನ್ಯೂಯಾರ್ಕ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್, ಅನ್ರಿಕ್ ನೋಕಿಯಾ, ಕಗಿಸೊ ರಬಾಡ ಮತ್ತು ಉದಯೋನ್ಮುಖ ತಾರೆ ಡೆವಾಲ್ಡ್ ಬ್ರೆವಿಸ್ ಸೇರಿದಂತೆ ಪ್ರಮುಖ ಅಂತರರಾಷ್ಟ್ರೀಯ ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದಾರೆ. ಈ ಮೂಲಕ ಡಿಕಾಕ್ ಸೇರಿದಂತೆ ಒಂದಷ್ಟು ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ.

3 / 5
ಹಾಗೆಯೇ ಕಳೆದೆರಡು ಸೀಸನ್​ನಲ್ಲಿ ಎಂಐ ನ್ಯೂಯಾರ್ಕ್ ಪರ ಕಣಕ್ಕಿಳಿದಿದ್ದ ಕೀರನ್ ಪೊಲಾರ್ಡ್, ನಿಕೋಲಸ್ ಪೂರನ್, ರಶೀದ್ ಖಾನ್ ಹಾಗೂ ಟ್ರೆಂಟ್ ಬೌಲ್ಟ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಕೀರನ್ ಪೊಲಾರ್ಡ್ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅತ್ತ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಎಂಐ ಪರ ಆಟಗಾರನಾಗಿ ಕಣಕ್ಕಿಳಿಯುತ್ತಿರುವುದು ವಿಶೇಷ. 

ಹಾಗೆಯೇ ಕಳೆದೆರಡು ಸೀಸನ್​ನಲ್ಲಿ ಎಂಐ ನ್ಯೂಯಾರ್ಕ್ ಪರ ಕಣಕ್ಕಿಳಿದಿದ್ದ ಕೀರನ್ ಪೊಲಾರ್ಡ್, ನಿಕೋಲಸ್ ಪೂರನ್, ರಶೀದ್ ಖಾನ್ ಹಾಗೂ ಟ್ರೆಂಟ್ ಬೌಲ್ಟ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಕೀರನ್ ಪೊಲಾರ್ಡ್ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅತ್ತ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಎಂಐ ಪರ ಆಟಗಾರನಾಗಿ ಕಣಕ್ಕಿಳಿಯುತ್ತಿರುವುದು ವಿಶೇಷ. 

4 / 5
MI ನ್ಯೂಯಾರ್ಕ್ ತಂಡ:  ಕೀರನ್ ಪೊಲಾರ್ಡ್, ನಿಕೋಲಸ್ ಪೂರನ್, ಟ್ರೆಂಟ್ ಬೌಲ್ಟ್, ರಶೀದ್ ಖಾನ್, ಮೊನಾಂಕ್ ಪಟೇಲ್, ನೊಸ್ತುಶ್ ಕೆಂಜಿಗೆ, ಹೀತ್ ರಿಚರ್ಡ್ಸ್, ಎಹ್ಸಾನ್ ಆದಿಲ್, ಸನ್ನಿ ಪಟೇಲ್, ರುಶಿಲ್ ಉಗಾರ್ಕರ್, ಜಾರ್ಜ್ ಲಿಂಡೆ, ಕ್ವಿಂಟನ್ ಡಿ ಕಾಕ್, ಮೈಕೆಲ್ ಬ್ರೇಸ್​ವೆಲ್, ನವೀನ್ ಉಲ್ ಹಕ್, ಅಝ್ಮತುಲ್ಲಾ ಒಮರ್​ಝಾಹಿ,  ಕುನ್ವರ್ಜೀತ್ ಸಿಂಗ್, ಶರದ್ ಲುಂಬಾ, ತಜೀಂದರ್ ಸಿಂಗ್ ಮತ್ತು ಅಗ್ನಿ ಚೋಪ್ರಾ.

MI ನ್ಯೂಯಾರ್ಕ್ ತಂಡ:  ಕೀರನ್ ಪೊಲಾರ್ಡ್, ನಿಕೋಲಸ್ ಪೂರನ್, ಟ್ರೆಂಟ್ ಬೌಲ್ಟ್, ರಶೀದ್ ಖಾನ್, ಮೊನಾಂಕ್ ಪಟೇಲ್, ನೊಸ್ತುಶ್ ಕೆಂಜಿಗೆ, ಹೀತ್ ರಿಚರ್ಡ್ಸ್, ಎಹ್ಸಾನ್ ಆದಿಲ್, ಸನ್ನಿ ಪಟೇಲ್, ರುಶಿಲ್ ಉಗಾರ್ಕರ್, ಜಾರ್ಜ್ ಲಿಂಡೆ, ಕ್ವಿಂಟನ್ ಡಿ ಕಾಕ್, ಮೈಕೆಲ್ ಬ್ರೇಸ್​ವೆಲ್, ನವೀನ್ ಉಲ್ ಹಕ್, ಅಝ್ಮತುಲ್ಲಾ ಒಮರ್​ಝಾಹಿ,  ಕುನ್ವರ್ಜೀತ್ ಸಿಂಗ್, ಶರದ್ ಲುಂಬಾ, ತಜೀಂದರ್ ಸಿಂಗ್ ಮತ್ತು ಅಗ್ನಿ ಚೋಪ್ರಾ.

5 / 5
Follow us
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ