AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rassie van der Dussen: 6 ಭರ್ಜರಿ ಸಿಕ್ಸ್​, 7 ಫೋರ್​: ಸ್ಪೋಟಕ ಸೆಂಚುರಿ ಸಿಡಿಸಿದ ಡಸ್ಸೆನ್

PSL 2024: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸೌತ್ ಆಫ್ರಿಕಾ ಕ್ರಿಕೆಟಿಗ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಪೇಶಾವರ್ ಝಲ್ಮಿ ವಿರುದ್ಧದ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಪರ ಕಣಕ್ಕಿಳಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸ್ಪೋಟಕ ಇನಿಂಗ್ಸ್ ಆಡಿದರು. ಈ ಮೂಲಕ ಶತಕ ಬಾರಿಸಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Feb 26, 2024 | 9:37 AM

ಪಾಕಿಸ್ತಾನ್ ಸೂಪರ್ ಲೀಗ್​ನ (PSL 2024) 12ನೇ ಪಂದ್ಯದಲ್ಲಿ ಸ್ಪೋಟಕ ಶತಕ ಬಾರಿಸಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಾಹೋರ್ ಖಲಂದರ್ಸ್ ತಂಡವು ಪೇಶಾವರ್ ಝಲ್ಮಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಪಾಕಿಸ್ತಾನ್ ಸೂಪರ್ ಲೀಗ್​ನ (PSL 2024) 12ನೇ ಪಂದ್ಯದಲ್ಲಿ ಸ್ಪೋಟಕ ಶತಕ ಬಾರಿಸಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಾಹೋರ್ ಖಲಂದರ್ಸ್ ತಂಡವು ಪೇಶಾವರ್ ಝಲ್ಮಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಪೇಶಾವರ್ ಝಲ್ಮಿ ತಂಡಕ್ಕೆ ಯುವ ಎಡಗೈ ದಾಂಡಿಗ ಸೈಮ್ ಅಯ್ಯೂಬ್ (88) ಹಾಗೂ ಬಾಬರ್ ಆಝಂ (48) ಭರ್ಜರಿ ಆರಂಭ ಒದಗಿಸಿದ್ದರು. ಇದಾದ ಬಳಿಕ ರೋವ್​ಮನ್ ಪೊವೆಲ್ 20 ಎಸೆತಗಳಲ್ಲಿ 46 ರನ್ ಸಿಡಿಸಿದರು. ಈ ಮೂಲಕ ಪೇಶಾವರ್ ಝಲ್ಮಿ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಪೇಶಾವರ್ ಝಲ್ಮಿ ತಂಡಕ್ಕೆ ಯುವ ಎಡಗೈ ದಾಂಡಿಗ ಸೈಮ್ ಅಯ್ಯೂಬ್ (88) ಹಾಗೂ ಬಾಬರ್ ಆಝಂ (48) ಭರ್ಜರಿ ಆರಂಭ ಒದಗಿಸಿದ್ದರು. ಇದಾದ ಬಳಿಕ ರೋವ್​ಮನ್ ಪೊವೆಲ್ 20 ಎಸೆತಗಳಲ್ಲಿ 46 ರನ್ ಸಿಡಿಸಿದರು. ಈ ಮೂಲಕ ಪೇಶಾವರ್ ಝಲ್ಮಿ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು.

2 / 5
212 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಲಾಹೋರ್ ಖಲಂದರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಫಖರ್ ಝಮಾನ್ (4) ಹಾಗೂ ಫರ್ಹಾನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

212 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಲಾಹೋರ್ ಖಲಂದರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಫಖರ್ ಝಮಾನ್ (4) ಹಾಗೂ ಫರ್ಹಾನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

3 / 5
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಪೇಶಾವರ್ ಝಲ್ಮಿ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದ ಡಸ್ಸೆನ್ ಕೇವಲ 50 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮಲೆಕ್ಕೆತ್ತಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಪೇಶಾವರ್ ಝಲ್ಮಿ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದ ಡಸ್ಸೆನ್ ಕೇವಲ 50 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮಲೆಕ್ಕೆತ್ತಿದರು.

4 / 5
ಈ ಸ್ಪೋಟಕ ಸೆಂಚುರಿಯ ಹೊರತಾಗಿಯೂ ಲಾಹೋರ್ ಖಲಂದರ್ಸ್​ಗೆ ಗೆಲ್ಲಲು ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಆದರೆ ಅಂತಿಮ ಓವರ್​ನಲ್ಲಿ 9 ರನ್​ ಕಲೆಹಾಕುವುದರೊಂದಿಗೆ​ 8 ರನ್​ಗಳಿಂದ ಸೋಲೊಪ್ಪಿಕೊಂಡಿತು. ಲಾಹೋರ್ ಖಲಂದರ್ಸ್ ಪರ ಏಕಾಂಗಿ ಹೋರಾಟ ನಡೆಸಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 52 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 104 ರನ್ ಬಾರಿಸಿ ಅಜೇಯರಾಗಿ ಉಳಿದರು.

ಈ ಸ್ಪೋಟಕ ಸೆಂಚುರಿಯ ಹೊರತಾಗಿಯೂ ಲಾಹೋರ್ ಖಲಂದರ್ಸ್​ಗೆ ಗೆಲ್ಲಲು ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಆದರೆ ಅಂತಿಮ ಓವರ್​ನಲ್ಲಿ 9 ರನ್​ ಕಲೆಹಾಕುವುದರೊಂದಿಗೆ​ 8 ರನ್​ಗಳಿಂದ ಸೋಲೊಪ್ಪಿಕೊಂಡಿತು. ಲಾಹೋರ್ ಖಲಂದರ್ಸ್ ಪರ ಏಕಾಂಗಿ ಹೋರಾಟ ನಡೆಸಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 52 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 104 ರನ್ ಬಾರಿಸಿ ಅಜೇಯರಾಗಿ ಉಳಿದರು.

5 / 5
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ