AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ರಚಿನ್ ರವೀಂದ್ರ

Rachin Ravindra Records: ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರಚಿನ್ ರವೀಂದ್ರ ಅಗ್ರಸ್ಥಾನಕ್ಕೇರಿದ್ದಾರೆ. ಸದ್ಯ 565 ರನ್​ಗಳಿಸಿರುವ ರಚಿನ್ ಮೊದಲ ಸ್ಥಾನದಲ್ಲಿದ್ದರೆ, 550 ರನ್ ಬಾರಿಸಿರುವ ಕ್ವಿಂಟನ್ ಡಿಕಾಕ್ 2ನೇ ಸ್ಥಾನದಲ್ಲಿದ್ದಾರೆ. ಇನ್ನು 543 ರನ್​ ಕಲೆಹಾಕಿರುವ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ.

TV9 Web
| Edited By: |

Updated on: Nov 09, 2023 | 10:06 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 42 ರನ್​ ಬಾರಿಸುವ ಮೂಲಕ ನ್ಯೂಝಿಲೆಂಡ್​ನ ಯುವ ದಾಂಡಿಗ ರಚಿನ್ ರವೀಂದ್ರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಚಿನ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 42 ರನ್​ ಬಾರಿಸುವ ಮೂಲಕ ನ್ಯೂಝಿಲೆಂಡ್​ನ ಯುವ ದಾಂಡಿಗ ರಚಿನ್ ರವೀಂದ್ರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಚಿನ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 7
ಮೊದಲ ಓವರ್​ನಿಂದ ಲಂಕಾ ಬೌಲರ್​ಗಳನ್ನು ದಂಡಿಸಲಾರಂಭಿಸಿದ ಯುವ ಎಡಗೈ ದಾಂಡಿಗ ಕೇವಲ 34 ಎಸೆತಗಳಲ್ಲಿ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ 42 ರನ್​ಗಳೊಂದಿಗೆ ರಚಿನ್ ರವೀಂದ್ರ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

ಮೊದಲ ಓವರ್​ನಿಂದ ಲಂಕಾ ಬೌಲರ್​ಗಳನ್ನು ದಂಡಿಸಲಾರಂಭಿಸಿದ ಯುವ ಎಡಗೈ ದಾಂಡಿಗ ಕೇವಲ 34 ಎಸೆತಗಳಲ್ಲಿ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ 42 ರನ್​ಗಳೊಂದಿಗೆ ರಚಿನ್ ರವೀಂದ್ರ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

2 / 7
ಚೊಚ್ಚಲ ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ರಚಿನ್ ರವೀಂದ್ರ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಜಾನಿ ಬೈರ್​ಸ್ಟೋವ್ ಹೆಸರಿನಲ್ಲಿತ್ತು.

ಚೊಚ್ಚಲ ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ರಚಿನ್ ರವೀಂದ್ರ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಜಾನಿ ಬೈರ್​ಸ್ಟೋವ್ ಹೆಸರಿನಲ್ಲಿತ್ತು.

3 / 7
2019 ರ ಏಕದಿನ ವಿಶ್ವಕಪ್​ನಲ್ಲಿ ಜಾನಿ ಬೈರ್​ಸ್ಟೋವ್ 532 ರನ್​ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಚೊಚ್ಚಲ ವಿಶ್ವಕಪ್​ನಲ್ಲಿ 565 ರನ್​ ಕಲೆಹಾಕುವ ಮೂಲಕ ರಚಿನ್ ರವೀಂದ್ರ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2019 ರ ಏಕದಿನ ವಿಶ್ವಕಪ್​ನಲ್ಲಿ ಜಾನಿ ಬೈರ್​ಸ್ಟೋವ್ 532 ರನ್​ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಚೊಚ್ಚಲ ವಿಶ್ವಕಪ್​ನಲ್ಲಿ 565 ರನ್​ ಕಲೆಹಾಕುವ ಮೂಲಕ ರಚಿನ್ ರವೀಂದ್ರ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 7
ಹಾಗೆಯೇ ಏಕದಿನ ವಿಶ್ವಕಪ್​ನಲ್ಲಿ 25 ವಯಸ್ಸಿಗೂ ಮುನ್ನ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೂಡ ರಚಿನ್ ಹೆಸರಿಗೆ ಸೇರ್ಪಡೆಯಾಗಿದೆ. ಈ ಹಿಂದೆ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಹಾಗೆಯೇ ಏಕದಿನ ವಿಶ್ವಕಪ್​ನಲ್ಲಿ 25 ವಯಸ್ಸಿಗೂ ಮುನ್ನ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೂಡ ರಚಿನ್ ಹೆಸರಿಗೆ ಸೇರ್ಪಡೆಯಾಗಿದೆ. ಈ ಹಿಂದೆ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

5 / 7
1996ರ ಏಕದಿನ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್ 523 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 23 ವರ್ಷದ ರಚಿನ್ ರವೀಂದ್ರ 565 ರನ್​ಗಳಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1996ರ ಏಕದಿನ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್ 523 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 23 ವರ್ಷದ ರಚಿನ್ ರವೀಂದ್ರ 565 ರನ್​ಗಳಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 7
ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರಚಿನ್ ರವೀಂದ್ರ ಅಗ್ರಸ್ಥಾನಕ್ಕೇರಿದ್ದಾರೆ. ಸದ್ಯ 565 ರನ್​ಗಳಿಸಿರುವ ರಚಿನ್ ಮೊದಲ ಸ್ಥಾನದಲ್ಲಿದ್ದರೆ, 550 ರನ್ ಬಾರಿಸಿರುವ ಕ್ವಿಂಟನ್ ಡಿಕಾಕ್ 2ನೇ ಸ್ಥಾನದಲ್ಲಿದ್ದಾರೆ. ಇನ್ನು 543 ರನ್​ ಕಲೆಹಾಕಿರುವ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರಚಿನ್ ರವೀಂದ್ರ ಅಗ್ರಸ್ಥಾನಕ್ಕೇರಿದ್ದಾರೆ. ಸದ್ಯ 565 ರನ್​ಗಳಿಸಿರುವ ರಚಿನ್ ಮೊದಲ ಸ್ಥಾನದಲ್ಲಿದ್ದರೆ, 550 ರನ್ ಬಾರಿಸಿರುವ ಕ್ವಿಂಟನ್ ಡಿಕಾಕ್ 2ನೇ ಸ್ಥಾನದಲ್ಲಿದ್ದಾರೆ. ಇನ್ನು 543 ರನ್​ ಕಲೆಹಾಕಿರುವ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ