AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 16 ಕೋಟಿ ನೀಡಿ, ಇಲ್ಲ ಬಿಟ್ಬಿಡಿ: ಸಂಕಷ್ಟದಲ್ಲಿ SRH ಫ್ರಾಂಚೈಸಿ

IPL 2022 SRH: ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಕೂಡ ಹೊರಗುಳಿಯಲಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ. ಇದೀಗ ರಶೀದ್ ಖಾನ್ ಕೂಡ ಹೊರಬಂದರೆ, ಎಸ್​ಆರ್​ಹೆಚ್​ ಫ್ರಾಂಚೈಸಿ ಇಬ್ಬರು ಸ್ಟಾರ್ ಆಟಗಾರರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

TV9 Web
| Edited By: |

Updated on: Nov 27, 2021 | 6:04 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಸನ್​ರೈಸರ್ಸ್​ ಹೈದರಾಬಾದ್​ ತಂಡದಲ್ಲಿ ಹೊಸ ಸಮಸ್ಯೆ ಶುರುವಾಗಿದೆ. ಅದು ಕೂಡ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವುದರಲ್ಲಿ ಎಂಬುದು ವಿಶೇಷ. ಹೌದು, ಎಸ್​ಆರ್​ಹೆಚ್​ ತಂಡ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರ ಹೆಸರು ಮುಂಚೂಣಿಯಲ್ಲಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಸನ್​ರೈಸರ್ಸ್​ ಹೈದರಾಬಾದ್​ ತಂಡದಲ್ಲಿ ಹೊಸ ಸಮಸ್ಯೆ ಶುರುವಾಗಿದೆ. ಅದು ಕೂಡ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವುದರಲ್ಲಿ ಎಂಬುದು ವಿಶೇಷ. ಹೌದು, ಎಸ್​ಆರ್​ಹೆಚ್​ ತಂಡ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರ ಹೆಸರು ಮುಂಚೂಣಿಯಲ್ಲಿದೆ.

1 / 6
ಅವರೆಂದರೆ ಕೇನ್ ವಿಲಿಯಮ್ಸನ್ ಹಾಗೂ  ರಶೀದ್ ಖಾನ್. ಈ ಇಬ್ಬರೂ ಕೂಡ ಎಸ್​ಆರ್​ಹೆಚ್​ ತಂಡದ ಸ್ಟಾರ್ ಆಟಗಾರರು. ಹೀಗಾಗಿ ಇಬ್ಬರನ್ನೂ ಉಳಿಸಿಕೊಳ್ಳಲು ಎಸ್​ಆರ್​ಹೆಚ್​ ಫ್ರಾಂಚೈಸಿ ಬಯಸಿದೆ. ಆದರೆ ಐಪಿಎಲ್​ನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿರುವ ರಶೀದ್ ಖಾನ್ ದೊಡ್ಡ ಮೊತ್ತವನ್ನು ಡಿಮ್ಯಾಂಡ್ ಮಾಡಿದ್ದಾರೆ.

ಅವರೆಂದರೆ ಕೇನ್ ವಿಲಿಯಮ್ಸನ್ ಹಾಗೂ ರಶೀದ್ ಖಾನ್. ಈ ಇಬ್ಬರೂ ಕೂಡ ಎಸ್​ಆರ್​ಹೆಚ್​ ತಂಡದ ಸ್ಟಾರ್ ಆಟಗಾರರು. ಹೀಗಾಗಿ ಇಬ್ಬರನ್ನೂ ಉಳಿಸಿಕೊಳ್ಳಲು ಎಸ್​ಆರ್​ಹೆಚ್​ ಫ್ರಾಂಚೈಸಿ ಬಯಸಿದೆ. ಆದರೆ ಐಪಿಎಲ್​ನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿರುವ ರಶೀದ್ ಖಾನ್ ದೊಡ್ಡ ಮೊತ್ತವನ್ನು ಡಿಮ್ಯಾಂಡ್ ಮಾಡಿದ್ದಾರೆ.

2 / 6
 ಏಕೆಂದರೆ ಎಸ್​ಆರ್​ಹೆಚ್​ ತಂಡವು ಮೊದಲ ಆಯ್ಕೆಯಾಗಿ ಕೇನ್ ವಿಲಿಯಮ್ಸನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಹಾಗೆಯೇ ರಶೀದ್ ಖಾನ್ ಅವರನ್ನು 2ನೇ ಆಯ್ಕೆಯನ್ನಾಗಿಸಲು ಬಯಸಿದೆ. ಇಲ್ಲಿ ಮೊದಲ ಆಯ್ಕೆಯಲ್ಲಿ 16 ಕೋಟಿ ನೀಡಲಾದರೆ, 2ನೇ ಆಯ್ಕೆಯಲ್ಲಿ 12 ಕೋಟಿ ರೂ. ನೀಡಬೇಕಾಗುತ್ತದೆ.

ಏಕೆಂದರೆ ಎಸ್​ಆರ್​ಹೆಚ್​ ತಂಡವು ಮೊದಲ ಆಯ್ಕೆಯಾಗಿ ಕೇನ್ ವಿಲಿಯಮ್ಸನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಹಾಗೆಯೇ ರಶೀದ್ ಖಾನ್ ಅವರನ್ನು 2ನೇ ಆಯ್ಕೆಯನ್ನಾಗಿಸಲು ಬಯಸಿದೆ. ಇಲ್ಲಿ ಮೊದಲ ಆಯ್ಕೆಯಲ್ಲಿ 16 ಕೋಟಿ ನೀಡಲಾದರೆ, 2ನೇ ಆಯ್ಕೆಯಲ್ಲಿ 12 ಕೋಟಿ ರೂ. ನೀಡಬೇಕಾಗುತ್ತದೆ.

3 / 6
ಆದರೆ ಕಳೆದ ಕೆಲ ವರ್ಷಗಳಿಂದ ಎಸ್​ಆರ್​ಹೆಚ್ ತಂಡವು ರಶೀದ್ ಖಾನ್​ಗೆ ನೀಡಿದ್ದು 9 ಕೋಟಿ. ಇದೀಗ ರಿಟೈನ್ ಆಗಬೇಕಿದ್ದರೆ ಹೆಚ್ಚಿನ ಮೊತ್ತವನ್ನು ರಶೀದ್ ಖಾನ್ ಡಿಮ್ಯಾಂಡ್ ಮಾಡಿದ್ದಾರೆ. ಅಂದರೆ ಇಲ್ಲಿ ರಶೀದ್ ಖಾನ್ ಮೊದಲ ಆಯ್ಕೆಯಾಗಲು ಬಯಸಿದ್ದಾರೆ. ಈ ಮೂಲಕ 16 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಯಾಗಿದೆ.

ಆದರೆ ಕಳೆದ ಕೆಲ ವರ್ಷಗಳಿಂದ ಎಸ್​ಆರ್​ಹೆಚ್ ತಂಡವು ರಶೀದ್ ಖಾನ್​ಗೆ ನೀಡಿದ್ದು 9 ಕೋಟಿ. ಇದೀಗ ರಿಟೈನ್ ಆಗಬೇಕಿದ್ದರೆ ಹೆಚ್ಚಿನ ಮೊತ್ತವನ್ನು ರಶೀದ್ ಖಾನ್ ಡಿಮ್ಯಾಂಡ್ ಮಾಡಿದ್ದಾರೆ. ಅಂದರೆ ಇಲ್ಲಿ ರಶೀದ್ ಖಾನ್ ಮೊದಲ ಆಯ್ಕೆಯಾಗಲು ಬಯಸಿದ್ದಾರೆ. ಈ ಮೂಲಕ 16 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಯಾಗಿದೆ.

4 / 6
ಅತ್ತ ಕೇನ್ ವಿಲಿಯಮ್ಸನ್ ಕೂಡ ದೊಡ್ಡ ಮೊತ್ತಕ್ಕೆ ಬೇಡಿಕೆಯಿಟ್ಟಿದ್ದಾರೆ. ಹೀಗಾಗಿ ಇಬ್ಬರನ್ನು ಒಪ್ಪಿಸುವುದು ಇದೀಗ ಎಸ್​ಆರ್​ಹೆಚ್​ ತಂಡಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಒಂದು ವೇಳೆ ರಶೀದ್ ಖಾನ್​ಗೆ ದೊಡ್ಡ ಮೊತ್ತ ದೊರೆಯದಿದ್ದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅತ್ತ ಕೇನ್ ವಿಲಿಯಮ್ಸನ್ ಕೂಡ ದೊಡ್ಡ ಮೊತ್ತಕ್ಕೆ ಬೇಡಿಕೆಯಿಟ್ಟಿದ್ದಾರೆ. ಹೀಗಾಗಿ ಇಬ್ಬರನ್ನು ಒಪ್ಪಿಸುವುದು ಇದೀಗ ಎಸ್​ಆರ್​ಹೆಚ್​ ತಂಡಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಒಂದು ವೇಳೆ ರಶೀದ್ ಖಾನ್​ಗೆ ದೊಡ್ಡ ಮೊತ್ತ ದೊರೆಯದಿದ್ದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

5 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಕೂಡ ಹೊರಗುಳಿಯಲಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ. ಇದೀಗ ರಶೀದ್ ಖಾನ್ ಕೂಡ ಹೊರಬಂದರೆ, ಎಸ್​ಆರ್​ಹೆಚ್​ ಫ್ರಾಂಚೈಸಿ ಇಬ್ಬರು ಸ್ಟಾರ್ ಆಟಗಾರರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್​ನಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎನಿಸಿಕೊಂಡಿರುವ ರಶೀದ್ ಖಾನ್ ಖರೀದಿಗೆ ಪ್ರಮುಖ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇದರಿಂದ ಮತ್ತೆ ಅಫ್ಘಾನ್ ಸ್ಪಿನ್ನರ್ ಹೈದರಾಬಾದ್​ ತಂಡಕ್ಕೆ ಸಿಗಲಿದ್ದಾರೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಎಸ್​ಆರ್​ಹೆಚ್​ ತಂಡವು ರಶೀದ್​ ಖಾನ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದ್ದು, ಆದರೆ ಐಪಿಎಲ್​ನ ಯಶಸ್ವಿ ಸ್ಪಿನ್ನರ್​ನ ಡಿಮ್ಯಾಂಡ್ ಸನ್​ರೈಸರ್ಸ್​ ಫ್ರಾಂಚೈಸಿಗೆ ಹೊಸ ಸವಾಲಾಗಿ ಪರಿಣಮಿಸಿದೆ.

ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಕೂಡ ಹೊರಗುಳಿಯಲಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ. ಇದೀಗ ರಶೀದ್ ಖಾನ್ ಕೂಡ ಹೊರಬಂದರೆ, ಎಸ್​ಆರ್​ಹೆಚ್​ ಫ್ರಾಂಚೈಸಿ ಇಬ್ಬರು ಸ್ಟಾರ್ ಆಟಗಾರರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್​ನಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎನಿಸಿಕೊಂಡಿರುವ ರಶೀದ್ ಖಾನ್ ಖರೀದಿಗೆ ಪ್ರಮುಖ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇದರಿಂದ ಮತ್ತೆ ಅಫ್ಘಾನ್ ಸ್ಪಿನ್ನರ್ ಹೈದರಾಬಾದ್​ ತಂಡಕ್ಕೆ ಸಿಗಲಿದ್ದಾರೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಎಸ್​ಆರ್​ಹೆಚ್​ ತಂಡವು ರಶೀದ್​ ಖಾನ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದ್ದು, ಆದರೆ ಐಪಿಎಲ್​ನ ಯಶಸ್ವಿ ಸ್ಪಿನ್ನರ್​ನ ಡಿಮ್ಯಾಂಡ್ ಸನ್​ರೈಸರ್ಸ್​ ಫ್ರಾಂಚೈಸಿಗೆ ಹೊಸ ಸವಾಲಾಗಿ ಪರಿಣಮಿಸಿದೆ.

6 / 6
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ