AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅಧಿಕಾರಾವಧಿ ಎಷ್ಟು ದಿನ? ಜಯ್ ಶಾ ಹೇಳಿದ್ದೇನು?

Rahul Dravid: 2023 ರ ಏಕದಿನ ವಿಶ್ವಕಪ್ ನಂತರ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಕೊನೆಗೊಂಡಿತು. ಆದರೆ ಅವರನ್ನು ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಇದೀಗ ಜಯ್ ಶಾ ತಮ್ಮ ಕೋಚ್ ಹುದ್ದೆಗೆ ಸಂಬಂಧಿಸಿದಂತೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.

ಪೃಥ್ವಿಶಂಕರ
|

Updated on: Dec 10, 2023 | 8:15 AM

Share
ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪ್ರಸ್ತುತ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಅಲ್ಲಿ ತಂಡವು ಮೂರು ಪಂದ್ಯಗಳ ಟಿ 20 ಮತ್ತು ಏಕದಿನ ಸರಣಿಯಲ್ಲಿ ಭಾಗವಹಿಸಬೇಕಾಗಿದೆ ಮತ್ತು ನಂತರ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪ್ರಸ್ತುತ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಅಲ್ಲಿ ತಂಡವು ಮೂರು ಪಂದ್ಯಗಳ ಟಿ 20 ಮತ್ತು ಏಕದಿನ ಸರಣಿಯಲ್ಲಿ ಭಾಗವಹಿಸಬೇಕಾಗಿದೆ ಮತ್ತು ನಂತರ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

1 / 7
2023 ರ ಏಕದಿನ ವಿಶ್ವಕಪ್ ನಂತರ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಕೊನೆಗೊಂಡಿತು. ಆದರೆ ಅವರನ್ನು ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಇದೀಗ ಜಯ್ ಶಾ ತಮ್ಮ ಕೋಚ್ ಹುದ್ದೆಗೆ ಸಂಬಂಧಿಸಿದಂತೆ ದೊಡ್ಡ ಹೇಳಿಕೆಯನ್ನು ನೀಡಿದ್ದು, ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ ನಂತರ ಅವರ ಅಧಿಕಾರಾವಧಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

2023 ರ ಏಕದಿನ ವಿಶ್ವಕಪ್ ನಂತರ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಕೊನೆಗೊಂಡಿತು. ಆದರೆ ಅವರನ್ನು ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಇದೀಗ ಜಯ್ ಶಾ ತಮ್ಮ ಕೋಚ್ ಹುದ್ದೆಗೆ ಸಂಬಂಧಿಸಿದಂತೆ ದೊಡ್ಡ ಹೇಳಿಕೆಯನ್ನು ನೀಡಿದ್ದು, ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ ನಂತರ ಅವರ ಅಧಿಕಾರಾವಧಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

2 / 7
ಪಿಟಿಐ ಜೊತೆ ಮಾತನಾಡಿದ ಜಯ್ ಶಾ, ಭಾರತ ತಂಡವು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯ ಅವಧಿಯನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಜಯ್ ಶಾ, ಭಾರತ ತಂಡವು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯ ಅವಧಿಯನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

3 / 7
ಏಕದಿನ ವಿಶ್ವಕಪ್ 2023 ರ ನಂತರ ಹೊರಬಿದ್ದಿರುವ ಕೆಲವು ಸುದ್ದಿಗಳ ಪ್ರಕಾರ, ರಾಹುಲ್ ದ್ರಾವಿಡ್ 2023 ರ ಟಿ20 ವಿಶ್ವಕಪ್​ವರೆಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ಉಳಿಯುವ ಸಾಧ್ಯತೆಗಳಿವೆ.

ಏಕದಿನ ವಿಶ್ವಕಪ್ 2023 ರ ನಂತರ ಹೊರಬಿದ್ದಿರುವ ಕೆಲವು ಸುದ್ದಿಗಳ ಪ್ರಕಾರ, ರಾಹುಲ್ ದ್ರಾವಿಡ್ 2023 ರ ಟಿ20 ವಿಶ್ವಕಪ್​ವರೆಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ಉಳಿಯುವ ಸಾಧ್ಯತೆಗಳಿವೆ.

4 / 7
ಕೆಲ ದಿನಗಳ ಹಿಂದೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ನಾನು ಇನ್ನೂ ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎಂದು ಹೇಳಿದ್ದರು. ಇದೀಗ ಜಯ್ ಶಾ ಹೇಳಿಕೆ ಈ ವಿಚಾರಕ್ಕೆ ಹೊಸ ಟ್ವಿಸ್ಟ್ ನೀಡಿದ್ದು, ಇದಾದ ಬಳಿಕ ಅವರು ಈ ಹುದ್ದೆಯಲ್ಲಿ ಎಷ್ಟು ದಿನ ಇರುತ್ತಾರೋ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಕೆಲ ದಿನಗಳ ಹಿಂದೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ನಾನು ಇನ್ನೂ ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎಂದು ಹೇಳಿದ್ದರು. ಇದೀಗ ಜಯ್ ಶಾ ಹೇಳಿಕೆ ಈ ವಿಚಾರಕ್ಕೆ ಹೊಸ ಟ್ವಿಸ್ಟ್ ನೀಡಿದ್ದು, ಇದಾದ ಬಳಿಕ ಅವರು ಈ ಹುದ್ದೆಯಲ್ಲಿ ಎಷ್ಟು ದಿನ ಇರುತ್ತಾರೋ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

5 / 7
ಇನ್ನು, ಜಯ್ ಶಾ ನೀಡಿದ ಹೇಳಿಕೆಯ ನಂತರ, ತಂಡವು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ, ದ್ರಾವಿಡ್ ಅವರು ಎಷ್ಟು ಸಮಯದವರೆಗೆ ಈ ತಂಡದ ಮುಖ್ಯ ಕೋಚ್ ಆಗಿರುತ್ತಾರೆ? ಅಥವಾ ಬೇರೆ ಯಾರಾದರೂ ಈ ಜವಬ್ದಾರಿ ಹೊರುತ್ತಾರಾ? ಎಂಬ ಅಂಶದ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.

ಇನ್ನು, ಜಯ್ ಶಾ ನೀಡಿದ ಹೇಳಿಕೆಯ ನಂತರ, ತಂಡವು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ, ದ್ರಾವಿಡ್ ಅವರು ಎಷ್ಟು ಸಮಯದವರೆಗೆ ಈ ತಂಡದ ಮುಖ್ಯ ಕೋಚ್ ಆಗಿರುತ್ತಾರೆ? ಅಥವಾ ಬೇರೆ ಯಾರಾದರೂ ಈ ಜವಬ್ದಾರಿ ಹೊರುತ್ತಾರಾ? ಎಂಬ ಅಂಶದ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.

6 / 7
ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಅವಧಿಯಲ್ಲಿ ಭಾರತ ತಂಡವು 2023 ರ ಏಕಿನ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಫೈನಲ್ ತಲುಪಿತ್ತು. ಆದರೆ ತಂಡವು ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತು. ಈ ಸೋಲಿನ ಬಗ್ಗೆ ರಾಹುಲ್ ದ್ರಾವಿಡ್, ಪಿಚ್ ಅನ್ನು ಗ್ರಹಿಸುವಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಯಶಸ್ವಿಯಾಗಲಿಲ್ಲ ಮತ್ತು ಇದರಿಂದಾಗಿ ನಾವು ಅಂತಿಮ ಪಂದ್ಯದಲ್ಲಿ ಸೋತಿದ್ದೇವೆ ಎಂದು ಹೇಳಿಕೊಂಡಿದ್ದರು.

ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಅವಧಿಯಲ್ಲಿ ಭಾರತ ತಂಡವು 2023 ರ ಏಕಿನ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಫೈನಲ್ ತಲುಪಿತ್ತು. ಆದರೆ ತಂಡವು ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತು. ಈ ಸೋಲಿನ ಬಗ್ಗೆ ರಾಹುಲ್ ದ್ರಾವಿಡ್, ಪಿಚ್ ಅನ್ನು ಗ್ರಹಿಸುವಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಯಶಸ್ವಿಯಾಗಲಿಲ್ಲ ಮತ್ತು ಇದರಿಂದಾಗಿ ನಾವು ಅಂತಿಮ ಪಂದ್ಯದಲ್ಲಿ ಸೋತಿದ್ದೇವೆ ಎಂದು ಹೇಳಿಕೊಂಡಿದ್ದರು.

7 / 7
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ