AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​​ನಲ್ಲಿ ಅವಕಾಶ ಸಿಗದ ಬಗ್ಗೆ ಮೌನ ಮುರಿದ ಆರ್. ಅಶ್ವಿನ್: ಏನಂದ್ರು ಗೊತ್ತೇ?

WTC Final: ರವಿಚಂದ್ರನ್ ಅಶ್ವಿನ್ ಭಾರತ ತಂಡ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಇವರಿಗೆ ಆಡುವ ಬಳಗದಲ್ಲೇ ಸ್ಥಾನ ಸಿಗಲಿಲ್ಲ. ಇದೀಗ ಈ ಬಗ್ಗೆ ಸ್ವತಃ ಆರ್. ಅಶ್ವಿನ್ ಮಾತನಾಡಿದ್ದಾರೆ.

Vinay Bhat
|

Updated on: Jun 16, 2023 | 9:44 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಮುಕ್ತಾಯಗೊಂಡಾಗಿದೆ. ಟೀಮ್ ಇಂಡಿಯಾ ಸೋತರೆ ಆಸ್ಟ್ರೇಲಿಯಾ ಪ್ರಶಸ್ತಿ ಎತ್ತಿ ಹಿಡಿದಿದೆ. ಈ ಪಂದ್ಯಕ್ಕೆ ಭಾರತ ಕೆಲ ಅಚ್ಚರಿ ನಿರ್ಧಾರ ಕೈಗೊಂಡಿತ್ತು. ಇದರಲ್ಲಿ ಟೆಸ್ಟ್ ಕ್ರಿಕೆಟ್​ನ ನಂಬರ್ ಒನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈಬಿಟ್ಟಿದ್ದು ಕೂಡ ಒಂದು.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಮುಕ್ತಾಯಗೊಂಡಾಗಿದೆ. ಟೀಮ್ ಇಂಡಿಯಾ ಸೋತರೆ ಆಸ್ಟ್ರೇಲಿಯಾ ಪ್ರಶಸ್ತಿ ಎತ್ತಿ ಹಿಡಿದಿದೆ. ಈ ಪಂದ್ಯಕ್ಕೆ ಭಾರತ ಕೆಲ ಅಚ್ಚರಿ ನಿರ್ಧಾರ ಕೈಗೊಂಡಿತ್ತು. ಇದರಲ್ಲಿ ಟೆಸ್ಟ್ ಕ್ರಿಕೆಟ್​ನ ನಂಬರ್ ಒನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈಬಿಟ್ಟಿದ್ದು ಕೂಡ ಒಂದು.

1 / 8
ರವಿಚಂದ್ರನ್ ಅಶ್ವಿನ್ ಭಾರತ ತಂಡ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದಾಗ ಅವರು ಫೈನಲ್​ನಲ್ಲೂ ಮುಖ್ಯ ಪಾತ್ರವಹಿಸಲಿದ್ದಾರೆ ಎಂದೇ ನಂಬಲಾಗಿತ್ತು. ಆದರೆ, ಇವರಿಗೆ ಆಡುವ ಬಳಗದಲ್ಲೇ ಸ್ಥಾನ ಸಿಗಲಿಲ್ಲ. ಇದೀಗ ಈ ಬಗ್ಗೆ ಸ್ವತಃ ಆರ್. ಅಶ್ವಿನ್ ಮಾತನಾಡಿದ್ದಾರೆ.

ರವಿಚಂದ್ರನ್ ಅಶ್ವಿನ್ ಭಾರತ ತಂಡ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದಾಗ ಅವರು ಫೈನಲ್​ನಲ್ಲೂ ಮುಖ್ಯ ಪಾತ್ರವಹಿಸಲಿದ್ದಾರೆ ಎಂದೇ ನಂಬಲಾಗಿತ್ತು. ಆದರೆ, ಇವರಿಗೆ ಆಡುವ ಬಳಗದಲ್ಲೇ ಸ್ಥಾನ ಸಿಗಲಿಲ್ಲ. ಇದೀಗ ಈ ಬಗ್ಗೆ ಸ್ವತಃ ಆರ್. ಅಶ್ವಿನ್ ಮಾತನಾಡಿದ್ದಾರೆ.

2 / 8
ಡಬ್ಲ್ಯೂಟಿಸಿ ಫೈನಲ್ ಪಂದ್ಯದ ಆಡುವ 11ರ ಬಳಗದಲ್ಲಿ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಚಾರ ಎರಡು ದಿನಗಳ ಮೊದಲೇ ತಮಗೆ ತಿಳಿದಿತ್ತು ಎಂದು ಅಶ್ವಿನ್ ಹೇಳಿಕೊಂಡಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ ನಡೆಸಿದ ಸಂದರ್ಶನದನ್ನು ಅಶ್ವಿನ್ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.

ಡಬ್ಲ್ಯೂಟಿಸಿ ಫೈನಲ್ ಪಂದ್ಯದ ಆಡುವ 11ರ ಬಳಗದಲ್ಲಿ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಚಾರ ಎರಡು ದಿನಗಳ ಮೊದಲೇ ತಮಗೆ ತಿಳಿದಿತ್ತು ಎಂದು ಅಶ್ವಿನ್ ಹೇಳಿಕೊಂಡಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ ನಡೆಸಿದ ಸಂದರ್ಶನದನ್ನು ಅಶ್ವಿನ್ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.

3 / 8
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವ ಆಸೆ ಖಂಡಿತಾ ನನ್ನಲ್ಲೂ ಇತ್ತು. ಏಕೆಂದರೆ ತಂಡ ಫೈನಲ್‌ ತಲುಪಲು ನನ್ನ ಕೊಡುಗೆಯೂ ಇದೆ. ಕಳೆದ ಫೈನಲ್‌ನಲ್ಲೂ ನಾನು ಆಡಿ 4 ವಿಕೆಟ್‌ ಪಡೆದಿದ್ದೆ ಎಂದು ಅಶ್ವಿನ್ ಹೇಳಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವ ಆಸೆ ಖಂಡಿತಾ ನನ್ನಲ್ಲೂ ಇತ್ತು. ಏಕೆಂದರೆ ತಂಡ ಫೈನಲ್‌ ತಲುಪಲು ನನ್ನ ಕೊಡುಗೆಯೂ ಇದೆ. ಕಳೆದ ಫೈನಲ್‌ನಲ್ಲೂ ನಾನು ಆಡಿ 4 ವಿಕೆಟ್‌ ಪಡೆದಿದ್ದೆ ಎಂದು ಅಶ್ವಿನ್ ಹೇಳಿದ್ದಾರೆ.

4 / 8
2018-19ರ ಬಳಿಕ ವಿದೇಶಿ ಪಿಚ್‌ಗಳಲ್ಲಿ ನನ್ನ ಬೌಲಿಂಗ್ ಪ್ರದರ್ಶನ ಉತ್ತಮವಾಗಿದೆ. ತಂಡಕ್ಕೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದೇನೆ. ಆದರೆ, ನನ್ನನ್ನು ಆಯ್ಕೆ ಮಾಡಲಿಲ್ಲ. ನಾನು ಇದನ್ನು ನಾಯಕ ಅಥವಾ ತರಬೇತುದಾರನಾಗಿ ನೋಡುತ್ತಿದ್ದೇನೆ. ತಂಡದ ಪರವಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ - ಅಶ್ವಿನ್.

2018-19ರ ಬಳಿಕ ವಿದೇಶಿ ಪಿಚ್‌ಗಳಲ್ಲಿ ನನ್ನ ಬೌಲಿಂಗ್ ಪ್ರದರ್ಶನ ಉತ್ತಮವಾಗಿದೆ. ತಂಡಕ್ಕೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದೇನೆ. ಆದರೆ, ನನ್ನನ್ನು ಆಯ್ಕೆ ಮಾಡಲಿಲ್ಲ. ನಾನು ಇದನ್ನು ನಾಯಕ ಅಥವಾ ತರಬೇತುದಾರನಾಗಿ ನೋಡುತ್ತಿದ್ದೇನೆ. ತಂಡದ ಪರವಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ - ಅಶ್ವಿನ್.

5 / 8
ಡಬ್ಲ್ಯೂಟಿಸಿ ಫೈನಲ್‌ನಲ್ಲಿ ನಾನು ಆಡಲು ಅರ್ಹ ಆಟಗಾರ ಎಂದು ಅವರಿಗೆ ಅನ್ನಿಸಿದ್ದನ್ನು ತಿಳಿದು ಬಹಳಾ ಸಂತಸವಾಯಿತು. ಆದರೆ, ದುರದೃಷ್ಟವಶಾತ್ ನನಗೆ ಅವಕಾಶ ಸಿಗಲಿಲ್ಲ. ನಾನು ಆಡುವ 11ರ ಬಳಗದಿಂದ ನಾನು ಹೊರಗುಳಿಯಲಿದ್ದೇನೆ ಎಂಬುದು ನನಗೆ 2 ದಿನ ಮೊದಲೇ ತಿಳಿದಿತ್ತು ಎಂದು ಅಶ್ವಿನ್ ಹೇಳಿದ್ದಾರೆ.

ಡಬ್ಲ್ಯೂಟಿಸಿ ಫೈನಲ್‌ನಲ್ಲಿ ನಾನು ಆಡಲು ಅರ್ಹ ಆಟಗಾರ ಎಂದು ಅವರಿಗೆ ಅನ್ನಿಸಿದ್ದನ್ನು ತಿಳಿದು ಬಹಳಾ ಸಂತಸವಾಯಿತು. ಆದರೆ, ದುರದೃಷ್ಟವಶಾತ್ ನನಗೆ ಅವಕಾಶ ಸಿಗಲಿಲ್ಲ. ನಾನು ಆಡುವ 11ರ ಬಳಗದಿಂದ ನಾನು ಹೊರಗುಳಿಯಲಿದ್ದೇನೆ ಎಂಬುದು ನನಗೆ 2 ದಿನ ಮೊದಲೇ ತಿಳಿದಿತ್ತು ಎಂದು ಅಶ್ವಿನ್ ಹೇಳಿದ್ದಾರೆ.

6 / 8
ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿದ್ದರೂ ನನ್ನ ಗುರಿ ತಂಡಕ್ಕೆ ಯಾವುದಾದರೂ ರೀತಿಯಲ್ಲಿ ನೆರವಾಗಿ ಟ್ರೋಫಿ ಗೆಲ್ಲುವಂತೆ ಮಾಡಬೇಕು ಎಂಬುದಾಗಿತ್ತು ಎಂಬುದು ಅಶ್ವಿನ್ ಮಾತಾಗಿತ್ತು.

ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿದ್ದರೂ ನನ್ನ ಗುರಿ ತಂಡಕ್ಕೆ ಯಾವುದಾದರೂ ರೀತಿಯಲ್ಲಿ ನೆರವಾಗಿ ಟ್ರೋಫಿ ಗೆಲ್ಲುವಂತೆ ಮಾಡಬೇಕು ಎಂಬುದಾಗಿತ್ತು ಎಂಬುದು ಅಶ್ವಿನ್ ಮಾತಾಗಿತ್ತು.

7 / 8
ನಾವು ಕೊನೆಯ ಬಾರಿ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾಗ 2-2 ಅಂತರದಿಂದ ಡ್ರಾಗೊಂಡಿತ್ತು. ಆಗ ಇಂಗ್ಲೆಂಡ್‌ನಲ್ಲಿ 4 ವೇಗಿಗಳು ಮತ್ತು 1 ಸ್ಪಿನ್ನರ್ ಸಂಯೋಜನೆಯೊಂದಿಗ ಕಣಕ್ಕಿಳಿಯಲಾಗಿತ್ತು. ಅದೇ ಲೆಕ್ಕಾಚಾರದಲ್ಲಿ ಫೈನಲ್‌ನಲ್ಲಿಯೂ ಕಣಕ್ಕಿಳಿಯಲು ನಿರ್ಧರಿಸರಬಹುದು ಎಂದು ಆರ್ ಅಶ್ವಿನ್ ಹೇಳಿದ್ದಾರೆ.

ನಾವು ಕೊನೆಯ ಬಾರಿ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾಗ 2-2 ಅಂತರದಿಂದ ಡ್ರಾಗೊಂಡಿತ್ತು. ಆಗ ಇಂಗ್ಲೆಂಡ್‌ನಲ್ಲಿ 4 ವೇಗಿಗಳು ಮತ್ತು 1 ಸ್ಪಿನ್ನರ್ ಸಂಯೋಜನೆಯೊಂದಿಗ ಕಣಕ್ಕಿಳಿಯಲಾಗಿತ್ತು. ಅದೇ ಲೆಕ್ಕಾಚಾರದಲ್ಲಿ ಫೈನಲ್‌ನಲ್ಲಿಯೂ ಕಣಕ್ಕಿಳಿಯಲು ನಿರ್ಧರಿಸರಬಹುದು ಎಂದು ಆರ್ ಅಶ್ವಿನ್ ಹೇಳಿದ್ದಾರೆ.

8 / 8
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!