AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ದೇಶೀ ಟೂರ್ನಿಯಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ ರವೀಂದ್ರ ಜಡೇಜಾ

Ranji Trophy 2025: ರಣಜಿ ಟ್ರೋಫಿಯಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಮ್ಮ ಹಳೆಯ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್‌ಕೋಟ್‌ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಸೌರಾಷ್ಟ್ರ ಪರ ಆಡುತ್ತಿರುವ ರವೀಂದ್ರ ಜಡೇಜಾ ಅವರು ಡೆಲ್ಲಿ ವಿರುದ್ಧ ಐದು ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Jan 23, 2025 | 6:38 PM

ರಣಜಿ ಟ್ರೋಫಿ ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಅದ್ಭುತ ಸಾಧನೆ ಮಾಡಿದ್ದಾರೆ. ಸೌರಾಷ್ಟ್ರ ಪರ ಆಡುತ್ತಿರುವ ರವೀಂದ್ರ ಜಡೇಜಾ ಡೆಲ್ಲಿ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಜಡೇಜಾ ಡೆಲ್ಲಿ ವಿರುದ್ಧ 17.4 ಓವರ್ ಬೌಲ್ ಮಾಡಿ ಕೇವಲ 66 ರನ್ ನೀಡಿ ಐದು ವಿಕೆಟ್ ಪಡೆದರು.

ರಣಜಿ ಟ್ರೋಫಿ ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಅದ್ಭುತ ಸಾಧನೆ ಮಾಡಿದ್ದಾರೆ. ಸೌರಾಷ್ಟ್ರ ಪರ ಆಡುತ್ತಿರುವ ರವೀಂದ್ರ ಜಡೇಜಾ ಡೆಲ್ಲಿ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಜಡೇಜಾ ಡೆಲ್ಲಿ ವಿರುದ್ಧ 17.4 ಓವರ್ ಬೌಲ್ ಮಾಡಿ ಕೇವಲ 66 ರನ್ ನೀಡಿ ಐದು ವಿಕೆಟ್ ಪಡೆದರು.

1 / 5
ಜಡೇಜಾ ಡೆಲ್ಲಿ ಮೇಲೆ ಎಂತಹ ಒತ್ತಡವನ್ನು ಸೃಷ್ಟಿಸಿದರು ಎಂದರೆ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 188 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಷಬ್ ಪಂತ್ ಕೂಡ ಡೆಲ್ಲಿ ತಂಡದಲ್ಲಿ ಆಡುತ್ತಿದ್ದರು ಆದರೆ ಅವರ ಉಪಸ್ಥಿತಿಯು ಈ ತಂಡಕ್ಕೆ ಹೆಚ್ಚು ನೆರವಾಗಲಿಲ್ಲ ಎಂಬುದು ದೊಡ್ಡ ವಿಷಯ. 10 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ರಿಷಬ್ ಪಂತ್ ಔಟಾದರು.

ಜಡೇಜಾ ಡೆಲ್ಲಿ ಮೇಲೆ ಎಂತಹ ಒತ್ತಡವನ್ನು ಸೃಷ್ಟಿಸಿದರು ಎಂದರೆ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 188 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಷಬ್ ಪಂತ್ ಕೂಡ ಡೆಲ್ಲಿ ತಂಡದಲ್ಲಿ ಆಡುತ್ತಿದ್ದರು ಆದರೆ ಅವರ ಉಪಸ್ಥಿತಿಯು ಈ ತಂಡಕ್ಕೆ ಹೆಚ್ಚು ನೆರವಾಗಲಿಲ್ಲ ಎಂಬುದು ದೊಡ್ಡ ವಿಷಯ. 10 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ರಿಷಬ್ ಪಂತ್ ಔಟಾದರು.

2 / 5
ರವೀಂದ್ರ ಜಡೇಜಾ ತಮ್ಮ ಮೊದಲ ಬೇಟೆಯಾಗಿ ಸನತ್ ಸಂಗ್ವಾನ್ ಅವರನ್ನು ಬಲಿ ಪಡೆದರೆ, ಇದಾದ ಬಳಿಕ 44 ರನ್ ಗಳಿಸಿ ಕ್ರೀಸ್​ನಲ್ಲಿದ್ದ ಯಶ್ ಧುಲ್ ಅವರ ವಿಕೆಟ್ ಕೂಡ ಪಡೆದರು. ಮೂರನೇ ವಿಕೆಟ್ ಆಗಿ ಜಡೇಜಾ ಡೆಲ್ಲಿ ನಾಯಕ ಆಯುಷ್ ಬಧೋನಿಯನ್ನೂ ಬಲಿಪಶು ಮಾಡಿದರು. ಆ ನಂತರವೂ ಮ್ಯಾಜಿಕ್ ಮಾಡಿದ ಜಡೇಜಾ, ಹರ್ಷ್ ತ್ಯಾಗಿ ಮತ್ತು ನವದೀಪ್ ಸೈನಿ ಅವರ ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು ಮತ್ತು ಆ ಮೂಲಕ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 35 ನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಸಾಧಿಸಿದರು.

ರವೀಂದ್ರ ಜಡೇಜಾ ತಮ್ಮ ಮೊದಲ ಬೇಟೆಯಾಗಿ ಸನತ್ ಸಂಗ್ವಾನ್ ಅವರನ್ನು ಬಲಿ ಪಡೆದರೆ, ಇದಾದ ಬಳಿಕ 44 ರನ್ ಗಳಿಸಿ ಕ್ರೀಸ್​ನಲ್ಲಿದ್ದ ಯಶ್ ಧುಲ್ ಅವರ ವಿಕೆಟ್ ಕೂಡ ಪಡೆದರು. ಮೂರನೇ ವಿಕೆಟ್ ಆಗಿ ಜಡೇಜಾ ಡೆಲ್ಲಿ ನಾಯಕ ಆಯುಷ್ ಬಧೋನಿಯನ್ನೂ ಬಲಿಪಶು ಮಾಡಿದರು. ಆ ನಂತರವೂ ಮ್ಯಾಜಿಕ್ ಮಾಡಿದ ಜಡೇಜಾ, ಹರ್ಷ್ ತ್ಯಾಗಿ ಮತ್ತು ನವದೀಪ್ ಸೈನಿ ಅವರ ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು ಮತ್ತು ಆ ಮೂಲಕ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 35 ನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಸಾಧಿಸಿದರು.

3 / 5
ಜಡೇಜಾ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 547 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಈ ದೇಶೀ ಟೂರ್ನಿಯಲ್ಲಿ ಜಡೇಜಾ 550 ವಿಕೆಟ್‌ಗಳ ಮೈಲಿಗಲು ದಾಟಲು ಕೇವಲ ಮೂರು ವಿಕೆಟ್‌ಗಳ ದೂರದಲ್ಲಿದ್ದಾರೆ. ರವೀಂದ್ರ ಜಡೇಜಾ 2023ರಲ್ಲಿ ತಾವು ಆಡಿದ್ದ ಕೊನೆಯ ರಣಜಿ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 53 ರನ್‌ಗಳಿಗೆ 7 ವಿಕೆಟ್ ಪಡೆದಿದ್ದರು.

ಜಡೇಜಾ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 547 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಈ ದೇಶೀ ಟೂರ್ನಿಯಲ್ಲಿ ಜಡೇಜಾ 550 ವಿಕೆಟ್‌ಗಳ ಮೈಲಿಗಲು ದಾಟಲು ಕೇವಲ ಮೂರು ವಿಕೆಟ್‌ಗಳ ದೂರದಲ್ಲಿದ್ದಾರೆ. ರವೀಂದ್ರ ಜಡೇಜಾ 2023ರಲ್ಲಿ ತಾವು ಆಡಿದ್ದ ಕೊನೆಯ ರಣಜಿ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 53 ರನ್‌ಗಳಿಗೆ 7 ವಿಕೆಟ್ ಪಡೆದಿದ್ದರು.

4 / 5
ವಾಸ್ತವವಾಗಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಜಡೇಜಾರನ್ನು ಹೊರತುಪಡಿಸಿ ಮಿಕ್ಕವರ್ಯಾರು ಉತ್ತಮ ಪ್ರದರ್ಶನ ನೀಡಿಲ್ಲ. ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಕೂಡ ದಯನೀಯವಾಗಿ ವಿಫಲರಾಗಿದ್ದಾರೆ. ರೋಹಿತ್ ಶರ್ಮಾ 19 ಎಸೆತಗಳಲ್ಲಿ 3 ರನ್ ಗಳಿಸಿದರೆ, ಜೈಸ್ವಾಲ್ ಮತ್ತು ಶುಭಮನ್ ಗಿಲ್ ಕೂಡ ತಲಾ 4 ರನ್ ಹಾಗೂ ಪಂತ್ ಕೇವಲ 1 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಜಡೇಜಾರನ್ನು ಹೊರತುಪಡಿಸಿ ಮಿಕ್ಕವರ್ಯಾರು ಉತ್ತಮ ಪ್ರದರ್ಶನ ನೀಡಿಲ್ಲ. ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಕೂಡ ದಯನೀಯವಾಗಿ ವಿಫಲರಾಗಿದ್ದಾರೆ. ರೋಹಿತ್ ಶರ್ಮಾ 19 ಎಸೆತಗಳಲ್ಲಿ 3 ರನ್ ಗಳಿಸಿದರೆ, ಜೈಸ್ವಾಲ್ ಮತ್ತು ಶುಭಮನ್ ಗಿಲ್ ಕೂಡ ತಲಾ 4 ರನ್ ಹಾಗೂ ಪಂತ್ ಕೇವಲ 1 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

5 / 5
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್