Rachin Ravindra: ಸ್ಪೋಟಕ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಕನ್ನಡಿಗ ರಚಿನ್ ರವೀಂದ್ರ

Rachin Ravindra Century: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ರವೀಂದ್ರ 89 ಎಸೆತಗಳನ್ನು ಎದುರಿಸಿದರು. ಈ ವೇಳೆ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿದರು. ಅಲ್ಲದೆ ಅಂತಿಮವಾಗಿ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಮಾರ್ನಸ್ ಲಾಬುಶೇನ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

| Edited By: Zahir Yusuf

Updated on: Oct 28, 2023 | 5:57 PM

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

1 / 7
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

2 / 7
ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.

ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.

3 / 7
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

4 / 7
ಇದಲ್ಲದೆ ಏಕದಿನ ವಿಶ್ವಕಪ್​ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್​ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.

ಇದಲ್ಲದೆ ಏಕದಿನ ವಿಶ್ವಕಪ್​ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್​ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.

5 / 7
ಇದೀಗ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

ಇದೀಗ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿ ಔಟಾದರು.

ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿ ಔಟಾದರು.

7 / 7
Follow us
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ