AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಅಶ್ವಿನ್

Ravichandran Ashwin: ರವಿಚಂದ್ರನ್ ಅಶ್ವಿನ್ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. 2021 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 106 ರನ್ ಬಾರಿಸಿದ್ದ ಅಶ್ವಿನ್, ಇದೀಗ ಬಾಂಗ್ಲಾದೇಶ್ ವಿರುದ್ಧ 113 ರನ್​ಗಳನ್ನು ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 21, 2024 | 11:23 AM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಶ್ವಿನ್ 133 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 113 ರನ್ ಬಾರಿಸಿದ್ದರು.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಶ್ವಿನ್ 133 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 113 ರನ್ ಬಾರಿಸಿದ್ದರು.

1 / 6
ಈ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ 2 ಶತಕ ಹಾಗೂ ಮೂರಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಇಂಗ್ಲೆಂಡ್​ನ ಮಾಜಿ ನಾಯಕ ಇಯಾನ್ ಬಾಥಮ್ ಹೆಸರಿನಲ್ಲಿತ್ತು.

ಈ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ 2 ಶತಕ ಹಾಗೂ ಮೂರಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಇಂಗ್ಲೆಂಡ್​ನ ಮಾಜಿ ನಾಯಕ ಇಯಾನ್ ಬಾಥಮ್ ಹೆಸರಿನಲ್ಲಿತ್ತು.

2 / 6
ಇಯಾನ್ ಬಾಥಮ್ ಇಂಗ್ಲೆಂಡ್​ನ ಹೆಂಡಿಗ್ಲೆ ಮೈದಾನದಲ್ಲಿ 2 ಟೆಸ್ಟ್​ ಶತಕಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ಮೂರು ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದರು. ಈ ಮೂಲಕ ಒಂದೇ ಮೈದಾನದಲ್ಲಿ 2 ಶತಕ ಹಾಗೂ 3 ಬಾರಿ 5 ವಿಕೆಟ್​ ಪಡೆದ ವಿಶ್ವದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.

ಇಯಾನ್ ಬಾಥಮ್ ಇಂಗ್ಲೆಂಡ್​ನ ಹೆಂಡಿಗ್ಲೆ ಮೈದಾನದಲ್ಲಿ 2 ಟೆಸ್ಟ್​ ಶತಕಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ಮೂರು ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದರು. ಈ ಮೂಲಕ ಒಂದೇ ಮೈದಾನದಲ್ಲಿ 2 ಶತಕ ಹಾಗೂ 3 ಬಾರಿ 5 ವಿಕೆಟ್​ ಪಡೆದ ವಿಶ್ವದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.

3 / 6
ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ಅಶ್ವಿನ್ ಈವರೆಗೆ 2 ಟೆಸ್ಟ್​ ಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 4 ಬಾರಿ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಒಂದೇ ಮೈದಾನದಲ್ಲಿ ಅತ್ಯಧಿಕ ಶತಕ ಹಾಗೂ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡಿದ್ದಾರೆ.

ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ಅಶ್ವಿನ್ ಈವರೆಗೆ 2 ಟೆಸ್ಟ್​ ಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 4 ಬಾರಿ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಒಂದೇ ಮೈದಾನದಲ್ಲಿ ಅತ್ಯಧಿಕ ಶತಕ ಹಾಗೂ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡಿದ್ದಾರೆ.

4 / 6
ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ 8ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಲ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಸರಿಗಟ್ಟಲು ಅಶ್ವಿನ್​ ಕೇವಲ ಒಂದು ಸೆಂಚುರಿಯ ಅವಶ್ಯಕತೆಯಿದೆ. ಈ ಪಟ್ಟಿಯಲ್ಲಿ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅಗ್ರಸ್ಥಾನದಲ್ಲಿದ್ದಾರೆ.

ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ 8ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಲ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಸರಿಗಟ್ಟಲು ಅಶ್ವಿನ್​ ಕೇವಲ ಒಂದು ಸೆಂಚುರಿಯ ಅವಶ್ಯಕತೆಯಿದೆ. ಈ ಪಟ್ಟಿಯಲ್ಲಿ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅಗ್ರಸ್ಥಾನದಲ್ಲಿದ್ದಾರೆ.

5 / 6
ವೆಟ್ಟೋರಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಇದೀಗ 8ನೇ ಕ್ರಮಾಂಕದಲ್ಲಿ ಅಶ್ವಿನ್ 4 ಸೆಂಚುರಿಗಳನ್ನು ಸಿಡಿಸಿದ್ದು, ಹೀಗಾಗಿ ಇನ್ನೊಂದು ಶತಕದೊಂದಿಗೆ ವೆಟ್ಟೋರಿಯ ವಿಶ್ವ ದಾಖಲೆಯನ್ನು ಸರಿಗಟ್ಟುವುದನ್ನು ನಿರೀಕ್ಷಿಸಬಹುದು.

ವೆಟ್ಟೋರಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಇದೀಗ 8ನೇ ಕ್ರಮಾಂಕದಲ್ಲಿ ಅಶ್ವಿನ್ 4 ಸೆಂಚುರಿಗಳನ್ನು ಸಿಡಿಸಿದ್ದು, ಹೀಗಾಗಿ ಇನ್ನೊಂದು ಶತಕದೊಂದಿಗೆ ವೆಟ್ಟೋರಿಯ ವಿಶ್ವ ದಾಖಲೆಯನ್ನು ಸರಿಗಟ್ಟುವುದನ್ನು ನಿರೀಕ್ಷಿಸಬಹುದು.

6 / 6
Follow us
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್