AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಟಿ20 ಲೀಗ್​ಗೆ ಹೆಸರು ನೋಂದಾಯಿಸಲು ಮುಂದಾದ ಆರ್ ಅಶ್ವಿನ್

Ravichandran Ashwin: ಐಪಿಎಲ್​ನಿಂದ ನಿವೃತ್ತಿ ಹೊಂದಿದ ರವಿಚಂದ್ರನ್ ಅಶ್ವಿನ್, ತಮ್ಮ ದೇಹದ ಸ್ಥಿತಿಯನ್ನು ಉಲ್ಲೇಖಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಆದಾಗ್ಯೂ, ಅವರು ಯುಎಇಯ ILT20 ಲೀಗ್ ನಲ್ಲಿ ಆಡುವ ಬಯಕೆ ವ್ಯಕ್ತಪಡಿಸಿದ್ದು, ಹರಾಜಿನಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಈ ಲೀಗ್‌ನ ಹರಾಜಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ ಸೆಪ್ಟೆಂಬರ್ 10 ಆಗಿದೆ.

ಪೃಥ್ವಿಶಂಕರ
|

Updated on:Aug 31, 2025 | 9:49 PM

Share
ಕಳೆದ ವರ್ಷದ ಅಂತ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆ ಬಳಿಕ ಐಪಿಎಲ್‌ನಲ್ಲಿ ಆಡುವುದನ್ನು ಮುಂದುವರೆಸಿದ್ದರು. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಈ ಸೀಸನ್ ಆಡಿ ಮುಗಿಸಿದ್ದ ಅಶ್ವಿನ್ ಇದೀಗ ಈ ಮಿಲಿಯನ್ ಡಾಲರ್ ಟೂರ್ನಿಗೂ ವಿದಾಯ ಹೇಳಿದ್ದಾರೆ.

ಕಳೆದ ವರ್ಷದ ಅಂತ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆ ಬಳಿಕ ಐಪಿಎಲ್‌ನಲ್ಲಿ ಆಡುವುದನ್ನು ಮುಂದುವರೆಸಿದ್ದರು. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಈ ಸೀಸನ್ ಆಡಿ ಮುಗಿಸಿದ್ದ ಅಶ್ವಿನ್ ಇದೀಗ ಈ ಮಿಲಿಯನ್ ಡಾಲರ್ ಟೂರ್ನಿಗೂ ವಿದಾಯ ಹೇಳಿದ್ದಾರೆ.

1 / 6
ಐಪಿಎಲ್​ನಿಂದ ನಿವೃತ್ತಿಯಾಗಲು ನಿಜವಾದ ಕಾರಣ ತಿಳಿಸಿದ್ದ ಅಶ್ವಿನ್ ‘ಮೂರು ತಿಂಗಳ ಕಾಲ ನಡೆಯುವ ಐಪಿಎಲ್​ನಲ್ಲಿ ಇನ್ನು ಮುಂದೆ ಆಡಲು ಸಾಧ್ಯವಾಗುವುದಿಲ್ಲ. ನನ್ನ ದೇಹವು ನನಗೆ ಬೆಂಬಲಿಸುತ್ತಿಲ್ಲ. ಐಪಿಎಲ್​ನಲ್ಲಿ ಆಡಲು ನೀವು ಸಂಪೂರ್ಣವಾಗಿ ಫಿಟ್ ಆಗಿರಬೇಕು. ಆದರೆ ನನಗೆ ಅಷ್ಟು ಕಷ್ಟಪಟ್ಟು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ.

ಐಪಿಎಲ್​ನಿಂದ ನಿವೃತ್ತಿಯಾಗಲು ನಿಜವಾದ ಕಾರಣ ತಿಳಿಸಿದ್ದ ಅಶ್ವಿನ್ ‘ಮೂರು ತಿಂಗಳ ಕಾಲ ನಡೆಯುವ ಐಪಿಎಲ್​ನಲ್ಲಿ ಇನ್ನು ಮುಂದೆ ಆಡಲು ಸಾಧ್ಯವಾಗುವುದಿಲ್ಲ. ನನ್ನ ದೇಹವು ನನಗೆ ಬೆಂಬಲಿಸುತ್ತಿಲ್ಲ. ಐಪಿಎಲ್​ನಲ್ಲಿ ಆಡಲು ನೀವು ಸಂಪೂರ್ಣವಾಗಿ ಫಿಟ್ ಆಗಿರಬೇಕು. ಆದರೆ ನನಗೆ ಅಷ್ಟು ಕಷ್ಟಪಟ್ಟು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ.

2 / 6
ಆದರೆ ನಿವೃತ್ತಿ ಘೋಷಿಸುವಾಗಲೇ ವಿಶ್ವದಾದ್ಯಂತ ನಡೆಯುತ್ತಿರುವ ಟಿ20 ಲೀಗ್​ಗಳಲ್ಲಿ ಆಡುವುದನ್ನು ಮುಂದುವರೆಸುವುದಾಗಿ ಹೇಳಿದ್ದ ಅಶ್ವಿನ್, ತಮ್ಮ ಹೇಳಿಕೆಯಂತೆಯೇ ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ನಡೆಯಲ್ಲಿರುವ ಐಎಲ್‌ಟಿ 20 ಲೀಗ್​ನತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.

ಆದರೆ ನಿವೃತ್ತಿ ಘೋಷಿಸುವಾಗಲೇ ವಿಶ್ವದಾದ್ಯಂತ ನಡೆಯುತ್ತಿರುವ ಟಿ20 ಲೀಗ್​ಗಳಲ್ಲಿ ಆಡುವುದನ್ನು ಮುಂದುವರೆಸುವುದಾಗಿ ಹೇಳಿದ್ದ ಅಶ್ವಿನ್, ತಮ್ಮ ಹೇಳಿಕೆಯಂತೆಯೇ ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ನಡೆಯಲ್ಲಿರುವ ಐಎಲ್‌ಟಿ 20 ಲೀಗ್​ನತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.

3 / 6
ಕ್ರಿಕ್‌ಬಜ್ ವರದಿಯ ಪ್ರಕಾರ, ಅಶ್ವಿನ್ ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ನಡೆಯಲಿರುವ ಈ ಲೀಗ್‌ನ ಮುಂದಿನ ಆವೃತ್ತಿಯಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ವರದಿಯ ಪ್ರಕಾರ, ಅಶ್ವಿನ್ ಅವರು ಐಎಲ್‌ಟಿ 20 ಆಯೋಜಕರೊಂದಿಗೆ ಮಾತನಾಡುತ್ತಿರುವುದಾಗಿ ಮತ್ತು ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಮುಂದಾಗಿದ್ದಾರೆ.

ಕ್ರಿಕ್‌ಬಜ್ ವರದಿಯ ಪ್ರಕಾರ, ಅಶ್ವಿನ್ ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ನಡೆಯಲಿರುವ ಈ ಲೀಗ್‌ನ ಮುಂದಿನ ಆವೃತ್ತಿಯಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ವರದಿಯ ಪ್ರಕಾರ, ಅಶ್ವಿನ್ ಅವರು ಐಎಲ್‌ಟಿ 20 ಆಯೋಜಕರೊಂದಿಗೆ ಮಾತನಾಡುತ್ತಿರುವುದಾಗಿ ಮತ್ತು ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಮುಂದಾಗಿದ್ದಾರೆ.

4 / 6
ಈ ಲೀಗ್‌ನ ಹರಾಜಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ ಸೆಪ್ಟೆಂಬರ್ 10 ಆಗಿದೆ. ಆ ಬಳಿಕ ಈ ಲೀಗ್​ನ ಹರಾಜು ಸೆಪ್ಟೆಂಬರ್ 30 ರಂದು ನಡೆಯಲಿದೆ. ಈ ಲೀಗ್ ಅನ್ನು ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಆಯೋಜಿಸುತ್ತಿದ್ದು, 2023 ರಿಂದ ನಡೆಸಿಕೊಂಡು ಬರಲಾಗುತ್ತಿದೆ.

ಈ ಲೀಗ್‌ನ ಹರಾಜಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ ಸೆಪ್ಟೆಂಬರ್ 10 ಆಗಿದೆ. ಆ ಬಳಿಕ ಈ ಲೀಗ್​ನ ಹರಾಜು ಸೆಪ್ಟೆಂಬರ್ 30 ರಂದು ನಡೆಯಲಿದೆ. ಈ ಲೀಗ್ ಅನ್ನು ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಆಯೋಜಿಸುತ್ತಿದ್ದು, 2023 ರಿಂದ ನಡೆಸಿಕೊಂಡು ಬರಲಾಗುತ್ತಿದೆ.

5 / 6
ಈ ಹರಾಜಿನಲ್ಲಿ ಅಶ್ವಿನ್ ಅವರನ್ನು ಖರೀದಿಸಿದರೆ, ಅವರು ILT20 ನಲ್ಲಿ ಆಡಿದ ಮೂರನೇ ಭಾರತೀಯ ಆಟಗಾರರಾಗುತ್ತಾರೆ. ಈ ಲೀಗ್‌ನಲ್ಲಿ ಆಡಿದ ಮೊದಲ ಭಾರತೀಯ ಆಟಗಾರರು 2023 ರಲ್ಲಿ ಮೊದಲ ಆವೃತ್ತಿಯಲ್ಲಿ ಭಾಗವಹಿಸಿದ ರಾಬಿನ್ ಉತ್ತಪ್ಪ ಮತ್ತು ಯೂಸುಫ್ ಪಠಾಣ್. ಈ ಇಬ್ಬರೂ ಆಟಗಾರರು ದುಬೈ ಕ್ಯಾಪಿಟಲ್ಸ್ ಪರ ಆಡಿದ್ದರು.

ಈ ಹರಾಜಿನಲ್ಲಿ ಅಶ್ವಿನ್ ಅವರನ್ನು ಖರೀದಿಸಿದರೆ, ಅವರು ILT20 ನಲ್ಲಿ ಆಡಿದ ಮೂರನೇ ಭಾರತೀಯ ಆಟಗಾರರಾಗುತ್ತಾರೆ. ಈ ಲೀಗ್‌ನಲ್ಲಿ ಆಡಿದ ಮೊದಲ ಭಾರತೀಯ ಆಟಗಾರರು 2023 ರಲ್ಲಿ ಮೊದಲ ಆವೃತ್ತಿಯಲ್ಲಿ ಭಾಗವಹಿಸಿದ ರಾಬಿನ್ ಉತ್ತಪ್ಪ ಮತ್ತು ಯೂಸುಫ್ ಪಠಾಣ್. ಈ ಇಬ್ಬರೂ ಆಟಗಾರರು ದುಬೈ ಕ್ಯಾಪಿಟಲ್ಸ್ ಪರ ಆಡಿದ್ದರು.

6 / 6

Published On - 9:47 pm, Sun, 31 August 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ