AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಮುಂಬೈ ತಂಡದಲ್ಲಿ ಸಹೋದರರ ಸವಾಲ್..!

Sarfaraz Khan And Musheer Khan: ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್.

TV9 Web
| Edited By: |

Updated on: Dec 28, 2022 | 4:09 PM

Share
ಟೀಮ್ ಇಂಡಿಯಾದಲ್ಲಿ ಸಹೋದರರು ಜೊತೆಯಾಗಿ ಕಾಣಿಸಿಕೊಂಡಿದ್ದು ತುಂಬಾ ವಿರಳ. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್ ಜೊತೆಯಾಗಿ ಆಡಿದ್ದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಂಡಿದ್ದರು. ಇದಾಗ್ಯೂ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಅಣ್ಣ-ತಮ್ಮ ಜೊತೆಯಾಗಿ ಆಡಿದ ನಿದರ್ಶನವಿಲ್ಲ. ಆದರೆ ಇದೀಗ ದೇಶೀಯ ಅಂಗಳದಲ್ಲಿ ಸಹೋದರರು ಜೊತೆಯಾಗಿ ಕಣಕ್ಕಿಳಿದಿದ್ದಾರೆ. ಅದು ಕೂಡ ಬಲಿಷ್ಠ ಮುಂಬೈ ತಂಡದಲ್ಲಿ ಎಂಬುದು ವಿಶೇಷ.

ಟೀಮ್ ಇಂಡಿಯಾದಲ್ಲಿ ಸಹೋದರರು ಜೊತೆಯಾಗಿ ಕಾಣಿಸಿಕೊಂಡಿದ್ದು ತುಂಬಾ ವಿರಳ. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್ ಜೊತೆಯಾಗಿ ಆಡಿದ್ದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಂಡಿದ್ದರು. ಇದಾಗ್ಯೂ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಅಣ್ಣ-ತಮ್ಮ ಜೊತೆಯಾಗಿ ಆಡಿದ ನಿದರ್ಶನವಿಲ್ಲ. ಆದರೆ ಇದೀಗ ದೇಶೀಯ ಅಂಗಳದಲ್ಲಿ ಸಹೋದರರು ಜೊತೆಯಾಗಿ ಕಣಕ್ಕಿಳಿದಿದ್ದಾರೆ. ಅದು ಕೂಡ ಬಲಿಷ್ಠ ಮುಂಬೈ ತಂಡದಲ್ಲಿ ಎಂಬುದು ವಿಶೇಷ.

1 / 5
ಹೌದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಮುಶೀರ್ ಖಾನ್ ಪದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಅಣ್ಣ ಸರ್ಫರಾಜ್ ಖಾನ್ ಅವರಿಂದಲೇ ಕ್ಯಾಪ್ ಪಡೆದಿದ್ದು ವಿಶೇಷ.

ಹೌದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಮುಶೀರ್ ಖಾನ್ ಪದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಅಣ್ಣ ಸರ್ಫರಾಜ್ ಖಾನ್ ಅವರಿಂದಲೇ ಕ್ಯಾಪ್ ಪಡೆದಿದ್ದು ವಿಶೇಷ.

2 / 5
ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 17 ವರ್ಷದ ಯುವ ಆಲ್​ರೌಂಡರ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ಮುಂಬೈ ರಣಜಿ ತಂಡದ ಸ್ಟಾರ್ ಬ್ಯಾಟ್ಸ್​​ಮನ್​ ಆಗಿ ಗುರುತಿಸಿಕೊಂಡಿರುವ ಸರ್ಫರಾಜ್ ಅವರ ಸಹೋದರ ಮುಶೀರ್ ಖಾನ್ ಯುವ ಆಲ್​ರೌಂಡರ್. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 17 ವರ್ಷದ ಯುವ ಆಲ್​ರೌಂಡರ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

3 / 5
ತಮ್ಮ ಮೊದಲ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಮುಶೀರ್ ಖಾನ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಇನ್ನು ಬೌಲಿಂಗ್​ನಲ್ಲಿ 5 ಓವರ್​ ಮಾಡಿದ್ದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇದಾಗ್ಯೂ ಯುವ ಆಟಗಾರನಿಂದ 2ನೇ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

ತಮ್ಮ ಮೊದಲ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ಮುಶೀರ್ ಖಾನ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಇನ್ನು ಬೌಲಿಂಗ್​ನಲ್ಲಿ 5 ಓವರ್​ ಮಾಡಿದ್ದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಇದಾಗ್ಯೂ ಯುವ ಆಟಗಾರನಿಂದ 2ನೇ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

4 / 5
2021-22ರ ರಣಜಿ ಟೂರ್ನಿಯ 9 ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 2 ಅರ್ಧಶತಕದೊಂದಿಗೆ  982 ರನ್​ ಬಾರಿಸಿರುವ ಸರ್ಫರಾಜ್ ಖಾನ್ ಸದ್ಯ ಭಾರತ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ 17 ವರ್ಷದ ತಮ್ಮ ಮುಶೀರ್ ಖಾನ್ ಕೂಡ ಆಲ್​ರೌಂಡರ್​ ಆಗಿ ಮುಂಬೈ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಈ  ಸಹೋದರರು ಟೀಮ್ ಇಂಡಿಯಾದಲ್ಲಿ ಜೊತೆಯಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

2021-22ರ ರಣಜಿ ಟೂರ್ನಿಯ 9 ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 2 ಅರ್ಧಶತಕದೊಂದಿಗೆ 982 ರನ್​ ಬಾರಿಸಿರುವ ಸರ್ಫರಾಜ್ ಖಾನ್ ಸದ್ಯ ಭಾರತ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ 17 ವರ್ಷದ ತಮ್ಮ ಮುಶೀರ್ ಖಾನ್ ಕೂಡ ಆಲ್​ರೌಂಡರ್​ ಆಗಿ ಮುಂಬೈ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಸಹೋದರರು ಟೀಮ್ ಇಂಡಿಯಾದಲ್ಲಿ ಜೊತೆಯಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ