Shreyas Iyer: ಆಡಿದ 4 ಪಂದ್ಯಗಳಲ್ಲಿ 3 ಬಾರಿ ಶೂನ್ಯಕ್ಕೆ ಔಟ್..! ಟೀಂ ಇಂಡಿಯಾದಿಂದ ಶ್ರೇಯಸ್ ಇನ್ನಷ್ಟು ದೂರ

|

Updated on: Oct 12, 2024 | 4:32 PM

Ranji Trophy 2024-25: ಇದುವರೆಗೆ ಆಡಿರುವ ಯಾವ ದೇಶೀ ಪಂದ್ಯದಲ್ಲೂ ಶ್ರೇಯಸ್ ಬ್ಯಾಟ್ ಬಿಗ್ ಇನ್ನಿಂಗ್ಸ್ ಆಡಿಲ್ಲ. ಇದೀಗ ಆರಂಭವಾಗಿರುವ ರಣಜಿ ಟ್ರೋಫಿಯಲ್ಲೂ ಅಯ್ಯರ್ ಅವರ ಕಳಪೆ ಫಾರ್ಮ್ ಮುಂದುವರೆದಿದೆ. ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುತ್ತಿರುವ ಅಯ್ಯರ್, ಬರೋಡಾ ವಿರುದ್ಧದ ಪಂದ್ಯದಲ್ಲಿ ಎಂಟು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಔಟಾಗಿದ್ದಾರೆ.

1 / 6
ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್​ ಕೆಲವು ದಿನಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರನ್ನು ಟೀಂ ಇಂಡಿಯಾದಿಂದ ಹೊರಗಿಡಲಾಗಿದೆ. ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ಇನ್ನಿಲ್ಲದ ಕಸರತ್ತು ಮಾಡುತ್ತಿರುವ ಶ್ರೇಯಸ್ ಅಯ್ಯರ್, ದೇಶೀ ಟೂರ್ನಿಯಲ್ಲಿ ನಿರತರಾಗಿದ್ದಾರೆ.

ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್​ ಕೆಲವು ದಿನಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರನ್ನು ಟೀಂ ಇಂಡಿಯಾದಿಂದ ಹೊರಗಿಡಲಾಗಿದೆ. ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ಇನ್ನಿಲ್ಲದ ಕಸರತ್ತು ಮಾಡುತ್ತಿರುವ ಶ್ರೇಯಸ್ ಅಯ್ಯರ್, ದೇಶೀ ಟೂರ್ನಿಯಲ್ಲಿ ನಿರತರಾಗಿದ್ದಾರೆ.

2 / 6
ಆದರೆ ಇದುವರೆಗೆ ಆಡಿರುವ ಯಾವ ದೇಶೀ ಪಂದ್ಯದಲ್ಲೂ ಶ್ರೇಯಸ್ ಬ್ಯಾಟ್ ಬಿಗ್ ಇನ್ನಿಂಗ್ಸ್ ಆಡಿಲ್ಲ. ಇದೀಗ ಆರಂಭವಾಗಿರುವ ರಣಜಿ ಟ್ರೋಫಿಯಲ್ಲೂ ಅಯ್ಯರ್ ಅವರ ಕಳಪೆ ಫಾರ್ಮ್ ಮುಂದುವರೆದಿದೆ. ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುತ್ತಿರುವ ಅಯ್ಯರ್, ಬರೋಡಾ ವಿರುದ್ಧದ ಪಂದ್ಯದಲ್ಲಿ ಎಂಟು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಔಟಾಗಿದ್ದಾರೆ.

ಆದರೆ ಇದುವರೆಗೆ ಆಡಿರುವ ಯಾವ ದೇಶೀ ಪಂದ್ಯದಲ್ಲೂ ಶ್ರೇಯಸ್ ಬ್ಯಾಟ್ ಬಿಗ್ ಇನ್ನಿಂಗ್ಸ್ ಆಡಿಲ್ಲ. ಇದೀಗ ಆರಂಭವಾಗಿರುವ ರಣಜಿ ಟ್ರೋಫಿಯಲ್ಲೂ ಅಯ್ಯರ್ ಅವರ ಕಳಪೆ ಫಾರ್ಮ್ ಮುಂದುವರೆದಿದೆ. ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುತ್ತಿರುವ ಅಯ್ಯರ್, ಬರೋಡಾ ವಿರುದ್ಧದ ಪಂದ್ಯದಲ್ಲಿ ಎಂಟು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಔಟಾಗಿದ್ದಾರೆ.

3 / 6
ಈ ಮೂಲಕ ಅಯ್ಯರ್ ಈ ಬಾರಿಯ ದೇಶೀ ಆವೃತ್ತಿಯಲ್ಲಿ ಮೂರನೇ ಬಾರಿಗೆ ಶೂನ್ಯಕ್ಕೆ ಔಟಾದ ಬೇಡದ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಅಯ್ಯರ್ ಅವರನ್ನು ಅನುಭವಿ ಎಡಗೈ ಸ್ಪಿನ್ನರ್ ಭಾರ್ಗವ್ ಭಟ್ ಪೆವಿಲಿಯನ್​ಗೆ ಕಳುಹಿಸಿದರು.

ಈ ಮೂಲಕ ಅಯ್ಯರ್ ಈ ಬಾರಿಯ ದೇಶೀ ಆವೃತ್ತಿಯಲ್ಲಿ ಮೂರನೇ ಬಾರಿಗೆ ಶೂನ್ಯಕ್ಕೆ ಔಟಾದ ಬೇಡದ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಅಯ್ಯರ್ ಅವರನ್ನು ಅನುಭವಿ ಎಡಗೈ ಸ್ಪಿನ್ನರ್ ಭಾರ್ಗವ್ ಭಟ್ ಪೆವಿಲಿಯನ್​ಗೆ ಕಳುಹಿಸಿದರು.

4 / 6
ರಣಜಿ ಟ್ರೋಫಿಗೂ ಮುನ್ನ ನಡೆದ ದುಲೀಪ್ ಟ್ರೋಫಿಯಲ್ಲೂ ಅಯ್ಯರ್ ಬ್ಯಾಟ್ ಮೌನಕ್ಕೆ ಶರಣಾಗಿತ್ತು. ಪಂದ್ಯಾವಳಿಯಲ್ಲಿ ಭಾರತ 'ಡಿ' ತಂಡದ ನಾಯಕತ್ವವಹಿಸಿಕೊಂಡಿದ್ದ ಅಯ್ಯರ್ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ರಣಜಿಯಲ್ಲೂ ಶೂನ್ಯ ಸಾಧನೆ ಮಾಡಿದ್ದಾರೆ. ಈ ಮೂಲಕ ಅಯ್ಯರ್, ತಮ್ಮ ಕೊನೆಯ ನಾಲ್ಕು ಪ್ರಥಮ ದರ್ಜೆ ಪಂದ್ಯಗಳ ಮೊದಲ ಇನ್ನಿಂಗ್ಸ್​ನಲ್ಲಿ ಮೂರು ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆಯನ್ನು ನಿರ್ಮಿಸಿದ್ದಾರೆ.

ರಣಜಿ ಟ್ರೋಫಿಗೂ ಮುನ್ನ ನಡೆದ ದುಲೀಪ್ ಟ್ರೋಫಿಯಲ್ಲೂ ಅಯ್ಯರ್ ಬ್ಯಾಟ್ ಮೌನಕ್ಕೆ ಶರಣಾಗಿತ್ತು. ಪಂದ್ಯಾವಳಿಯಲ್ಲಿ ಭಾರತ 'ಡಿ' ತಂಡದ ನಾಯಕತ್ವವಹಿಸಿಕೊಂಡಿದ್ದ ಅಯ್ಯರ್ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ರಣಜಿಯಲ್ಲೂ ಶೂನ್ಯ ಸಾಧನೆ ಮಾಡಿದ್ದಾರೆ. ಈ ಮೂಲಕ ಅಯ್ಯರ್, ತಮ್ಮ ಕೊನೆಯ ನಾಲ್ಕು ಪ್ರಥಮ ದರ್ಜೆ ಪಂದ್ಯಗಳ ಮೊದಲ ಇನ್ನಿಂಗ್ಸ್​ನಲ್ಲಿ ಮೂರು ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 6
ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅವರ ಪ್ರದರ್ಶನ ಸ್ಥಿರವಾಗಿಲ್ಲ. ಶಾರ್ಟ್ ಪಿಚ್ ಎಸೆತಗಳ ವಿರುದ್ಧ ಅವರ ದೌರ್ಬಲ್ಯ ಯಾರಿಂದಲೂ ಮರೆಯಾಗಿಲ್ಲ. ಇದು ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಅವರ ಕಳಪೆ ಫಾರ್ಮ್ ಟೆಸ್ಟ್ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸದ್ಯ ರಾಷ್ಟ್ರೀಯ ತಂಡದ ಭಾಗವಾಗದಿರಲು ಇದೇ ಕಾರಣ. ಇತ್ತೀಚೆಗೆ ನಡೆದ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯಲ್ಲೂ ಅಯ್ಯರ್‌ಗೆ ಅವಕಾಶ ಸಿಕ್ಕಿರಲಿಲ್ಲ.

ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅವರ ಪ್ರದರ್ಶನ ಸ್ಥಿರವಾಗಿಲ್ಲ. ಶಾರ್ಟ್ ಪಿಚ್ ಎಸೆತಗಳ ವಿರುದ್ಧ ಅವರ ದೌರ್ಬಲ್ಯ ಯಾರಿಂದಲೂ ಮರೆಯಾಗಿಲ್ಲ. ಇದು ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಅವರ ಕಳಪೆ ಫಾರ್ಮ್ ಟೆಸ್ಟ್ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸದ್ಯ ರಾಷ್ಟ್ರೀಯ ತಂಡದ ಭಾಗವಾಗದಿರಲು ಇದೇ ಕಾರಣ. ಇತ್ತೀಚೆಗೆ ನಡೆದ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯಲ್ಲೂ ಅಯ್ಯರ್‌ಗೆ ಅವಕಾಶ ಸಿಕ್ಕಿರಲಿಲ್ಲ.

6 / 6
ಇದಲ್ಲದೆ ಬಿಸಿಸಿಐನ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಗುಳಿದಿರುವುದರಿಂದ ಅವರ ಮೇಲೆ ಒತ್ತಡ ಹೆಚ್ಚಿದೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಯ್ಯರ್ ಅವರನ್ನು ಆಯ್ಕೆ ಮಾಡುವ ನಿರೀಕ್ಷೆಯಿಲ್ಲ ಎಂದು ವರದಿಗಳು ಹೇಳುತ್ತಿವೆ. ಇದಲ್ಲದೆ, ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ತವರು ಟೆಸ್ಟ್ ಸರಣಿಯಿಂದಲೂ ಅವರನ್ನು ಹೊರಗಿಡಲಾಗಿದೆ. ಇದೆಲ್ಲವನ್ನು ನೋಡಿದರೆ, ಕಳಪೆ ಫಾರ್ಮ್‌ನಿಂದಾಗಿ ಅಯ್ಯರ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಅಪಾಯದಲ್ಲಿದೆ ಎಂಬುದು ಸ್ಪಷ್ಟವಾಗಿದೆ.

ಇದಲ್ಲದೆ ಬಿಸಿಸಿಐನ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಗುಳಿದಿರುವುದರಿಂದ ಅವರ ಮೇಲೆ ಒತ್ತಡ ಹೆಚ್ಚಿದೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಯ್ಯರ್ ಅವರನ್ನು ಆಯ್ಕೆ ಮಾಡುವ ನಿರೀಕ್ಷೆಯಿಲ್ಲ ಎಂದು ವರದಿಗಳು ಹೇಳುತ್ತಿವೆ. ಇದಲ್ಲದೆ, ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ತವರು ಟೆಸ್ಟ್ ಸರಣಿಯಿಂದಲೂ ಅವರನ್ನು ಹೊರಗಿಡಲಾಗಿದೆ. ಇದೆಲ್ಲವನ್ನು ನೋಡಿದರೆ, ಕಳಪೆ ಫಾರ್ಮ್‌ನಿಂದಾಗಿ ಅಯ್ಯರ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಅಪಾಯದಲ್ಲಿದೆ ಎಂಬುದು ಸ್ಪಷ್ಟವಾಗಿದೆ.