Rachin Ravindra: ಬೆಂಗಳೂರಿನಲ್ಲಿ ಮಿಂಚುವ ಕಿವೀಸ್ ಕನ್ನಡಿಗ

Rachin Ravindra: ರಚಿನ್ ರವೀಂದ್ರ ಅವರ ಪೋಷಕರು ಮೂಲತಃ ಬೆಂಗಳೂರಿನವರು. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿ ಅಲ್ಲಿಯೇ ನೆಲೆಸಿದ್ದರು. ಇದೀಗ ಮಗ ರಚಿನ್ ರವೀಂದ್ರ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದಾರೆ.

|

Updated on: Oct 20, 2024 | 2:03 PM

ನ್ಯೂಝಿಲೆಂಡ್ ತಂಡದ ಭರವಸೆಯ ಯುವ ಆಲ್​ರೌಂಡರ್ ರಚಿನ್ ರವೀಂದ್ರ (Rachin Ravindra) ಹಾಗೂ ಬೆಂಗಳೂರಿಗೂ ಬಿಡಿಸಲಾಗದ ನಂಟಿರುವುದು ಗೊತ್ತೇ ಇದೆ. ಈ ನಂಟಿಯೊಂದಿಗೆ ಯುವ ದಾಂಡಿಗ ತವರಿನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದೇ ವಿಶೇಷ.

ನ್ಯೂಝಿಲೆಂಡ್ ತಂಡದ ಭರವಸೆಯ ಯುವ ಆಲ್​ರೌಂಡರ್ ರಚಿನ್ ರವೀಂದ್ರ (Rachin Ravindra) ಹಾಗೂ ಬೆಂಗಳೂರಿಗೂ ಬಿಡಿಸಲಾಗದ ನಂಟಿರುವುದು ಗೊತ್ತೇ ಇದೆ. ಈ ನಂಟಿಯೊಂದಿಗೆ ಯುವ ದಾಂಡಿಗ ತವರಿನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದೇ ವಿಶೇಷ.

1 / 7
ಅಂದರೆ ರಚಿನ್ ರವೀಂದ್ರ ಅವರ ಪೋಷಕರು ಬೆಂಗಳೂರು ಮೂಲದವರು. ಅವರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಆಡಿದ ಚೊಚ್ಚಲ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ರಚಿನ್ ಅವರ ತಂದೆ ರವೀಂದ್ರ ಕೃಷ್ಣಮೂರ್ತಿ ಆಗಮಿಸಿದ್ದರು.

ಅಂದರೆ ರಚಿನ್ ರವೀಂದ್ರ ಅವರ ಪೋಷಕರು ಬೆಂಗಳೂರು ಮೂಲದವರು. ಅವರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಆಡಿದ ಚೊಚ್ಚಲ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ರಚಿನ್ ಅವರ ತಂದೆ ರವೀಂದ್ರ ಕೃಷ್ಣಮೂರ್ತಿ ಆಗಮಿಸಿದ್ದರು.

2 / 7
ಆದರೆ ತಂದೆಯ ನಿರೀಕ್ಷೆಯನ್ನು ರಚಿನ್ ರವೀಂದ್ರ ಹುಸಿ ಮಾಡಲಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮೇಲೆಕ್ಕೆತ್ತಿ ಸಂಭ್ರಮಿಸಿದರು. ಈ ಸಂಭ್ರಮದೊಂದಿಗೆ ಬೆಂಗಳೂರು ಮೈದಾನದೊಂದಿಗೆ ತನ್ನ ನಂಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ.

ಆದರೆ ತಂದೆಯ ನಿರೀಕ್ಷೆಯನ್ನು ರಚಿನ್ ರವೀಂದ್ರ ಹುಸಿ ಮಾಡಲಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮೇಲೆಕ್ಕೆತ್ತಿ ಸಂಭ್ರಮಿಸಿದರು. ಈ ಸಂಭ್ರಮದೊಂದಿಗೆ ಬೆಂಗಳೂರು ಮೈದಾನದೊಂದಿಗೆ ತನ್ನ ನಂಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ.

3 / 7
ಹೌದು, ರಚಿನ್ ರವೀಂದ್ರ ಬೆಂಗಳೂರಿನಲ್ಲಿ ಆಡಿರುವುದು ಕೇವಲ ನಾಲ್ಕು ಇನಿಂಗ್ಸ್​ಗಳು ಮಾತ್ರ. ಈ ನಾಲ್ಕು ಇನಿಂಗ್ಸ್​ಗಳಲ್ಲಿ ಯುವ ದಾಂಡಿಗನ ಬ್ಯಾಟ್​ನಿಂದ 2 ಶತಕಗಳು ಹಾಗೂ ಒಂದು ಅರ್ಧಶತಕ ಮೂಡಿಬಂದಿವೆ. ಮತ್ತೊಂದು ಇನಿಂಗ್ಸ್​ನಲ್ಲಿ ನಲ್ವತ್ತರ ಗಡಿದಾಟಿದ್ದಾರೆ. ಅಂದರೆ ತಂದೆಯ ತವರಿನಲ್ಲಿ ರಚಿನ್ ಬ್ಯಾಟ್ ಝಳಪಳಿಸುತ್ತಿರುವುದಂತು ಸುಳ್ಳಲ್ಲ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

ಹೌದು, ರಚಿನ್ ರವೀಂದ್ರ ಬೆಂಗಳೂರಿನಲ್ಲಿ ಆಡಿರುವುದು ಕೇವಲ ನಾಲ್ಕು ಇನಿಂಗ್ಸ್​ಗಳು ಮಾತ್ರ. ಈ ನಾಲ್ಕು ಇನಿಂಗ್ಸ್​ಗಳಲ್ಲಿ ಯುವ ದಾಂಡಿಗನ ಬ್ಯಾಟ್​ನಿಂದ 2 ಶತಕಗಳು ಹಾಗೂ ಒಂದು ಅರ್ಧಶತಕ ಮೂಡಿಬಂದಿವೆ. ಮತ್ತೊಂದು ಇನಿಂಗ್ಸ್​ನಲ್ಲಿ ನಲ್ವತ್ತರ ಗಡಿದಾಟಿದ್ದಾರೆ. ಅಂದರೆ ತಂದೆಯ ತವರಿನಲ್ಲಿ ರಚಿನ್ ಬ್ಯಾಟ್ ಝಳಪಳಿಸುತ್ತಿರುವುದಂತು ಸುಳ್ಳಲ್ಲ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

4 / 7
2023 ರಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ರಚಿನ್ ರವೀಂದ್ರ ಮೊದಲ ಬಾರಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿದಿದ್ದರು. ಈ ಚೊಚ್ಚಲ ಪಂದ್ಯದಲ್ಲಿ 94 ಎಸೆತಗಳಲ್ಲಿ 108 ರನ್ ಬಾರಿಸಿ ಅಬ್ಬರಿಸಿದ್ದರು. ಇದಾದ ಬಳಿಕ ಇದೇ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ 34 ಎಸೆತಗಳಲ್ಲಿ 42 ರನ್ ಚಚ್ಚಿದ್ದರು.

2023 ರಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ರಚಿನ್ ರವೀಂದ್ರ ಮೊದಲ ಬಾರಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿದಿದ್ದರು. ಈ ಚೊಚ್ಚಲ ಪಂದ್ಯದಲ್ಲಿ 94 ಎಸೆತಗಳಲ್ಲಿ 108 ರನ್ ಬಾರಿಸಿ ಅಬ್ಬರಿಸಿದ್ದರು. ಇದಾದ ಬಳಿಕ ಇದೇ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ 34 ಎಸೆತಗಳಲ್ಲಿ 42 ರನ್ ಚಚ್ಚಿದ್ದರು.

5 / 7
ಇನ್ನು ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದ ರಚಿನ್ ರವೀಂದ್ರ ಆರ್​ಸಿಬಿ ವಿರುದ್ಧ ಇದೇ ಮೈದಾನದಲ್ಲಿ 37 ಎಸೆತಗಳಲ್ಲಿ 63 ರನ್ ಬಾರಿಸಿದ್ದರು. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತದ ವಿರುದ್ಧ 134 ರನ್​ಗಳ ಭರ್ಜರಿ ಶತಕ ಸಿಡಿಸಿದ್ದಾರೆ. ಅಂದರೆ ಬೆಂಗಳೂರಿನಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ರಚಿನ್ ರವೀಂದ್ರ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ.

ಇನ್ನು ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದ ರಚಿನ್ ರವೀಂದ್ರ ಆರ್​ಸಿಬಿ ವಿರುದ್ಧ ಇದೇ ಮೈದಾನದಲ್ಲಿ 37 ಎಸೆತಗಳಲ್ಲಿ 63 ರನ್ ಬಾರಿಸಿದ್ದರು. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತದ ವಿರುದ್ಧ 134 ರನ್​ಗಳ ಭರ್ಜರಿ ಶತಕ ಸಿಡಿಸಿದ್ದಾರೆ. ಅಂದರೆ ಬೆಂಗಳೂರಿನಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ರಚಿನ್ ರವೀಂದ್ರ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ.

6 / 7
ಹೀಗಾಗಿಯೇ ಇದೀಗ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಿವೀಸ್ ಕನ್ನಡಿಗ ರಚಿನ್ ರವೀಂದ್ರ ಅವರಿಂದ ಭರ್ಜರಿ ಪ್ರದರ್ಶನ ಮೂಡಿಬರುವುದು ಖಚಿತ ಎನ್ನಲಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲೂ ಕಿವೀಸ್ ಕನ್ನಡಿಗನಿಂದ ಬೆಂಗಳೂರಿನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಹೀಗಾಗಿಯೇ ಇದೀಗ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಿವೀಸ್ ಕನ್ನಡಿಗ ರಚಿನ್ ರವೀಂದ್ರ ಅವರಿಂದ ಭರ್ಜರಿ ಪ್ರದರ್ಶನ ಮೂಡಿಬರುವುದು ಖಚಿತ ಎನ್ನಲಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲೂ ಕಿವೀಸ್ ಕನ್ನಡಿಗನಿಂದ ಬೆಂಗಳೂರಿನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

7 / 7
Follow us
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ