AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವಿಕೆಟ್ ಕಬಳಿಸಿ ರೋಚಕ ಜಯ ತಂದುಕೊಟ್ಟ ಮೊಹಮ್ಮದ್ ಶಮಿ

Mohammed Shami: ಮೊಹಮ್ಮದ್ ಶಮಿ ಗಾಯದ ಕಾರಣ ಕಳೆದ ಒಂದು ವರ್ಷದಿಂದ ಮೈದಾನದಿಂದ ದೂರವೇ ಉಳಿದಿದ್ದರು. ಇದೀಗ ಕಂಬ್ಯಾಕ್ ಮಾಡಿರುವ ಶಮಿ, ಮೊದಲ ಪಂದ್ಯದಲ್ಲೇ 7 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿರುವ ಅವರು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Nov 17, 2024 | 10:23 AM

Share
ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಪಂದ್ಯದಲ್ಲಿ ಮಧ್ಯಪ್ರದೇಶ್ ವಿರುದ್ಧ ಬಂಗಾಳ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದ ಗೆಲುವಿನ ರೂವಾರಿ ಮೊಹಮ್ಮದ್ ಶಮಿ. ಬಂಗಾಳ ಪರ ಕಣಕ್ಕಿಳಿದಿರುವ ಶಮಿ ಒಟ್ಟು 7 ವಿಕೆಟ್​ಗಳನ್ನು ಉರುಳಿಸಿ ಮಿಂಚಿದ್ದಾರೆ.

ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಪಂದ್ಯದಲ್ಲಿ ಮಧ್ಯಪ್ರದೇಶ್ ವಿರುದ್ಧ ಬಂಗಾಳ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದ ಗೆಲುವಿನ ರೂವಾರಿ ಮೊಹಮ್ಮದ್ ಶಮಿ. ಬಂಗಾಳ ಪರ ಕಣಕ್ಕಿಳಿದಿರುವ ಶಮಿ ಒಟ್ಟು 7 ವಿಕೆಟ್​ಗಳನ್ನು ಉರುಳಿಸಿ ಮಿಂಚಿದ್ದಾರೆ.

1 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 228 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಮಧ್ಯಪ್ರದೇಶ್ ತಂಡಕ್ಕೆ ಮೊಹಮ್ಮದ್ ಶಮಿ ಮಾರಕವಾಗಿ ಪರಿಣಮಿಸಿದರು. ಪರಿಣಾಮ  ಮಧ್ಯಪ್ರದೇಶ್ ತಂಡವು ಕೇವಲ 167 ರನ್​ಗಳಿಗೆ ಆಲೌಟ್ ಆಯಿತು. ಬಂಗಾಳ ಪರ ಶಮಿ 4 ವಿಕೆಟ್ ಕಬಳಿಸಿ ಮಿಂಚಿದರು.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 228 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಮಧ್ಯಪ್ರದೇಶ್ ತಂಡಕ್ಕೆ ಮೊಹಮ್ಮದ್ ಶಮಿ ಮಾರಕವಾಗಿ ಪರಿಣಮಿಸಿದರು. ಪರಿಣಾಮ ಮಧ್ಯಪ್ರದೇಶ್ ತಂಡವು ಕೇವಲ 167 ರನ್​ಗಳಿಗೆ ಆಲೌಟ್ ಆಯಿತು. ಬಂಗಾಳ ಪರ ಶಮಿ 4 ವಿಕೆಟ್ ಕಬಳಿಸಿ ಮಿಂಚಿದರು.

2 / 5
ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 276 ರನ್​ ಕಲೆಹಾಕುವ ಮೂಲಕ ಮಧ್ಯಪ್ರದೇಶ್ ತಂಡಕ್ಕೆ 338 ರನ್​ಗಳ ಗುರಿ ನೀಡಿದರು. ಈ ಗುರಿಯನ್ನು ಬೆನ್ನತ್ತಿದ ಮಧ್ಯಪ್ರದೇಶ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ತಮ್ಮ ಅನುಭವವನ್ನು ಧಾರೆಯೆರೆದ ಶಮಿ ಹಾಗೂ ಶಹಬಾಝ್ ಅಹ್ಮದ್ ಅಂತಿಮ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 276 ರನ್​ ಕಲೆಹಾಕುವ ಮೂಲಕ ಮಧ್ಯಪ್ರದೇಶ್ ತಂಡಕ್ಕೆ 338 ರನ್​ಗಳ ಗುರಿ ನೀಡಿದರು. ಈ ಗುರಿಯನ್ನು ಬೆನ್ನತ್ತಿದ ಮಧ್ಯಪ್ರದೇಶ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ತಮ್ಮ ಅನುಭವವನ್ನು ಧಾರೆಯೆರೆದ ಶಮಿ ಹಾಗೂ ಶಹಬಾಝ್ ಅಹ್ಮದ್ ಅಂತಿಮ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು.

3 / 5
ಅದರಲ್ಲೂ ಮಧ್ಯಪ್ರದೇಶ್ ತಂಡದ ಗೆಲುವಿಗೆ ಕೇವಲ 11 ರನ್​ಗಳ ಅವಶ್ಯಕತೆಯಿದ್ದಾಗ ಮೊಹಮ್ಮದ್ ಶಮಿ, ಕುಮಾರ್ ಕಾರ್ತಿಕೇಯ ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯಪ್ರದೇಶ್ ತಂಡವನ್ನು 326 ರನ್​ಗಳಿಗೆ ಆಲೌಟ್ ಮಾಡಿ ರೋಚಕ ಜಯ ತಂದುಕೊಟ್ಟರು.

ಅದರಲ್ಲೂ ಮಧ್ಯಪ್ರದೇಶ್ ತಂಡದ ಗೆಲುವಿಗೆ ಕೇವಲ 11 ರನ್​ಗಳ ಅವಶ್ಯಕತೆಯಿದ್ದಾಗ ಮೊಹಮ್ಮದ್ ಶಮಿ, ಕುಮಾರ್ ಕಾರ್ತಿಕೇಯ ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯಪ್ರದೇಶ್ ತಂಡವನ್ನು 326 ರನ್​ಗಳಿಗೆ ಆಲೌಟ್ ಮಾಡಿ ರೋಚಕ ಜಯ ತಂದುಕೊಟ್ಟರು.

4 / 5
ಇನ್ನು ಈ ಪಂದ್ಯದಲ್ಲಿ ಒಟ್ಟು 44 ಓವರ್​ಗಳನ್ನು ಎಸೆದ ಮೊಹಮ್ಮದ್ ಶಮಿ 156 ರನ್ ನೀಡುವ ಮೂಲಕ 7 ವಿಕೆಟ್ ಕಬಳಿಸಿ ಮಿಂಚಿದರು. ಅಲ್ಲದೆ ಬ್ಯಾಟಿಂಗ್​ನಲ್ಲೂ 37 ರನ್​ಗಳ ಕೊಡುಗೆ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಒಟ್ಟು 44 ಓವರ್​ಗಳನ್ನು ಎಸೆದ ಮೊಹಮ್ಮದ್ ಶಮಿ 156 ರನ್ ನೀಡುವ ಮೂಲಕ 7 ವಿಕೆಟ್ ಕಬಳಿಸಿ ಮಿಂಚಿದರು. ಅಲ್ಲದೆ ಬ್ಯಾಟಿಂಗ್​ನಲ್ಲೂ 37 ರನ್​ಗಳ ಕೊಡುಗೆ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ