AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪಂದ್ಯದಲ್ಲಿ ಅಶ್ವಿನ್​ಗೆ ಮೂವರ ದಾಖಲೆ ಮುರಿಯುವ ಅವಕಾಶ

India vs Bangladesh Test: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಭಾರತ-ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ.

TV9 Web
| Edited By: |

Updated on: Sep 24, 2024 | 12:52 PM

Share
ಬಾಂಗ್ಲಾದೇಶ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ರವಿಚಂದ್ರನ್ ಅಶ್ವಿನ್​ ಕೂಡ ಒಬ್ಬರು. ಮೊದಲ ಇನಿಂಗ್ಸ್​ನಲ್ಲಿ 113 ರನ್ ಬಾರಿಸಿದ್ದ ಅಶ್ವಿನ್ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಬಾಂಗ್ಲಾದೇಶ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ರವಿಚಂದ್ರನ್ ಅಶ್ವಿನ್​ ಕೂಡ ಒಬ್ಬರು. ಮೊದಲ ಇನಿಂಗ್ಸ್​ನಲ್ಲಿ 113 ರನ್ ಬಾರಿಸಿದ್ದ ಅಶ್ವಿನ್ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

1 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ 6ನೇ ಸ್ಥಾನಕ್ಕೇರಿದ್ದರು. ಅದು ಸಹ ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ ಹಾಗೂ ಅನಿಲ್ ಕುಂಬ್ಳೆ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಇದರೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ 6ನೇ ಸ್ಥಾನಕ್ಕೇರಿದ್ದರು. ಅದು ಸಹ ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ ಹಾಗೂ ಅನಿಲ್ ಕುಂಬ್ಳೆ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 6
ಟೀಮ್ ಇಂಡಿಯಾ ಪರ 73 ಟೆಸ್ಟ್ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ವಿರಾಟ್ ಕೊಹ್ಲಿ 114 ಪಂದ್ಯಗಳಲ್ಲಿ 10 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದುಕೊಂಡಿದ್ದಾರೆ. ಇನ್ನು ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ 73 ಟೆಸ್ಟ್ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ವಿರಾಟ್ ಕೊಹ್ಲಿ 114 ಪಂದ್ಯಗಳಲ್ಲಿ 10 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದುಕೊಂಡಿದ್ದಾರೆ. ಇನ್ನು ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 6
ಇದೀಗ 101ನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ 10ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ 6ನೇ ಆಟಗಾರ ಎನಿಸಿಕೊಂಡಿದ್ದಾರೆ.

ಇದೀಗ 101ನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ 10ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ 6ನೇ ಆಟಗಾರ ಎನಿಸಿಕೊಂಡಿದ್ದಾರೆ.

4 / 6
ಇದೀಗ ಪಂದ್ಯ ಶ್ರೇಷ್ಠ ಪ್ರಶಸ್ತಿಯ ದಾಖಲೆ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಅಶ್ವಿನ್​ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಲು ಒಂದು ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯ ಅವಶ್ಯಕತೆಯಿದೆ. ಅದರಂತೆ ಕಾನ್ಪುರದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

ಇದೀಗ ಪಂದ್ಯ ಶ್ರೇಷ್ಠ ಪ್ರಶಸ್ತಿಯ ದಾಖಲೆ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಅಶ್ವಿನ್​ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಲು ಒಂದು ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯ ಅವಶ್ಯಕತೆಯಿದೆ. ಅದರಂತೆ ಕಾನ್ಪುರದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

5 / 6
ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಸೌತ್ ಆಫ್ರಿಕಾದ ಜಾಕ್ಸ್ ಕಾಲಿಸ್ ಹೆಸರಿನಲ್ಲಿದೆ. 166 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಲಿಸ್ ಒಟ್ಟು 23 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಮೂಲಕ ಟೆಸ್ಟ್​ನಲ್ಲಿ 20 ಕ್ಕೂ ಅಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಸೌತ್ ಆಫ್ರಿಕಾದ ಜಾಕ್ಸ್ ಕಾಲಿಸ್ ಹೆಸರಿನಲ್ಲಿದೆ. 166 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಲಿಸ್ ಒಟ್ಟು 23 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಮೂಲಕ ಟೆಸ್ಟ್​ನಲ್ಲಿ 20 ಕ್ಕೂ ಅಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

6 / 6
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ