AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಸತತ ವೈಫಲ್ಯಗಳಿಂದ ಬಳಲುತ್ತಿರುವ ಸಂಜು ಸ್ಯಾಮ್ಸನ್​ಗೆ ತಂಡದಿಂದ ಗೇಟ್​ಪಾಸ್..!

Sanju Samson: ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.

ಪೃಥ್ವಿಶಂಕರ
|

Updated on: Oct 10, 2024 | 9:31 PM

Share
ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ . ಈ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸಂಜು ಪ್ರದರ್ಶನ ಉತ್ತಮವಾಗಿಲ್ಲ. ಎರಡನೇ ಪಂದ್ಯದಲ್ಲಿ ಬೇಗ ಔಟಾದ ಸಂಜು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ . ಈ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸಂಜು ಪ್ರದರ್ಶನ ಉತ್ತಮವಾಗಿಲ್ಲ. ಎರಡನೇ ಪಂದ್ಯದಲ್ಲಿ ಬೇಗ ಔಟಾದ ಸಂಜು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

1 / 5
ಮೊದಲ ಟಿ20 ಪಂದ್ಯದಲ್ಲಿ 19 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಕಲೆಹಾಕಿದ್ದ ಸಂಜು ಸ್ಲೋ ಬಾಲ್​ಗೆ ಬಲಿಯಾಗಿದ್ದರು. ಇದೀಗ ಎರಡನೇ ಟಿ20 ಪಂದ್ಯದಲ್ಲೂ 7 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್ ಕಲೆಹಾಕಿದ್ದ ಸಂಜು, ಮತ್ತೊಮ್ಮೆ ಸ್ಲೋ ಬಾಲ್​ಗೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಸಂಜು ತಮ್ಮ ಕಳಪೆ ಪ್ರದರ್ಶನದಿಂದಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ 19 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಕಲೆಹಾಕಿದ್ದ ಸಂಜು ಸ್ಲೋ ಬಾಲ್​ಗೆ ಬಲಿಯಾಗಿದ್ದರು. ಇದೀಗ ಎರಡನೇ ಟಿ20 ಪಂದ್ಯದಲ್ಲೂ 7 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್ ಕಲೆಹಾಕಿದ್ದ ಸಂಜು, ಮತ್ತೊಮ್ಮೆ ಸ್ಲೋ ಬಾಲ್​ಗೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಸಂಜು ತಮ್ಮ ಕಳಪೆ ಪ್ರದರ್ಶನದಿಂದಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.

2 / 5
ಇದರ ಫಲವಾಗಿ ಸಂಜು ಅವರನ್ನು ದೇಶೀ ಟೂರ್ನಿ ರಣಜಿ ಟ್ರೋಫಿಯ ಮೊದಲ ಎರಡು ಪಂದ್ಯಗಳಿಂದ ತಂಡದಿಂದ ಕೈಬಿಡಲಾಗಿದೆ. ಈ ಆವೃತ್ತಿಯ ರಣಜಿ ಟ್ರೋಫಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಟೂರ್ನಿಗಾಗಿ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತಿದೆ, ಅದರಂತೆ ಕೇರಳ ತಂಡವನ್ನು ಸಹ ಪ್ರಕಟಿಸಲಾಗಿದೆ.

ಇದರ ಫಲವಾಗಿ ಸಂಜು ಅವರನ್ನು ದೇಶೀ ಟೂರ್ನಿ ರಣಜಿ ಟ್ರೋಫಿಯ ಮೊದಲ ಎರಡು ಪಂದ್ಯಗಳಿಂದ ತಂಡದಿಂದ ಕೈಬಿಡಲಾಗಿದೆ. ಈ ಆವೃತ್ತಿಯ ರಣಜಿ ಟ್ರೋಫಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಟೂರ್ನಿಗಾಗಿ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತಿದೆ, ಅದರಂತೆ ಕೇರಳ ತಂಡವನ್ನು ಸಹ ಪ್ರಕಟಿಸಲಾಗಿದೆ.

3 / 5
ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.

ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.

4 / 5
ಕೇರಳ ತಂಡ: ಸಚಿನ್ ಬೇಬಿ (ನಾಯಕ), ರೋಹನ್ ಎಸ್ ಕುನ್ನುಮಲ್, ಕೃಷ್ಣ ಪ್ರಸಾದ್, ಬಾಬಾ ಅಪರಾಜಿತ್, ಅಕ್ಷಯ್ ಚಂದ್ರನ್, ಮೊಹಮ್ಮದ್ ಅಜರುದ್ದೀನ್, ಸಲ್ಮಾನ್ ನಿಜಾರ್, ವತ್ಸಲ್ ಗೋವಿಂದ್, ವಿಷ್ಣು ವಿನೋದ್, ಜಲಜ್ ಸಕ್ಸೇನಾ, ಎ ಆನಂದ್ ಸರ್ವಾತೆ, ಬಾಸಿಲ್ ಥಂಪಿ, ನಿಧೀಶ್ ಎಂಡಿ, ಆಸಿಫ್ ಕೆಎಂ, ಫಾಜಿಲ್ ಫನೂಸ್.

ಕೇರಳ ತಂಡ: ಸಚಿನ್ ಬೇಬಿ (ನಾಯಕ), ರೋಹನ್ ಎಸ್ ಕುನ್ನುಮಲ್, ಕೃಷ್ಣ ಪ್ರಸಾದ್, ಬಾಬಾ ಅಪರಾಜಿತ್, ಅಕ್ಷಯ್ ಚಂದ್ರನ್, ಮೊಹಮ್ಮದ್ ಅಜರುದ್ದೀನ್, ಸಲ್ಮಾನ್ ನಿಜಾರ್, ವತ್ಸಲ್ ಗೋವಿಂದ್, ವಿಷ್ಣು ವಿನೋದ್, ಜಲಜ್ ಸಕ್ಸೇನಾ, ಎ ಆನಂದ್ ಸರ್ವಾತೆ, ಬಾಸಿಲ್ ಥಂಪಿ, ನಿಧೀಶ್ ಎಂಡಿ, ಆಸಿಫ್ ಕೆಎಂ, ಫಾಜಿಲ್ ಫನೂಸ್.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ