AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ತಮಿಳುನಾಡು ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ದೇವದತ್ ಪಡಿಕ್ಕಲ್..!

Devdutt Padikkal: ಇಂದಿನಿಂದ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಿರುವ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ತಮ್ಮ ಇನ್ನಿಂಗ್ಸ್​ನಲ್ಲಿ 216 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್​ಗಳ ಆಧಾರದ ಮೇಲೆ 151 ರನ್ ಕಲೆಹಾಕಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Feb 09, 2024 | 5:57 PM

Share
ಇಂದಿನಿಂದ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ರಣಜಿ ಪಂದ್ಯ ಆರಂಭವಾಗಿದೆ. ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ಮೊದಲ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 285 ರನ್ ಕಲೆಹಾಕಿದೆ.

ಇಂದಿನಿಂದ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ರಣಜಿ ಪಂದ್ಯ ಆರಂಭವಾಗಿದೆ. ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ಮೊದಲ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 285 ರನ್ ಕಲೆಹಾಕಿದೆ.

1 / 7
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕಕ್ಕೆ ಆರಂಭಿಕ ಆರ್ ಸಮರ್ಥ್ 57 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು. ಆದರೆ ನಾಯಕ ಮಯಾಂಕ್ ಅಗರ್ವಾಲ್ 20 ರನ್​ಗಳಿಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದಾರೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕಕ್ಕೆ ಆರಂಭಿಕ ಆರ್ ಸಮರ್ಥ್ 57 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು. ಆದರೆ ನಾಯಕ ಮಯಾಂಕ್ ಅಗರ್ವಾಲ್ 20 ರನ್​ಗಳಿಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದಾರೆ.

2 / 7
ಆದರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ದೇವದತ್ ಪಡಿಕ್ಕಲ್ ತಮಿಳುನಾಡು ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಪ್ರಸಕ್ತ ಸೀಸನ್​ನಲ್ಲಿ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಪಡಿಕ್ಕಲ್ ಶತಕದ ಆಧಾರದ ಮೇಲೆ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಮೇಲುಗೈ ಸಾಧಿಸಿದೆ.

ಆದರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ದೇವದತ್ ಪಡಿಕ್ಕಲ್ ತಮಿಳುನಾಡು ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಪ್ರಸಕ್ತ ಸೀಸನ್​ನಲ್ಲಿ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಪಡಿಕ್ಕಲ್ ಶತಕದ ಆಧಾರದ ಮೇಲೆ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಮೇಲುಗೈ ಸಾಧಿಸಿದೆ.

3 / 7
ಮೊದಲ ದಿನದಂತ್ಯಕ್ಕೆ ಅಜೇಯರಾಗಿ ಉಳಿದಿರುವ ಪಡಿಕ್ಕಲ್, ತಮ್ಮ ಇನ್ನಿಂಗ್ಸ್​ನಲ್ಲಿ 216 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್​ಗಳ ಆಧಾರದ ಮೇಲೆ 151 ರನ್ ಕಲೆಹಾಕಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮೊದಲ ದಿನದಂತ್ಯಕ್ಕೆ ಅಜೇಯರಾಗಿ ಉಳಿದಿರುವ ಪಡಿಕ್ಕಲ್, ತಮ್ಮ ಇನ್ನಿಂಗ್ಸ್​ನಲ್ಲಿ 216 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್​ಗಳ ಆಧಾರದ ಮೇಲೆ 151 ರನ್ ಕಲೆಹಾಕಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

4 / 7
ಕಳೆದ 8 ಇನ್ನಿಂಗ್ಸ್​ಗಳಲ್ಲಿ ಪಡಿಕ್ಕಲ್ ಅವರ ನಾಲ್ಕನೇ ಶತಕ ಇದಾಗಿದೆ. ಇದಕ್ಕೂ ಮುನ್ನ ಪಡಿಕಲ್ ಪಂಜಾಬ್ ವಿರುದ್ಧ 193 ರನ್, ಗೋವಾ ವಿರುದ್ಧ 103 ರನ್, ಇಂಗ್ಲೆಂಡ್ ಲಯನ್ಸ್ ವಿರುದ್ಧ 105 ರನ್ ಹಾಗೂ ಇದೀಗ ತಮಿಳುನಾಡು ವಿರುದ್ಧ ಅಜೇಯ 151 ರನ್ ಸಿಡಿಸಿ ಟೀಂ ಇಂಡಿಯಾದ ಕದ ತಟ್ಟಲಾರಂಭಿಸಿದ್ದಾರೆ.

ಕಳೆದ 8 ಇನ್ನಿಂಗ್ಸ್​ಗಳಲ್ಲಿ ಪಡಿಕ್ಕಲ್ ಅವರ ನಾಲ್ಕನೇ ಶತಕ ಇದಾಗಿದೆ. ಇದಕ್ಕೂ ಮುನ್ನ ಪಡಿಕಲ್ ಪಂಜಾಬ್ ವಿರುದ್ಧ 193 ರನ್, ಗೋವಾ ವಿರುದ್ಧ 103 ರನ್, ಇಂಗ್ಲೆಂಡ್ ಲಯನ್ಸ್ ವಿರುದ್ಧ 105 ರನ್ ಹಾಗೂ ಇದೀಗ ತಮಿಳುನಾಡು ವಿರುದ್ಧ ಅಜೇಯ 151 ರನ್ ಸಿಡಿಸಿ ಟೀಂ ಇಂಡಿಯಾದ ಕದ ತಟ್ಟಲಾರಂಭಿಸಿದ್ದಾರೆ.

5 / 7
ಕರ್ನಾಟಕ ಪರ ಪಡಿಕ್ಕಲ್ ಹಾಗೂ ಸಮರ್ಥ್​ರನ್ನು ಹೊರತುಪಡಿಸಿ ಉಳಿದ ಆಟಗಾರರಿಂದ ಹೇಳಿಕೊಳ್ಳುವಂತ ಪ್ರದರ್ಶನ ಹೊರಬಂದಿಲ್ಲ. ನಾಯಕ ಮಯಾಂಕ್ 20 ರನ್​ಗಳಿಗೆ ಸುಸ್ತಾದರೆ, ಅನುಭವಿ ಮನೀಶ್ ಪಾಂಡೆ ಕೇವಲ 1 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಕರ್ನಾಟಕ ಪರ ಪಡಿಕ್ಕಲ್ ಹಾಗೂ ಸಮರ್ಥ್​ರನ್ನು ಹೊರತುಪಡಿಸಿ ಉಳಿದ ಆಟಗಾರರಿಂದ ಹೇಳಿಕೊಳ್ಳುವಂತ ಪ್ರದರ್ಶನ ಹೊರಬಂದಿಲ್ಲ. ನಾಯಕ ಮಯಾಂಕ್ 20 ರನ್​ಗಳಿಗೆ ಸುಸ್ತಾದರೆ, ಅನುಭವಿ ಮನೀಶ್ ಪಾಂಡೆ ಕೇವಲ 1 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

6 / 7
ಉಳಿದಂತೆ ಶತಕದ ಅಜೇಯ ಇನ್ನಿಂಗ್ಸ್ ಆಡಿರುವ ಪಡಿಕ್ಕಲ್ ಹಾಗೂ ಅಜೇಯ 35 ರನ್ ಸಿಡಿಸಿರುವ ಹಾರ್ದಿಕ್ ರಾಜ್ ತಂಡದ ಇನ್ನಿಂಗ್ಸ್ ಜವಬ್ದಾರಿ ನಿರ್ವಹಿಸುತ್ತಿದ್ದು, ಬಲಿಷ್ಠ ತಮಿಳುನಾಡಿಗೆ ತಕ್ಕ ತಿರುಗೇಟು ನೀಡಿದ್ದಾರೆ.

ಉಳಿದಂತೆ ಶತಕದ ಅಜೇಯ ಇನ್ನಿಂಗ್ಸ್ ಆಡಿರುವ ಪಡಿಕ್ಕಲ್ ಹಾಗೂ ಅಜೇಯ 35 ರನ್ ಸಿಡಿಸಿರುವ ಹಾರ್ದಿಕ್ ರಾಜ್ ತಂಡದ ಇನ್ನಿಂಗ್ಸ್ ಜವಬ್ದಾರಿ ನಿರ್ವಹಿಸುತ್ತಿದ್ದು, ಬಲಿಷ್ಠ ತಮಿಳುನಾಡಿಗೆ ತಕ್ಕ ತಿರುಗೇಟು ನೀಡಿದ್ದಾರೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ