Cheteshwar Pujara: ದಾಖಲೆಯ 18ನೇ ದ್ವಿಶತಕ ಸಿಡಿಸಿದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ

Ranji Trophy 2024: ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಸೌರಾಷ್ಟ್ರ ತಂಡವನ್ನು ಪ್ರತಿನಿಧಿಸುತ್ತಿರುವ ಪೂಜಾರ, ಛತ್ತೀಸ್‌ಗಢ ವಿರುದ್ಧದ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 383 ಎಸೆತಗಳನ್ನು ಎದುರಿಸಿದ ಪೂಜಾರ 25 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 234 ರನ್ ಕಲೆಹಾಕಿದರು.

|

Updated on: Oct 21, 2024 | 5:05 PM

ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಚೇತೇಶ್ವರ ಪೂಜಾರ ತಮ್ಮ ಅಮೋಘ ಪ್ರದರ್ಶನದ ಮೂಲಕ ಮತ್ತೊಮ್ಮೆ ರಾಷ್ಟ್ರೀಯ ತಂಡದ ಕದ ತಟ್ಟಿದ್ದಾರೆ. ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಸೌರಾಷ್ಟ್ರ ತಂಡವನ್ನು ಪ್ರತಿನಿಧಿಸುತ್ತಿರುವ ಪೂಜಾರ, ಛತ್ತೀಸ್‌ಗಢ ವಿರುದ್ಧದ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಚೇತೇಶ್ವರ ಪೂಜಾರ ತಮ್ಮ ಅಮೋಘ ಪ್ರದರ್ಶನದ ಮೂಲಕ ಮತ್ತೊಮ್ಮೆ ರಾಷ್ಟ್ರೀಯ ತಂಡದ ಕದ ತಟ್ಟಿದ್ದಾರೆ. ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಸೌರಾಷ್ಟ್ರ ತಂಡವನ್ನು ಪ್ರತಿನಿಧಿಸುತ್ತಿರುವ ಪೂಜಾರ, ಛತ್ತೀಸ್‌ಗಢ ವಿರುದ್ಧದ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

1 / 6
ತಂಡದ ಪರ ಮೊದಲ ಇನ್ನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಪೂಜಾರ ತಮ್ಮ ಇನ್ನಿಂಗ್ಸ್​ನಲ್ಲಿ 383 ಎಸೆತಗಳನ್ನು ಎದುರಿಸಿ 25 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 234 ರನ್ ಕಲೆಹಾಕಿದರು. ಇದರೊಂದಿಗೆ ತಮ್ಮ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದಾಖಲೆಯ 18ನೇ ದ್ವಿಶತಕವನ್ನು ಪೂರೈಸಿದರು. ಈ ಮೂಲಕ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ದ್ವಿಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ತಂಡದ ಪರ ಮೊದಲ ಇನ್ನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಪೂಜಾರ ತಮ್ಮ ಇನ್ನಿಂಗ್ಸ್​ನಲ್ಲಿ 383 ಎಸೆತಗಳನ್ನು ಎದುರಿಸಿ 25 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 234 ರನ್ ಕಲೆಹಾಕಿದರು. ಇದರೊಂದಿಗೆ ತಮ್ಮ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದಾಖಲೆಯ 18ನೇ ದ್ವಿಶತಕವನ್ನು ಪೂರೈಸಿದರು. ಈ ಮೂಲಕ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ದ್ವಿಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

2 / 6
ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 18 ದ್ವಿಶತ ಬಾರಿಸಿರುವ ಪೂಜಾರ, ಭಾರತದ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಪೂಜಾರ ನಂತರ 11 ದ್ವಿಶತಕ ಬಾರಿಸಿರುವ ಮಾಜಿ ಕ್ರಿಕೆಟ್ ವಿಜಯ್ ಮರ್ಚೆಂಟ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 18 ದ್ವಿಶತ ಬಾರಿಸಿರುವ ಪೂಜಾರ, ಭಾರತದ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಪೂಜಾರ ನಂತರ 11 ದ್ವಿಶತಕ ಬಾರಿಸಿರುವ ಮಾಜಿ ಕ್ರಿಕೆಟ್ ವಿಜಯ್ ಮರ್ಚೆಂಟ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3 / 6
ಈ ಇಬ್ಬರನ್ನು ಹೊರತುಪಡಿಸಿ ಭಾರತದ ಮಾಜಿ ಕ್ರಿಕೆಟಿಗರಾದ ವಿಜಯ್ ಹಜಾರೆ, ಸುನಿಲ್ ಗವಾಸ್ಕರ್ ಮತ್ತು ರಾಹುಲ್ ದ್ರಾವಿಡ್ ತಲಾ 10 ದ್ವಿಶತಕ ಸಿಡಿಸಿದ್ದಾರೆ. ಇನ್ನು ವಿಶ್ವ ಕ್ರಿಕೆಟ್​ನಲ್ಲಿ ಅತ್ಯಧಿಕ ದ್ವಿಶತಕ ಸಿಡಿಸಿರುವ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಡಾನ್ ಬ್ರಾಡ್ಮನ್ ತಮ್ಮ ವೃತ್ತಿಬದುಕಿನಲ್ಲಿ ಒಟ್ಟು 37 ಬಾರಿ ಈ ಸಾಧನೆ ಮಾಡಿದ್ದರು.

ಈ ಇಬ್ಬರನ್ನು ಹೊರತುಪಡಿಸಿ ಭಾರತದ ಮಾಜಿ ಕ್ರಿಕೆಟಿಗರಾದ ವಿಜಯ್ ಹಜಾರೆ, ಸುನಿಲ್ ಗವಾಸ್ಕರ್ ಮತ್ತು ರಾಹುಲ್ ದ್ರಾವಿಡ್ ತಲಾ 10 ದ್ವಿಶತಕ ಸಿಡಿಸಿದ್ದಾರೆ. ಇನ್ನು ವಿಶ್ವ ಕ್ರಿಕೆಟ್​ನಲ್ಲಿ ಅತ್ಯಧಿಕ ದ್ವಿಶತಕ ಸಿಡಿಸಿರುವ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಡಾನ್ ಬ್ರಾಡ್ಮನ್ ತಮ್ಮ ವೃತ್ತಿಬದುಕಿನಲ್ಲಿ ಒಟ್ಟು 37 ಬಾರಿ ಈ ಸಾಧನೆ ಮಾಡಿದ್ದರು.

4 / 6
ವಾಸ್ತವವಾಗಿ ಪೂಜಾರ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ನಂತರ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಆದಾಗ್ಯೂ ದೇಶೀಯ ಹಾಗೂ ವಿದೇಶಿ ತಂಡಗಳ ಪರ ಕಣಕ್ಕಿಳಿಯುವ ಮೂಲಕ ತನ್ನ ಅದ್ಭುತ ಆಟವನ್ನು ಮುಂದುವರೆಸಿರುವ ಪೂಜಾರ ಈ ವರ್ಷ ಆಡಿರುವ 16 ಪಂದ್ಯಗಳಲ್ಲಿ 6 ಶತಕ ಸಿಡಿಸಿದ್ದಾರೆ. ಅಲ್ಲದೆ ಈ ದ್ವಿಶತಕದೊಂದಿಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 21 ಸಾವಿರ ರನ್ ಸಹ ಪೂರೈಸಿದ್ದಾರೆ.

ವಾಸ್ತವವಾಗಿ ಪೂಜಾರ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ನಂತರ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಆದಾಗ್ಯೂ ದೇಶೀಯ ಹಾಗೂ ವಿದೇಶಿ ತಂಡಗಳ ಪರ ಕಣಕ್ಕಿಳಿಯುವ ಮೂಲಕ ತನ್ನ ಅದ್ಭುತ ಆಟವನ್ನು ಮುಂದುವರೆಸಿರುವ ಪೂಜಾರ ಈ ವರ್ಷ ಆಡಿರುವ 16 ಪಂದ್ಯಗಳಲ್ಲಿ 6 ಶತಕ ಸಿಡಿಸಿದ್ದಾರೆ. ಅಲ್ಲದೆ ಈ ದ್ವಿಶತಕದೊಂದಿಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 21 ಸಾವಿರ ರನ್ ಸಹ ಪೂರೈಸಿದ್ದಾರೆ.

5 / 6
ಟೀಂ ಇಂಡಿಯಾ ಮುಂದಿನ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಐದು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ. ಆ ಪ್ರವಾಸದಲ್ಲಿ ಪೂಜಾರಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಪೂಜಾರ ಆಸ್ಟ್ರೇಲಿಯಾ ವಿರುದ್ಧ 50 ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದು, ಆಸ್ಟ್ರೇಲಿಯಾ ನೆಲದಲ್ಲಿ ಅವರು 3 ಶತಕ ಸೇರಿದಂತೆ ಒಟ್ಟು 993 ರನ್ ಕಲೆಹಾಕಿದ್ದಾರೆ.

ಟೀಂ ಇಂಡಿಯಾ ಮುಂದಿನ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಐದು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ. ಆ ಪ್ರವಾಸದಲ್ಲಿ ಪೂಜಾರಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಪೂಜಾರ ಆಸ್ಟ್ರೇಲಿಯಾ ವಿರುದ್ಧ 50 ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದು, ಆಸ್ಟ್ರೇಲಿಯಾ ನೆಲದಲ್ಲಿ ಅವರು 3 ಶತಕ ಸೇರಿದಂತೆ ಒಟ್ಟು 993 ರನ್ ಕಲೆಹಾಕಿದ್ದಾರೆ.

6 / 6
Follow us
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ