AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಹೊಸ ಮೈಲುಗಲ್ಲು ದಾಟಿದ ಅಶ್ವಿನ್: ಈಗ ಭಾರತದ 3ನೇ ಯಶಸ್ವಿ ಬೌಲರ್

India vs New zealand 1st Test: ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನಕ್ಕೇರಿದ್ದಾರೆ. ಸದ್ಯ ಅಶ್ವಿನ್ ಮುಂದೆ 421 ವಿಕೆಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಇದ್ದು, ಹೀಗಾಗಿ ಮುಂದಿನ ಎರಡು ಟೆಸ್ಟ್​ ಪಂದ್ಯಗಳ ಮೂಲಕ ಪೊಲಾಕ್​ ದಾಖಲೆಯನ್ನು ಮುರಿಯುವ ಅವಕಾಶ ಅಶ್ವಿನ್​ ಮುಂದಿದೆ.

TV9 Web
| Edited By: |

Updated on: Nov 29, 2021 | 3:26 PM

Share
ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್​ನಲ್ಲಿ 5 ವಿಕೆಟ್ ಉರುಳಿಸುವುದರೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್​ನಲ್ಲಿ 5 ವಿಕೆಟ್ ಉರುಳಿಸುವುದರೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್, ಇದೀಗ 2ನೇ ಇನಿಂಗ್ಸ್​ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 418 ಕ್ಕೇರಿಸಿದ್ದಾರೆ. ಈ ಮೂಲಕ 417 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್, ಇದೀಗ 2ನೇ ಇನಿಂಗ್ಸ್​ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 418 ಕ್ಕೇರಿಸಿದ್ದಾರೆ. ಈ ಮೂಲಕ 417 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.

2 / 5
 ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 418 ವಿಕೆಟ್​ ಪಡೆದಿರುವ ಅಶ್ವಿನ್ 3ನೇ ಸ್ಥಾನ ಅಲಂಕರಿಸಿದ್ದಾರೆ. 4ನೇ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, ಭಜ್ಜಿ 417 ವಿಕೆಟ್ ಉರುಳಿಸಿದ್ದಾರೆ.

ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 418 ವಿಕೆಟ್​ ಪಡೆದಿರುವ ಅಶ್ವಿನ್ 3ನೇ ಸ್ಥಾನ ಅಲಂಕರಿಸಿದ್ದಾರೆ. 4ನೇ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, ಭಜ್ಜಿ 417 ವಿಕೆಟ್ ಉರುಳಿಸಿದ್ದಾರೆ.

3 / 5
ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನಕ್ಕೇರಿದ್ದಾರೆ. ಸದ್ಯ ಅಶ್ವಿನ್ ಮುಂದೆ 421 ವಿಕೆಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಇದ್ದು, ಹೀಗಾಗಿ ಮುಂದಿನ ಎರಡು ಟೆಸ್ಟ್​ ಪಂದ್ಯಗಳ ಮೂಲಕ ಪೊಲಾಕ್​ ದಾಖಲೆಯನ್ನು ಮುರಿಯುವ ಅವಕಾಶ ಅಶ್ವಿನ್​ ಮುಂದಿದೆ.

ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನಕ್ಕೇರಿದ್ದಾರೆ. ಸದ್ಯ ಅಶ್ವಿನ್ ಮುಂದೆ 421 ವಿಕೆಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಇದ್ದು, ಹೀಗಾಗಿ ಮುಂದಿನ ಎರಡು ಟೆಸ್ಟ್​ ಪಂದ್ಯಗಳ ಮೂಲಕ ಪೊಲಾಕ್​ ದಾಖಲೆಯನ್ನು ಮುರಿಯುವ ಅವಕಾಶ ಅಶ್ವಿನ್​ ಮುಂದಿದೆ.

4 / 5
ಇನ್ನು ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಹಾಗೆಯೇ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಈ ನಾಲ್ವರು ಬೌಲರುಗಳು ಮಾತ್ರ ಟೆಸ್ಟ್​ನಲ್ಲಿ 600ಕ್ಕೂ ಅಧಿಕ ವಿಕೆಟ್ ಪಡೆದಿದ್ದಾರೆ.

ಇನ್ನು ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಹಾಗೆಯೇ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಈ ನಾಲ್ವರು ಬೌಲರುಗಳು ಮಾತ್ರ ಟೆಸ್ಟ್​ನಲ್ಲಿ 600ಕ್ಕೂ ಅಧಿಕ ವಿಕೆಟ್ ಪಡೆದಿದ್ದಾರೆ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ