AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರಳೀಧರನ್ ವಿಶ್ವ ದಾಖಲೆ ಸರಿಗಟ್ಟಿದ ಅಶ್ವಿನ್

India vs Bangladesh: ಚೆನ್ನೈನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಕಾನ್ಪುರದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಮೂಲಕ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Oct 01, 2024 | 4:16 PM

Share
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿ ಗೆಲುವಿನ ರೂವಾರಿಗಳಲ್ಲಿ ರವಿಚಂದ್ರನ್ ಅಶ್ವಿನ್ ಕೂಡ ಒಬ್ಬರು. ಈ ಸರಣಿಯ 2ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 2 ವಿಕೆಟ್ ಪಡೆದಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಮೂರು ವಿಕೆಟ್ ಉರುಳಿಸಿದ್ದರು.

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿ ಗೆಲುವಿನ ರೂವಾರಿಗಳಲ್ಲಿ ರವಿಚಂದ್ರನ್ ಅಶ್ವಿನ್ ಕೂಡ ಒಬ್ಬರು. ಈ ಸರಣಿಯ 2ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 2 ವಿಕೆಟ್ ಪಡೆದಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಮೂರು ವಿಕೆಟ್ ಉರುಳಿಸಿದ್ದರು.

1 / 6
ಇನ್ನು ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಭರ್ಜರಿ ಶತಕದ ಜೊತೆಗೆ 6 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸರಣಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇನ್ನು ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಭರ್ಜರಿ ಶತಕದ ಜೊತೆಗೆ 6 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸರಣಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

2 / 6
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಶ್ರೀಲಂಕಾದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಲಂಕಾ ಸ್ಪಿನ್ನರ್ 61 ಟೆಸ್ಟ್ ಸರಣಿಗಳಲ್ಲಿ ಒಟ್ಟು 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಶ್ರೀಲಂಕಾದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಲಂಕಾ ಸ್ಪಿನ್ನರ್ 61 ಟೆಸ್ಟ್ ಸರಣಿಗಳಲ್ಲಿ ಒಟ್ಟು 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

3 / 6
ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಯಶಸ್ವಿಯಾಗಿದ್ದಾರೆ. ಈವರೆಗೆ 43 ಟೆಸ್ಟ್ ಸರಣಿಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ 11 ಬಾರಿ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ರಚಿಸುವತ್ತ ದಾಪುಗಾಲಿಟ್ಟಿದ್ದಾರೆ.

ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಯಶಸ್ವಿಯಾಗಿದ್ದಾರೆ. ಈವರೆಗೆ 43 ಟೆಸ್ಟ್ ಸರಣಿಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ 11 ಬಾರಿ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ರಚಿಸುವತ್ತ ದಾಪುಗಾಲಿಟ್ಟಿದ್ದಾರೆ.

4 / 6
ಮುರಳೀಧರನ್ ವಿಶ್ವ ದಾಖಲೆ ಸರಿಗಟ್ಟಿದ ಅಶ್ವಿನ್

5 / 6
ಇನ್ನು ಮುರಳೀಧರನ್ ಹೆಸರಿನಲ್ಲಿರುವ ಈ ವಿಶ್ವ ದಾಖಲೆ ಮುರಿಯಲು ಅಶ್ವಿನ್​ ನ್ಯೂಝಿಲೆಂಡ್ ವಿರುದ್ಧದ ಸರಣಿಯವರೆಗೂ ಕಾಯಬೇಕು. ಅಕ್ಟೋಬರ್​ 16 ರಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲೂ ಅಶ್ವಿನ್ ಅದ್ಭುತ ಪ್ರದರ್ಶನದೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.

ಇನ್ನು ಮುರಳೀಧರನ್ ಹೆಸರಿನಲ್ಲಿರುವ ಈ ವಿಶ್ವ ದಾಖಲೆ ಮುರಿಯಲು ಅಶ್ವಿನ್​ ನ್ಯೂಝಿಲೆಂಡ್ ವಿರುದ್ಧದ ಸರಣಿಯವರೆಗೂ ಕಾಯಬೇಕು. ಅಕ್ಟೋಬರ್​ 16 ರಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲೂ ಅಶ್ವಿನ್ ಅದ್ಭುತ ಪ್ರದರ್ಶನದೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ