AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಮುಂಬೈ ತಂಡದಲ್ಲಿ ಸಹೋದರರ ಸವಾಲ್..!

Sarfaraz Khan And Musheer Khan: ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್.

TV9 Web
| Updated By: ಝಾಹಿರ್ ಯೂಸುಫ್|

Updated on: Dec 28, 2022 | 4:09 PM

Share
ಟೀಮ್ ಇಂಡಿಯಾದಲ್ಲಿ ಸಹೋದರರು ಜೊತೆಯಾಗಿ ಕಾಣಿಸಿಕೊಂಡಿದ್ದು ತುಂಬಾ ವಿರಳ. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್ ಜೊತೆಯಾಗಿ ಆಡಿದ್ದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಂಡಿದ್ದರು. ಇದಾಗ್ಯೂ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಅಣ್ಣ-ತಮ್ಮ ಜೊತೆಯಾಗಿ ಆಡಿದ ನಿದರ್ಶನವಿಲ್ಲ. ಆದರೆ ಇದೀಗ ದೇಶೀಯ ಅಂಗಳದಲ್ಲಿ ಸಹೋದರರು ಜೊತೆಯಾಗಿ ಕಣಕ್ಕಿಳಿದಿದ್ದಾರೆ. ಅದು ಕೂಡ ಬಲಿಷ್ಠ ಮುಂಬೈ ತಂಡದಲ್ಲಿ ಎಂಬುದು ವಿಶೇಷ.

ಟೀಮ್ ಇಂಡಿಯಾದಲ್ಲಿ ಸಹೋದರರು ಜೊತೆಯಾಗಿ ಕಾಣಿಸಿಕೊಂಡಿದ್ದು ತುಂಬಾ ವಿರಳ. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್ ಜೊತೆಯಾಗಿ ಆಡಿದ್ದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಂಡಿದ್ದರು. ಇದಾಗ್ಯೂ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಅಣ್ಣ-ತಮ್ಮ ಜೊತೆಯಾಗಿ ಆಡಿದ ನಿದರ್ಶನವಿಲ್ಲ. ಆದರೆ ಇದೀಗ ದೇಶೀಯ ಅಂಗಳದಲ್ಲಿ ಸಹೋದರರು ಜೊತೆಯಾಗಿ ಕಣಕ್ಕಿಳಿದಿದ್ದಾರೆ. ಅದು ಕೂಡ ಬಲಿಷ್ಠ ಮುಂಬೈ ತಂಡದಲ್ಲಿ ಎಂಬುದು ವಿಶೇಷ.

1 / 5
ಹೌದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಮುಶೀರ್ ಖಾನ್ ಪದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಅಣ್ಣ ಸರ್ಫರಾಜ್ ಖಾನ್ ಅವರಿಂದಲೇ ಕ್ಯಾಪ್ ಪಡೆದಿದ್ದು ವಿಶೇಷ.

ಹೌದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಮುಶೀರ್ ಖಾನ್ ಪದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಅಣ್ಣ ಸರ್ಫರಾಜ್ ಖಾನ್ ಅವರಿಂದಲೇ ಕ್ಯಾಪ್ ಪಡೆದಿದ್ದು ವಿಶೇಷ.

2 / 5
ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 17 ವರ್ಷದ ಯುವ ಆಲ್​ರೌಂಡರ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 17 ವರ್ಷದ ಯುವ ಆಲ್​ರೌಂಡರ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

3 / 5
ತಮ್ಮ ಮೊದಲ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಮುಶೀರ್ ಖಾನ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಇನ್ನು ಬೌಲಿಂಗ್​ನಲ್ಲಿ 5 ಓವರ್​ ಮಾಡಿದ್ದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇದಾಗ್ಯೂ ಯುವ ಆಟಗಾರನಿಂದ 2ನೇ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

ತಮ್ಮ ಮೊದಲ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಮುಶೀರ್ ಖಾನ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಇನ್ನು ಬೌಲಿಂಗ್​ನಲ್ಲಿ 5 ಓವರ್​ ಮಾಡಿದ್ದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇದಾಗ್ಯೂ ಯುವ ಆಟಗಾರನಿಂದ 2ನೇ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

4 / 5
2021-22ರ ರಣಜಿ ಟೂರ್ನಿಯ 9 ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 2 ಅರ್ಧಶತಕದೊಂದಿಗೆ  982 ರನ್​ ಬಾರಿಸಿರುವ ಸರ್ಫರಾಜ್ ಖಾನ್ ಸದ್ಯ ಭಾರತ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ 17 ವರ್ಷದ ತಮ್ಮ ಮುಶೀರ್ ಖಾನ್ ಕೂಡ ಆಲ್​ರೌಂಡರ್​ ಆಗಿ ಮುಂಬೈ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಈ  ಸಹೋದರರು ಟೀಮ್ ಇಂಡಿಯಾದಲ್ಲಿ ಜೊತೆಯಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

2021-22ರ ರಣಜಿ ಟೂರ್ನಿಯ 9 ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 2 ಅರ್ಧಶತಕದೊಂದಿಗೆ 982 ರನ್​ ಬಾರಿಸಿರುವ ಸರ್ಫರಾಜ್ ಖಾನ್ ಸದ್ಯ ಭಾರತ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ 17 ವರ್ಷದ ತಮ್ಮ ಮುಶೀರ್ ಖಾನ್ ಕೂಡ ಆಲ್​ರೌಂಡರ್​ ಆಗಿ ಮುಂಬೈ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಸಹೋದರರು ಟೀಮ್ ಇಂಡಿಯಾದಲ್ಲಿ ಜೊತೆಯಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?