AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವಿಕೆಟ್ ಕಬಳಿಸಿ ರೋಚಕ ಜಯ ತಂದುಕೊಟ್ಟ ಮೊಹಮ್ಮದ್ ಶಮಿ

Mohammed Shami: ಮೊಹಮ್ಮದ್ ಶಮಿ ಗಾಯದ ಕಾರಣ ಕಳೆದ ಒಂದು ವರ್ಷದಿಂದ ಮೈದಾನದಿಂದ ದೂರವೇ ಉಳಿದಿದ್ದರು. ಇದೀಗ ಕಂಬ್ಯಾಕ್ ಮಾಡಿರುವ ಶಮಿ, ಮೊದಲ ಪಂದ್ಯದಲ್ಲೇ 7 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿರುವ ಅವರು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Nov 17, 2024 | 10:23 AM

Share
ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಪಂದ್ಯದಲ್ಲಿ ಮಧ್ಯಪ್ರದೇಶ್ ವಿರುದ್ಧ ಬಂಗಾಳ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದ ಗೆಲುವಿನ ರೂವಾರಿ ಮೊಹಮ್ಮದ್ ಶಮಿ. ಬಂಗಾಳ ಪರ ಕಣಕ್ಕಿಳಿದಿರುವ ಶಮಿ ಒಟ್ಟು 7 ವಿಕೆಟ್​ಗಳನ್ನು ಉರುಳಿಸಿ ಮಿಂಚಿದ್ದಾರೆ.

ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಪಂದ್ಯದಲ್ಲಿ ಮಧ್ಯಪ್ರದೇಶ್ ವಿರುದ್ಧ ಬಂಗಾಳ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದ ಗೆಲುವಿನ ರೂವಾರಿ ಮೊಹಮ್ಮದ್ ಶಮಿ. ಬಂಗಾಳ ಪರ ಕಣಕ್ಕಿಳಿದಿರುವ ಶಮಿ ಒಟ್ಟು 7 ವಿಕೆಟ್​ಗಳನ್ನು ಉರುಳಿಸಿ ಮಿಂಚಿದ್ದಾರೆ.

1 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 228 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಮಧ್ಯಪ್ರದೇಶ್ ತಂಡಕ್ಕೆ ಮೊಹಮ್ಮದ್ ಶಮಿ ಮಾರಕವಾಗಿ ಪರಿಣಮಿಸಿದರು. ಪರಿಣಾಮ  ಮಧ್ಯಪ್ರದೇಶ್ ತಂಡವು ಕೇವಲ 167 ರನ್​ಗಳಿಗೆ ಆಲೌಟ್ ಆಯಿತು. ಬಂಗಾಳ ಪರ ಶಮಿ 4 ವಿಕೆಟ್ ಕಬಳಿಸಿ ಮಿಂಚಿದರು.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 228 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಮಧ್ಯಪ್ರದೇಶ್ ತಂಡಕ್ಕೆ ಮೊಹಮ್ಮದ್ ಶಮಿ ಮಾರಕವಾಗಿ ಪರಿಣಮಿಸಿದರು. ಪರಿಣಾಮ ಮಧ್ಯಪ್ರದೇಶ್ ತಂಡವು ಕೇವಲ 167 ರನ್​ಗಳಿಗೆ ಆಲೌಟ್ ಆಯಿತು. ಬಂಗಾಳ ಪರ ಶಮಿ 4 ವಿಕೆಟ್ ಕಬಳಿಸಿ ಮಿಂಚಿದರು.

2 / 5
ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 276 ರನ್​ ಕಲೆಹಾಕುವ ಮೂಲಕ ಮಧ್ಯಪ್ರದೇಶ್ ತಂಡಕ್ಕೆ 338 ರನ್​ಗಳ ಗುರಿ ನೀಡಿದರು. ಈ ಗುರಿಯನ್ನು ಬೆನ್ನತ್ತಿದ ಮಧ್ಯಪ್ರದೇಶ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ತಮ್ಮ ಅನುಭವವನ್ನು ಧಾರೆಯೆರೆದ ಶಮಿ ಹಾಗೂ ಶಹಬಾಝ್ ಅಹ್ಮದ್ ಅಂತಿಮ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಬಂಗಾಳ ತಂಡವು 276 ರನ್​ ಕಲೆಹಾಕುವ ಮೂಲಕ ಮಧ್ಯಪ್ರದೇಶ್ ತಂಡಕ್ಕೆ 338 ರನ್​ಗಳ ಗುರಿ ನೀಡಿದರು. ಈ ಗುರಿಯನ್ನು ಬೆನ್ನತ್ತಿದ ಮಧ್ಯಪ್ರದೇಶ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ತಮ್ಮ ಅನುಭವವನ್ನು ಧಾರೆಯೆರೆದ ಶಮಿ ಹಾಗೂ ಶಹಬಾಝ್ ಅಹ್ಮದ್ ಅಂತಿಮ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು.

3 / 5
ಅದರಲ್ಲೂ ಮಧ್ಯಪ್ರದೇಶ್ ತಂಡದ ಗೆಲುವಿಗೆ ಕೇವಲ 11 ರನ್​ಗಳ ಅವಶ್ಯಕತೆಯಿದ್ದಾಗ ಮೊಹಮ್ಮದ್ ಶಮಿ, ಕುಮಾರ್ ಕಾರ್ತಿಕೇಯ ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯಪ್ರದೇಶ್ ತಂಡವನ್ನು 326 ರನ್​ಗಳಿಗೆ ಆಲೌಟ್ ಮಾಡಿ ರೋಚಕ ಜಯ ತಂದುಕೊಟ್ಟರು.

ಅದರಲ್ಲೂ ಮಧ್ಯಪ್ರದೇಶ್ ತಂಡದ ಗೆಲುವಿಗೆ ಕೇವಲ 11 ರನ್​ಗಳ ಅವಶ್ಯಕತೆಯಿದ್ದಾಗ ಮೊಹಮ್ಮದ್ ಶಮಿ, ಕುಮಾರ್ ಕಾರ್ತಿಕೇಯ ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯಪ್ರದೇಶ್ ತಂಡವನ್ನು 326 ರನ್​ಗಳಿಗೆ ಆಲೌಟ್ ಮಾಡಿ ರೋಚಕ ಜಯ ತಂದುಕೊಟ್ಟರು.

4 / 5
ಇನ್ನು ಈ ಪಂದ್ಯದಲ್ಲಿ ಒಟ್ಟು 44 ಓವರ್​ಗಳನ್ನು ಎಸೆದ ಮೊಹಮ್ಮದ್ ಶಮಿ 156 ರನ್ ನೀಡುವ ಮೂಲಕ 7 ವಿಕೆಟ್ ಕಬಳಿಸಿ ಮಿಂಚಿದರು. ಅಲ್ಲದೆ ಬ್ಯಾಟಿಂಗ್​ನಲ್ಲೂ 37 ರನ್​ಗಳ ಕೊಡುಗೆ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಒಟ್ಟು 44 ಓವರ್​ಗಳನ್ನು ಎಸೆದ ಮೊಹಮ್ಮದ್ ಶಮಿ 156 ರನ್ ನೀಡುವ ಮೂಲಕ 7 ವಿಕೆಟ್ ಕಬಳಿಸಿ ಮಿಂಚಿದರು. ಅಲ್ಲದೆ ಬ್ಯಾಟಿಂಗ್​ನಲ್ಲೂ 37 ರನ್​ಗಳ ಕೊಡುಗೆ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 5
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ