AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟೀಂ ಇಂಡಿಯಾದಿಂದ ಪಾಕ್ ವೇಗಿಗಳಿಗೆ ಬೆಲೆ ಇಲ್ಲದಂತಾಯಿತು’; ಮಾಜಿ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ

PAK vs BAN: ಬಾಂಗ್ಲಾದೇಶ ವಿರುದ್ಧದ ಪಾಕ್ ತಂಡದ ಸೋಲಿನ ವಿಶ್ಲೇಷಣೆ ಮಾಡಿರುವ ರಮೀಜ್ ರಾಜಾ, ‘ಮೊದಲನೆಯದಾಗಿ ತಂಡದ ಆಯ್ಕೆಯಲ್ಲಿ ತಪ್ಪಾಗಿದೆ. ಸ್ಪಿನ್ನರ್ ಇಲ್ಲದೆ ತಂಡವನ್ನು ಕಣಕ್ಕಿಳಿಸಲಾಗಿತ್ತು. ಎರಡನೆಯದಾಗಿ, ನಮ್ಮ ವೇಗದ ಬೌಲರ್‌ಗಳು ಗಳಿಸಿದ್ದ ಖ್ಯಾತಿ ಈಗ ಇಲ್ಲವಾಗಿದೆ. ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ, ನಮ್ಮ ವೇಗದ ಬೌಲಿಂಗ್ ವಿಭಾಗವನ್ನು ಸರಿಯಾಗಿ ದಂಡಿಸಿದ್ದೆ ಇದಕ್ಕೆಲ್ಲ ಕಾರಣ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Aug 28, 2024 | 5:03 PM

Share
ಪ್ರಸ್ತುತ ಪಾಕಿಸ್ತಾನ ತಂಡ ತನ್ನ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಎರಡು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ 10 ವಿಕೆಟ್​ಗಳಿಂದ ಸೋತಿರುವ ಪಾಕ್ ತಂಡ ತನ್ನ ದೇಶದಲ್ಲೇ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಗಿದೆ. ತಂಡದ ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರು ತಮ್ಮದೇ ಆಟಗಾರರು ಮತ್ತು ತಂಡವನ್ನು ಟೀಕಿಸುತ್ತಿದ್ದಾರೆ.

ಪ್ರಸ್ತುತ ಪಾಕಿಸ್ತಾನ ತಂಡ ತನ್ನ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಎರಡು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ 10 ವಿಕೆಟ್​ಗಳಿಂದ ಸೋತಿರುವ ಪಾಕ್ ತಂಡ ತನ್ನ ದೇಶದಲ್ಲೇ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಗಿದೆ. ತಂಡದ ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರು ತಮ್ಮದೇ ಆಟಗಾರರು ಮತ್ತು ತಂಡವನ್ನು ಟೀಕಿಸುತ್ತಿದ್ದಾರೆ.

1 / 7
ಈ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ರಮೀಜ್ ರಾಜಾ ಅಚ್ಚರಿಯ ಹೇಳಿಕೆ ನೀಡಿದ್ದು, ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನದ ಸೋಲಿಗೆ ಟೀಂ ಇಂಡಿಯಾವೇ ಕಾರಣ ಎಂದು ಆರೋಪಿಸಿದ್ದಾರೆ. ಕಳೆದ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್​ಗಳು, ಪಾಕಿಸ್ತಾನದ ಬೌಲಿಂಗ್ ವಿಭಾಗವನ್ನು ಬೆಂಡೆತ್ತಿದ್ದೆ ಕಾರಣ ಎಂದಿದ್ದಾರೆ.

ಈ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ರಮೀಜ್ ರಾಜಾ ಅಚ್ಚರಿಯ ಹೇಳಿಕೆ ನೀಡಿದ್ದು, ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನದ ಸೋಲಿಗೆ ಟೀಂ ಇಂಡಿಯಾವೇ ಕಾರಣ ಎಂದು ಆರೋಪಿಸಿದ್ದಾರೆ. ಕಳೆದ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್​ಗಳು, ಪಾಕಿಸ್ತಾನದ ಬೌಲಿಂಗ್ ವಿಭಾಗವನ್ನು ಬೆಂಡೆತ್ತಿದ್ದೆ ಕಾರಣ ಎಂದಿದ್ದಾರೆ.

2 / 7
ಬಾಂಗ್ಲಾದೇಶ ವಿರುದ್ಧದ ಪಾಕ್ ತಂಡದ ಸೋಲಿನ ವಿಶ್ಲೇಷಣೆ ಮಾಡಿರುವ ರಮೀಜ್ ರಾಜಾ, ‘ಮೊದಲನೆಯದಾಗಿ ತಂಡದ ಆಯ್ಕೆಯಲ್ಲಿ ತಪ್ಪಾಗಿದೆ. ಸ್ಪಿನ್ನರ್ ಇಲ್ಲದೆ ತಂಡವನ್ನು ಕಣಕ್ಕಿಳಿಸಲಾಗಿತ್ತು. ಎರಡನೆಯದಾಗಿ, ನಮ್ಮ ವೇಗದ ಬೌಲರ್‌ಗಳು ಗಳಿಸಿದ್ದ ಖ್ಯಾತಿ ಈಗ ಇಲ್ಲವಾಗಿದೆ. ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ, ನಮ್ಮ ವೇಗದ ಬೌಲಿಂಗ್ ವಿಭಾಗವನ್ನು ಸರಿಯಾಗಿ ದಂಡಿಸಿತ್ತು.

ಬಾಂಗ್ಲಾದೇಶ ವಿರುದ್ಧದ ಪಾಕ್ ತಂಡದ ಸೋಲಿನ ವಿಶ್ಲೇಷಣೆ ಮಾಡಿರುವ ರಮೀಜ್ ರಾಜಾ, ‘ಮೊದಲನೆಯದಾಗಿ ತಂಡದ ಆಯ್ಕೆಯಲ್ಲಿ ತಪ್ಪಾಗಿದೆ. ಸ್ಪಿನ್ನರ್ ಇಲ್ಲದೆ ತಂಡವನ್ನು ಕಣಕ್ಕಿಳಿಸಲಾಗಿತ್ತು. ಎರಡನೆಯದಾಗಿ, ನಮ್ಮ ವೇಗದ ಬೌಲರ್‌ಗಳು ಗಳಿಸಿದ್ದ ಖ್ಯಾತಿ ಈಗ ಇಲ್ಲವಾಗಿದೆ. ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ, ನಮ್ಮ ವೇಗದ ಬೌಲಿಂಗ್ ವಿಭಾಗವನ್ನು ಸರಿಯಾಗಿ ದಂಡಿಸಿತ್ತು.

3 / 7
ಆ ನಂತರವೇ ನಮ್ಮ ತಂಡದ ಆಟಗಾರರಲ್ಲಿ ಆತ್ಮವಿಶ್ವಾಸದ ಕೊರತೆ ಎದುರಾಯಿತು. ಹೀಗಾಗಿ ತಂಡ ಸತತ ಸೋಲುಗಳಿಗೆ ಗುರಿಯಾಯಿತು. ಕಳೆದ ಏಷ್ಯಾಕಪ್‌ನಲ್ಲಿ ಅದರಲ್ಲೂ ವೇಗದ ಬೌಲಿಂಗ್‌ಗೆ ಅನುಕೂಲಕರವಾದ ಪರಿಸ್ಥಿತಿಗಳಲ್ಲಿ ಟೀಂ ಇಂಡಿಯಾ ನಮ್ಮ ಬೌಲರ್​ಗಳ ಮೇಲೆ ಪ್ರತಿ ದಾಳಿ ನಡೆಸಿತು. ಅದಕ್ಕೂ ಮುನ್ನ ನಮ್ಮ ಬೌಲರ್‌ಗಳನ್ನು ಎದುರಿಸುವುದು ಜಗತ್ತಿಗೆ ನಿಗೂಢವಾಗಿತ್ತು.

ಆ ನಂತರವೇ ನಮ್ಮ ತಂಡದ ಆಟಗಾರರಲ್ಲಿ ಆತ್ಮವಿಶ್ವಾಸದ ಕೊರತೆ ಎದುರಾಯಿತು. ಹೀಗಾಗಿ ತಂಡ ಸತತ ಸೋಲುಗಳಿಗೆ ಗುರಿಯಾಯಿತು. ಕಳೆದ ಏಷ್ಯಾಕಪ್‌ನಲ್ಲಿ ಅದರಲ್ಲೂ ವೇಗದ ಬೌಲಿಂಗ್‌ಗೆ ಅನುಕೂಲಕರವಾದ ಪರಿಸ್ಥಿತಿಗಳಲ್ಲಿ ಟೀಂ ಇಂಡಿಯಾ ನಮ್ಮ ಬೌಲರ್​ಗಳ ಮೇಲೆ ಪ್ರತಿ ದಾಳಿ ನಡೆಸಿತು. ಅದಕ್ಕೂ ಮುನ್ನ ನಮ್ಮ ಬೌಲರ್‌ಗಳನ್ನು ಎದುರಿಸುವುದು ಜಗತ್ತಿಗೆ ನಿಗೂಢವಾಗಿತ್ತು.

4 / 7
ಆದರೆ ಪಾಕ್ ಬೌಲರ್​ಗಳನ್ನು ದಂಡಿಸಲು ಇರುವ ಮಾರ್ಗವೆಂದರೆ ಅದು ಕೇವಲ ಪ್ರತಿದಾಳಿ/ ಆಕ್ರಮಣಕಾರಿ ಬ್ಯಾಟಿಂಗ್‌ ಎಂಬುದನ್ನು ಟೀಂ ಇಂಡಿಯಾ ಇಡೀ ಜಗತ್ತಿಗೆ ತೋರಿಸಿಕೊಟ್ಟಿತು. ಇದರ ಜೊತೆಗೆ ನಮ್ಮ ಬೌಲರ್​ಗಳು ಎಸೆಯುವ ವೇಗ ಕಡಿಮೆಯಾಗಿದೆ ಮತ್ತು ಅವರ ಕೌಶಲ್ಯವೂ ಕಡಿಮೆಯಾಗಿದೆ ಎಂದು ರಮೀಜ್ ರಾಜಾ ದೂರಿದ್ದಾರೆ.

ಆದರೆ ಪಾಕ್ ಬೌಲರ್​ಗಳನ್ನು ದಂಡಿಸಲು ಇರುವ ಮಾರ್ಗವೆಂದರೆ ಅದು ಕೇವಲ ಪ್ರತಿದಾಳಿ/ ಆಕ್ರಮಣಕಾರಿ ಬ್ಯಾಟಿಂಗ್‌ ಎಂಬುದನ್ನು ಟೀಂ ಇಂಡಿಯಾ ಇಡೀ ಜಗತ್ತಿಗೆ ತೋರಿಸಿಕೊಟ್ಟಿತು. ಇದರ ಜೊತೆಗೆ ನಮ್ಮ ಬೌಲರ್​ಗಳು ಎಸೆಯುವ ವೇಗ ಕಡಿಮೆಯಾಗಿದೆ ಮತ್ತು ಅವರ ಕೌಶಲ್ಯವೂ ಕಡಿಮೆಯಾಗಿದೆ ಎಂದು ರಮೀಜ್ ರಾಜಾ ದೂರಿದ್ದಾರೆ.

5 / 7
ಮುಂದುವರೆದು ಮಾತನಾಡಿದ ಅವರು, ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶದ ವೇಗದ ಬೌಲರ್‌ಗಳು ಹೆಚ್ಚು ಆಕ್ರಮಣಕಾರಿಯಾಗಿ ಕಾಣುತ್ತಿದ್ದರು. ಆದರೆ ನಮ್ಮ ಬೌಲರ್‌ಗಳಲ್ಲಿ ಅದು ಕಾಣಲಿಲ್ಲ. ಜೊತೆಗೆ ನಾಯಕ ಶಾನ್ ಮಸೂದ್ ಕೂಡ ಪರಿಸ್ಥಿತಿಗಳನ್ನು, ಅರ್ಥಮಾಡಿಕೊಳ್ಳುವಲ್ಲಿ ಎಡವಿದರು. ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯನ್ನು ಸೋಲಲು ಅಲ್ಲಿನ ಪರಿಸ್ಥಿತಿಗಳು ಕಾರಣ ಎಂಬುದನ್ನು ನಾನು ಅರ್ಥಮಾಡಿಕೊಳ್ಳುತ್ತೇನೆ.

ಮುಂದುವರೆದು ಮಾತನಾಡಿದ ಅವರು, ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶದ ವೇಗದ ಬೌಲರ್‌ಗಳು ಹೆಚ್ಚು ಆಕ್ರಮಣಕಾರಿಯಾಗಿ ಕಾಣುತ್ತಿದ್ದರು. ಆದರೆ ನಮ್ಮ ಬೌಲರ್‌ಗಳಲ್ಲಿ ಅದು ಕಾಣಲಿಲ್ಲ. ಜೊತೆಗೆ ನಾಯಕ ಶಾನ್ ಮಸೂದ್ ಕೂಡ ಪರಿಸ್ಥಿತಿಗಳನ್ನು, ಅರ್ಥಮಾಡಿಕೊಳ್ಳುವಲ್ಲಿ ಎಡವಿದರು. ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯನ್ನು ಸೋಲಲು ಅಲ್ಲಿನ ಪರಿಸ್ಥಿತಿಗಳು ಕಾರಣ ಎಂಬುದನ್ನು ನಾನು ಅರ್ಥಮಾಡಿಕೊಳ್ಳುತ್ತೇನೆ.

6 / 7
ಆದರೆ ಈಗ ನೀವು ತವರಿನ ಪರಿಸ್ಥಿತಿಯಲ್ಲಿ ಸೋಲುತ್ತಿರುವಿರಿ ಮತ್ತು ಅದು ಕೂಡ ಬಾಂಗ್ಲಾದೇಶದಂತಹ ತಂಡದ ವಿರುದ್ಧ ಎಂಬುದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಶಾನ್ ಮಸೂದ್ ಪರಿಸ್ಥಿತಿಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲಿಲ್ಲ ಎಂದು ನಾನು ಭಾವಿಸುತ್ತೇನೆ. ಮಸೂದ್ ತನ್ನ ಬ್ಯಾಟಿಂಗ್ ಅನ್ನು ಸುಧಾರಿಸಬೇಕು ಮತ್ತು ನಿಮಗೆ ಆಟದ ಬಗ್ಗೆ ಸ್ವಲ್ಪ ಜ್ಞಾನವಿದೆ ಎಂದು ತೋರಿಸಬೇಕು ಎಂದರು.

ಆದರೆ ಈಗ ನೀವು ತವರಿನ ಪರಿಸ್ಥಿತಿಯಲ್ಲಿ ಸೋಲುತ್ತಿರುವಿರಿ ಮತ್ತು ಅದು ಕೂಡ ಬಾಂಗ್ಲಾದೇಶದಂತಹ ತಂಡದ ವಿರುದ್ಧ ಎಂಬುದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಶಾನ್ ಮಸೂದ್ ಪರಿಸ್ಥಿತಿಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲಿಲ್ಲ ಎಂದು ನಾನು ಭಾವಿಸುತ್ತೇನೆ. ಮಸೂದ್ ತನ್ನ ಬ್ಯಾಟಿಂಗ್ ಅನ್ನು ಸುಧಾರಿಸಬೇಕು ಮತ್ತು ನಿಮಗೆ ಆಟದ ಬಗ್ಗೆ ಸ್ವಲ್ಪ ಜ್ಞಾನವಿದೆ ಎಂದು ತೋರಿಸಬೇಕು ಎಂದರು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ