ಮಹಾರಾಜ ಟ್ರೋಫಿಯಲ್ಲಿ ಸಮಿತ್ ದ್ರಾವಿಡ್ ಅಟ್ಟರ್ ಫ್ಲಾಪ್..!

Updated on: Sep 03, 2024 | 8:07 AM

ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಸುಪುತ್ರ ಸಮಿತ್ ದ್ರಾವಿಡ್ ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು. 7 ಪಂದ್ಯಗಳಲ್ಲಿ ಅವಕಾಶ ಪಡೆದ ಸಮಿತ್ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಅಲ್ಲದೆ ಕೇವಲ 9 ಫೋರ್ ಹಾಗೂ 3 ಸಿಕ್ಸ್ ಬಾರಿಸಲಷ್ಟೇ ಶಕ್ತರಾಗಿದ್ದಾರೆ.

1 / 5
ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಎಲ್ಲರ ಗಮನ ಸೆಳೆದ ಆಟಗಾರನೆಂದರೆ ಸಮಿತ್ ದ್ರಾವಿಡ್. ಹೀಗೆ ಎಲ್ಲರ ಕೇಂದ್ರ ಬಿಂದುವಾಗಲು ಮುಖ್ಯ ಕಾರಣ ಹೆಸರಿನ ಹಿಂದೆಯಿದ್ದ ದ್ರಾವಿಡ್ ಎನ್ನುವ ಸರ್​​ನೇಮ್. ತಂದೆ ರಾಹುಲ್ ದ್ರಾವಿಡ್ ಅವರ ಸುಪುತ್ರನಾಗಿದ್ದರಿಂದ ಸಮಿತ್ ಟೂರ್ನಿಯ ಆರಂಭದಿಂದಲೇ ಸುದ್ದಿಯಲ್ಲಿದ್ದರು. ಆದರೆ ಟೂರ್ನಿ ಮುಗಿದಾಗ ಸಮಿತ್ ದ್ರಾವಿಡ್ ಸುದ್ದಿಯಾಗುತ್ತಿರುವುದು ಕಳಪೆ ಪ್ರದರ್ಶನದ ಕಾರಣದಿಂದ ಎಂಬುದು ವಿಪರ್ಯಾಸ.

ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಎಲ್ಲರ ಗಮನ ಸೆಳೆದ ಆಟಗಾರನೆಂದರೆ ಸಮಿತ್ ದ್ರಾವಿಡ್. ಹೀಗೆ ಎಲ್ಲರ ಕೇಂದ್ರ ಬಿಂದುವಾಗಲು ಮುಖ್ಯ ಕಾರಣ ಹೆಸರಿನ ಹಿಂದೆಯಿದ್ದ ದ್ರಾವಿಡ್ ಎನ್ನುವ ಸರ್​​ನೇಮ್. ತಂದೆ ರಾಹುಲ್ ದ್ರಾವಿಡ್ ಅವರ ಸುಪುತ್ರನಾಗಿದ್ದರಿಂದ ಸಮಿತ್ ಟೂರ್ನಿಯ ಆರಂಭದಿಂದಲೇ ಸುದ್ದಿಯಲ್ಲಿದ್ದರು. ಆದರೆ ಟೂರ್ನಿ ಮುಗಿದಾಗ ಸಮಿತ್ ದ್ರಾವಿಡ್ ಸುದ್ದಿಯಾಗುತ್ತಿರುವುದು ಕಳಪೆ ಪ್ರದರ್ಶನದ ಕಾರಣದಿಂದ ಎಂಬುದು ವಿಪರ್ಯಾಸ.

2 / 5
ಹೌದು, ಈ ಬಾರಿಯ ಮಹಾರಾಜ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರಲ್ಲಿ ಸಮಿತ್ ದ್ರಾವಿಡ್ ಕೂಡ ಒಬ್ಬರು. ಏಕೆಂದರೆ ಮೈಸೂರು ವಾರಿಯರ್ಸ್ ತಂಡದ ಪರ 7 ಪಂದ್ಯಗಳನ್ನಾಡಿರುವ ಸಮಿತ್ ಕಲೆಹಾಕಿದ್ದು ಕೇವಲ 82 ರನ್​ಗಳು. ಈ 82 ರನ್​ಗಳನ್ನು ಬಾರಿಸಲು ತೆಗೆದುಕೊಂಡಿದ್ದು 72 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

ಹೌದು, ಈ ಬಾರಿಯ ಮಹಾರಾಜ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರಲ್ಲಿ ಸಮಿತ್ ದ್ರಾವಿಡ್ ಕೂಡ ಒಬ್ಬರು. ಏಕೆಂದರೆ ಮೈಸೂರು ವಾರಿಯರ್ಸ್ ತಂಡದ ಪರ 7 ಪಂದ್ಯಗಳನ್ನಾಡಿರುವ ಸಮಿತ್ ಕಲೆಹಾಕಿದ್ದು ಕೇವಲ 82 ರನ್​ಗಳು. ಈ 82 ರನ್​ಗಳನ್ನು ಬಾರಿಸಲು ತೆಗೆದುಕೊಂಡಿದ್ದು 72 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 5
ಮೈಸೂರು ವಾರಿಯರ್ಸ್ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸಮಿತ್ ದ್ರಾವಿಡ್ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಲೆಹಾಕಿದ್ದು ಕೇವಲ 5 ರನ್​ಗಳು. ಇನ್ನು ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 12, ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2, ಮಂಗಳೂರು ಡ್ರಾಗನ್ಸ್ ವಿರುದ್ಧ 16, ಶಿವಮೊಗ್ಗ ಲಯನ್ಸ್ ವಿರುದ್ಧ 7 ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 7 ರನ್​ ​ಗಳಿಸಲಷ್ಟೇ ಶಕ್ತರಾಗಿದ್ದರು.

ಮೈಸೂರು ವಾರಿಯರ್ಸ್ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸಮಿತ್ ದ್ರಾವಿಡ್ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಲೆಹಾಕಿದ್ದು ಕೇವಲ 5 ರನ್​ಗಳು. ಇನ್ನು ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 12, ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2, ಮಂಗಳೂರು ಡ್ರಾಗನ್ಸ್ ವಿರುದ್ಧ 16, ಶಿವಮೊಗ್ಗ ಲಯನ್ಸ್ ವಿರುದ್ಧ 7 ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 7 ರನ್​ ​ಗಳಿಸಲಷ್ಟೇ ಶಕ್ತರಾಗಿದ್ದರು.

4 / 5
ಇನ್ನು ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಬಾರಿಸಿದ್ದು ಸಮಿತ್ ಅವರ ಗರಿಷ್ಠ ಸ್ಕೋರ್. 7 ಪಂದ್ಯಗಳಲ್ಲೂ ಬ್ಯಾಟ್ ಬೀಸಿರುವ ಯುವ ದಾಂಡಿಗ ಕಲೆಹಾಕಿದ್ದು ಕೇವಲ 84 ರನ್​ಗಳು ಮಾತ್ರ. ಅಂದರೆ ಕೇವಲ 11.71 ಸರಾಸರಿಯಲ್ಲಷ್ಟೇ ರನ್​ಗಳಿಸಿದ್ದಾರೆ.

ಇನ್ನು ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಬಾರಿಸಿದ್ದು ಸಮಿತ್ ಅವರ ಗರಿಷ್ಠ ಸ್ಕೋರ್. 7 ಪಂದ್ಯಗಳಲ್ಲೂ ಬ್ಯಾಟ್ ಬೀಸಿರುವ ಯುವ ದಾಂಡಿಗ ಕಲೆಹಾಕಿದ್ದು ಕೇವಲ 84 ರನ್​ಗಳು ಮಾತ್ರ. ಅಂದರೆ ಕೇವಲ 11.71 ಸರಾಸರಿಯಲ್ಲಷ್ಟೇ ರನ್​ಗಳಿಸಿದ್ದಾರೆ.

5 / 5
ಈ ಕಳಪೆ ಬ್ಯಾಟಿಂಗ್ ಕಾರಣದಿಂದಲೇ ಸಮಿತ್ ದ್ರಾವಿಡ್ ಅವರನ್ನು ಮೈಸೂರು ವಾರಿಯರ್ಸ್ ತಂಡವು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಲ್ಲಿ ಕಣಕ್ಕಿಳಿಸಿರಲಿಲ್ಲ. ಇದೀಗ ಭಾರತ ಅಂಡರ್ 19 ತಂಡದಲ್ಲಿ ಸ್ಥಾನ ಪಡೆದಿರುವ ಸಮಿತ್ ದ್ರಾವಿಡ್ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಪಂದ್ಯಗಳ ಮೂಲಕ ಉತ್ತಮ ಪ್ರದರ್ಶನ ನೀಡಲಿದ್ದಾರಾ ಕಾದು ನೋಡಬೇಕಿದೆ.

ಈ ಕಳಪೆ ಬ್ಯಾಟಿಂಗ್ ಕಾರಣದಿಂದಲೇ ಸಮಿತ್ ದ್ರಾವಿಡ್ ಅವರನ್ನು ಮೈಸೂರು ವಾರಿಯರ್ಸ್ ತಂಡವು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಲ್ಲಿ ಕಣಕ್ಕಿಳಿಸಿರಲಿಲ್ಲ. ಇದೀಗ ಭಾರತ ಅಂಡರ್ 19 ತಂಡದಲ್ಲಿ ಸ್ಥಾನ ಪಡೆದಿರುವ ಸಮಿತ್ ದ್ರಾವಿಡ್ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಪಂದ್ಯಗಳ ಮೂಲಕ ಉತ್ತಮ ಪ್ರದರ್ಶನ ನೀಡಲಿದ್ದಾರಾ ಕಾದು ನೋಡಬೇಕಿದೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us