AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಮುಂಬೈ ತಂಡದಲ್ಲಿ ಸಹೋದರರ ಸವಾಲ್..!

Sarfaraz Khan And Musheer Khan: ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್.

TV9 Web
| Edited By: |

Updated on: Dec 28, 2022 | 4:09 PM

Share
ಟೀಮ್ ಇಂಡಿಯಾದಲ್ಲಿ ಸಹೋದರರು ಜೊತೆಯಾಗಿ ಕಾಣಿಸಿಕೊಂಡಿದ್ದು ತುಂಬಾ ವಿರಳ. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್ ಜೊತೆಯಾಗಿ ಆಡಿದ್ದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಂಡಿದ್ದರು. ಇದಾಗ್ಯೂ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಅಣ್ಣ-ತಮ್ಮ ಜೊತೆಯಾಗಿ ಆಡಿದ ನಿದರ್ಶನವಿಲ್ಲ. ಆದರೆ ಇದೀಗ ದೇಶೀಯ ಅಂಗಳದಲ್ಲಿ ಸಹೋದರರು ಜೊತೆಯಾಗಿ ಕಣಕ್ಕಿಳಿದಿದ್ದಾರೆ. ಅದು ಕೂಡ ಬಲಿಷ್ಠ ಮುಂಬೈ ತಂಡದಲ್ಲಿ ಎಂಬುದು ವಿಶೇಷ.

ಟೀಮ್ ಇಂಡಿಯಾದಲ್ಲಿ ಸಹೋದರರು ಜೊತೆಯಾಗಿ ಕಾಣಿಸಿಕೊಂಡಿದ್ದು ತುಂಬಾ ವಿರಳ. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್ ಜೊತೆಯಾಗಿ ಆಡಿದ್ದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಂಡಿದ್ದರು. ಇದಾಗ್ಯೂ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಅಣ್ಣ-ತಮ್ಮ ಜೊತೆಯಾಗಿ ಆಡಿದ ನಿದರ್ಶನವಿಲ್ಲ. ಆದರೆ ಇದೀಗ ದೇಶೀಯ ಅಂಗಳದಲ್ಲಿ ಸಹೋದರರು ಜೊತೆಯಾಗಿ ಕಣಕ್ಕಿಳಿದಿದ್ದಾರೆ. ಅದು ಕೂಡ ಬಲಿಷ್ಠ ಮುಂಬೈ ತಂಡದಲ್ಲಿ ಎಂಬುದು ವಿಶೇಷ.

1 / 5
ಹೌದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಮುಶೀರ್ ಖಾನ್ ಪದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಅಣ್ಣ ಸರ್ಫರಾಜ್ ಖಾನ್ ಅವರಿಂದಲೇ ಕ್ಯಾಪ್ ಪಡೆದಿದ್ದು ವಿಶೇಷ.

ಹೌದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಮುಶೀರ್ ಖಾನ್ ಪದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಅಣ್ಣ ಸರ್ಫರಾಜ್ ಖಾನ್ ಅವರಿಂದಲೇ ಕ್ಯಾಪ್ ಪಡೆದಿದ್ದು ವಿಶೇಷ.

2 / 5
ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 17 ವರ್ಷದ ಯುವ ಆಲ್​ರೌಂಡರ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 17 ವರ್ಷದ ಯುವ ಆಲ್​ರೌಂಡರ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

3 / 5
ತಮ್ಮ ಮೊದಲ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಮುಶೀರ್ ಖಾನ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಇನ್ನು ಬೌಲಿಂಗ್​ನಲ್ಲಿ 5 ಓವರ್​ ಮಾಡಿದ್ದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇದಾಗ್ಯೂ ಯುವ ಆಟಗಾರನಿಂದ 2ನೇ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

ತಮ್ಮ ಮೊದಲ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಮುಶೀರ್ ಖಾನ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಇನ್ನು ಬೌಲಿಂಗ್​ನಲ್ಲಿ 5 ಓವರ್​ ಮಾಡಿದ್ದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇದಾಗ್ಯೂ ಯುವ ಆಟಗಾರನಿಂದ 2ನೇ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

4 / 5
2021-22ರ ರಣಜಿ ಟೂರ್ನಿಯ 9 ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 2 ಅರ್ಧಶತಕದೊಂದಿಗೆ  982 ರನ್​ ಬಾರಿಸಿರುವ ಸರ್ಫರಾಜ್ ಖಾನ್ ಸದ್ಯ ಭಾರತ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ 17 ವರ್ಷದ ತಮ್ಮ ಮುಶೀರ್ ಖಾನ್ ಕೂಡ ಆಲ್​ರೌಂಡರ್​ ಆಗಿ ಮುಂಬೈ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಈ  ಸಹೋದರರು ಟೀಮ್ ಇಂಡಿಯಾದಲ್ಲಿ ಜೊತೆಯಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

2021-22ರ ರಣಜಿ ಟೂರ್ನಿಯ 9 ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 2 ಅರ್ಧಶತಕದೊಂದಿಗೆ 982 ರನ್​ ಬಾರಿಸಿರುವ ಸರ್ಫರಾಜ್ ಖಾನ್ ಸದ್ಯ ಭಾರತ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ 17 ವರ್ಷದ ತಮ್ಮ ಮುಶೀರ್ ಖಾನ್ ಕೂಡ ಆಲ್​ರೌಂಡರ್​ ಆಗಿ ಮುಂಬೈ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಸಹೋದರರು ಟೀಮ್ ಇಂಡಿಯಾದಲ್ಲಿ ಜೊತೆಯಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?