AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಜೋಸ್ ಬಟ್ಲರ್​ಗೆ 40 ಕೋಟಿ ರೂ. ಆಫರ್ ನೀಡಿದ ರಾಜಸ್ಥಾನ್ ರಾಯಲ್ಸ್..!

Rajasthan Royals: ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ.

TV9 Web
| Edited By: |

Updated on:Jul 01, 2023 | 10:59 PM

Share
ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್​ಗೆ (Jos Buttler) ರಾಜಸ್ಥಾನ್ ರಾಯಲ್ಸ್ (Rajasthan Royals) ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದೆ. ಆದರೆ ಇದು ಐಪಿಎಲ್ ಆಡಲು ಅಲ್ಲ. ಬದಲಾಗಿ ಇನ್ನಿತರೆ ಟಿ20 ಲೀಗ್​ಗಳಲ್ಲಿ ಕಣಕ್ಕಿಳಿಯಲು ಎಂಬುದು ವಿಶೇಷ.

ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್​ಗೆ (Jos Buttler) ರಾಜಸ್ಥಾನ್ ರಾಯಲ್ಸ್ (Rajasthan Royals) ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದೆ. ಆದರೆ ಇದು ಐಪಿಎಲ್ ಆಡಲು ಅಲ್ಲ. ಬದಲಾಗಿ ಇನ್ನಿತರೆ ಟಿ20 ಲೀಗ್​ಗಳಲ್ಲಿ ಕಣಕ್ಕಿಳಿಯಲು ಎಂಬುದು ವಿಶೇಷ.

1 / 6
ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ಹಾಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡಗಳನ್ನು ಹೊಂದಿದೆ. ಹಾಗೆಯೇ ಇನ್ನಿತರ ಲೀಗ್​ಗಳಲ್ಲೂ ಹೊಸ ತಂಡಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ.

ಅಂದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ಹಾಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡಗಳನ್ನು ಹೊಂದಿದೆ. ಹಾಗೆಯೇ ಇನ್ನಿತರ ಲೀಗ್​ಗಳಲ್ಲೂ ಹೊಸ ತಂಡಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ.

2 / 6
ಈ ಎಲ್ಲಾ ತಂಡಗಳ ಪರ ಆಡಲು ಜೋಸ್ ಬಟ್ಲರ್ ಜೊತೆ ಖಾಯಂ ಒಪ್ಪಂದ ಮಾಡಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಆಟಗಾರನಿಗೆ ಆರ್​ಆರ್​ ಫ್ರಾಂಚೈಸಿ ನೀಡಿದ ಆಫರ್ ಬರೋಬ್ಬರಿ 40 ಕೋಟಿ ರೂ.

ಈ ಎಲ್ಲಾ ತಂಡಗಳ ಪರ ಆಡಲು ಜೋಸ್ ಬಟ್ಲರ್ ಜೊತೆ ಖಾಯಂ ಒಪ್ಪಂದ ಮಾಡಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಆಟಗಾರನಿಗೆ ಆರ್​ಆರ್​ ಫ್ರಾಂಚೈಸಿ ನೀಡಿದ ಆಫರ್ ಬರೋಬ್ಬರಿ 40 ಕೋಟಿ ರೂ.

3 / 6
ಆದರೆ ಇದಕ್ಕಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಈಗಾಗಲೇ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ. ಅಲ್ಲದೆ ಲೀಗ್​ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ.

ಆದರೆ ಇದಕ್ಕಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಈಗಾಗಲೇ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ರಾಷ್ಟ್ರೀಯ ತಂಡದ ಒಪ್ಪಂದವನ್ನು ಕೊನೆಗೊಳಿಸಿ ಮೇಜರ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ. ಹಾಗೆಯೇ ಟ್ರೆಂಟ್ ಬೌಲ್ಟ್ ಕೂಡ ನ್ಯೂಜಿಲೆಂಡ್ ರಾಷ್ಟ್ರೀಯ ತಂಡದ ಜೊತೆಗಿನ ಒಪ್ಪಂದ ಕೊನೆಗೊಳಿಸಿದ್ದಾರೆ. ಅಲ್ಲದೆ ಲೀಗ್​ ಕ್ರಿಕೆಟ್​ನತ್ತ ಮುಖ ಮಾಡಿದ್ದಾರೆ.

4 / 6
ಇದೇ ಮಾದರಿಯಲ್ಲಿ ಜೋಸ್ ಬಟ್ಲರ್​ಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 40 ಕೋಟಿ ರೂ.ಗಳ ಆಫರ್ ನೀಡಿದೆ. ಇದಕ್ಕಾಗಿ ಬಟ್ಲರ್ ರಾಷ್ಟ್ರೀಯ ಒಪ್ಪಂದ ಕೊನೆಗೊಳಿಸಬೇಕಾಗಿ ಬರಬಹುದು.

ಇದೇ ಮಾದರಿಯಲ್ಲಿ ಜೋಸ್ ಬಟ್ಲರ್​ಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 40 ಕೋಟಿ ರೂ.ಗಳ ಆಫರ್ ನೀಡಿದೆ. ಇದಕ್ಕಾಗಿ ಬಟ್ಲರ್ ರಾಷ್ಟ್ರೀಯ ಒಪ್ಪಂದ ಕೊನೆಗೊಳಿಸಬೇಕಾಗಿ ಬರಬಹುದು.

5 / 6
ಏಕೆಂದರೆ ಈ ಒಪ್ಪಂದಗಳ ಪ್ರಕಾರ ಫ್ರಾಂಚೈಸಿ ಲೀಗ್​ಗಳ ಪಂದ್ಯಗಳಿರುವಾಗ ಅವರು ರಾಷ್ಟ್ರೀಯ ತಂಡದ ಪರ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬಟ್ಲರ್ ಅವರ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

ಏಕೆಂದರೆ ಈ ಒಪ್ಪಂದಗಳ ಪ್ರಕಾರ ಫ್ರಾಂಚೈಸಿ ಲೀಗ್​ಗಳ ಪಂದ್ಯಗಳಿರುವಾಗ ಅವರು ರಾಷ್ಟ್ರೀಯ ತಂಡದ ಪರ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬಟ್ಲರ್ ಅವರ ಮುಂದಿನ ನಡೆಯೇನು ಎಂಬುದೇ ಈಗ ಕುತೂಹಲ.

6 / 6

Published On - 10:54 pm, Sat, 1 July 23

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ