AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravi Bishnoi: ಗೂಗ್ಲಿ, ಲೆಗ್​ ಬ್ರೇಕ್ ಬೌಲಿಂಗ್ ಮೂಲಕ ದಾಖಲೆ ಬರೆದ ರವಿ ಬಿಷ್ಣೋಯ್

India vs West Indies 1st T20: 11ನೇ ಓವರ್​ನಲ್ಲಿ ರೋಸ್ಟನ್ ಚೇಸ್ ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮ ವಿಕೆಟ್ ಖಾತೆ ತೆರೆದರು.

TV9 Web
| Edited By: |

Updated on:Feb 16, 2022 | 9:40 PM

Share
ವೆಸ್ಟ್ ಇಂಡೀಸ್ ವಿರುದ್ದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಪದಾರ್ಪಣೆ ಮಾಡಿದ್ದರು. ಚೊಚ್ಚಲ ಬಾರಿ ಪ್ಲೇಯಿಂಗ್​ 11 ನಲ್ಲಿ ಅವಕಾಶ ಪಡೆದ ಬಿಷ್ಣೋಯ್ ಸಿಕ್ಕ ಚಾನ್ಸ್​ ಅನ್ನು ಸಂಪೂರ್ಣವಾಗಿ ಬಳಸಿಕೊಂಡರು.

ವೆಸ್ಟ್ ಇಂಡೀಸ್ ವಿರುದ್ದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಪದಾರ್ಪಣೆ ಮಾಡಿದ್ದರು. ಚೊಚ್ಚಲ ಬಾರಿ ಪ್ಲೇಯಿಂಗ್​ 11 ನಲ್ಲಿ ಅವಕಾಶ ಪಡೆದ ಬಿಷ್ಣೋಯ್ ಸಿಕ್ಕ ಚಾನ್ಸ್​ ಅನ್ನು ಸಂಪೂರ್ಣವಾಗಿ ಬಳಸಿಕೊಂಡರು.

1 / 6
 21 ವರ್ಷದ ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರಿಗೆ ನಾಯಕ ರೋಹಿತ್ ಶರ್ಮಾ 8ನೇ ಓವರ್ ಬೌಲಿಂಗ್ ಮಾಡಲು ಚೆಂಡು ನೀಡಿದರು. ಮೊದಲ ಅಂತಾರಾಷ್ಟ್ರೀಯ ಪಂದ್ಯದ ಓವರ್​ನಲ್ಲಿ ಅತ್ಯುತ್ತಮ ಲೆಗ್ ಬ್ರೇಕ್ ಮತ್ತು ಗೂಗ್ಲಿಗಳ ಮೂಲಕ ಎಲ್ಲರ ಗಮನ ಸೆಳೆದ ಬಿಷ್ಣೋಯ್ ವಿಂಡೀಸ್ ಕಾಡಿದರು.

21 ವರ್ಷದ ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರಿಗೆ ನಾಯಕ ರೋಹಿತ್ ಶರ್ಮಾ 8ನೇ ಓವರ್ ಬೌಲಿಂಗ್ ಮಾಡಲು ಚೆಂಡು ನೀಡಿದರು. ಮೊದಲ ಅಂತಾರಾಷ್ಟ್ರೀಯ ಪಂದ್ಯದ ಓವರ್​ನಲ್ಲಿ ಅತ್ಯುತ್ತಮ ಲೆಗ್ ಬ್ರೇಕ್ ಮತ್ತು ಗೂಗ್ಲಿಗಳ ಮೂಲಕ ಎಲ್ಲರ ಗಮನ ಸೆಳೆದ ಬಿಷ್ಣೋಯ್ ವಿಂಡೀಸ್ ಕಾಡಿದರು.

2 / 6
 ಅಷ್ಟೇ ಅಲ್ಲದೆ 11ನೇ ಓವರ್​ನಲ್ಲಿ ರೋಸ್ಟನ್ ಚೇಸ್ ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮ ವಿಕೆಟ್ ಖಾತೆ ತೆರೆದರು. ಇದರ ಬೆನ್ನಲ್ಲೇ ಸ್ಪೋಟಕ ಬ್ಯಾಟ್ಸ್​ಮನ್ ರೋವ್ಮನ್ ಪೊವೆಲ್ ವಿಕೆಟ್ ಪಡೆದು ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು.

ಅಷ್ಟೇ ಅಲ್ಲದೆ 11ನೇ ಓವರ್​ನಲ್ಲಿ ರೋಸ್ಟನ್ ಚೇಸ್ ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮ ವಿಕೆಟ್ ಖಾತೆ ತೆರೆದರು. ಇದರ ಬೆನ್ನಲ್ಲೇ ಸ್ಪೋಟಕ ಬ್ಯಾಟ್ಸ್​ಮನ್ ರೋವ್ಮನ್ ಪೊವೆಲ್ ವಿಕೆಟ್ ಪಡೆದು ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು.

3 / 6
ಇನ್ನು ನಾಲ್ಕು ಓವರ್​ ಬೌಲಿಂಗ್ ಮಾಡಿದ ರವಿ ಬಿಷ್ಣೋಯ್ ಕೇವಲ 17 ರನ್​ ನೀಡಿ 2 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಟೀಮ್ ಇಂಡಿಯಾ ಪರ ಪದಾರ್ಪಣೆ ಟಿ20 ಪಂದ್ಯದಲ್ಲಿ ಅತೀ ಕಡಿಮೆ ರನ್​ ನೀಡಿದ ಸ್ಪಿನ್ನರ್​ಗಳ ಪಟ್ಟಿಯಲ್ಲಿ ರವಿ ಬಿಷ್ಣೋಯ್ ಕೂಡ ಸ್ಥಾನ ಪಡೆದರು.

ಇನ್ನು ನಾಲ್ಕು ಓವರ್​ ಬೌಲಿಂಗ್ ಮಾಡಿದ ರವಿ ಬಿಷ್ಣೋಯ್ ಕೇವಲ 17 ರನ್​ ನೀಡಿ 2 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಟೀಮ್ ಇಂಡಿಯಾ ಪರ ಪದಾರ್ಪಣೆ ಟಿ20 ಪಂದ್ಯದಲ್ಲಿ ಅತೀ ಕಡಿಮೆ ರನ್​ ನೀಡಿದ ಸ್ಪಿನ್ನರ್​ಗಳ ಪಟ್ಟಿಯಲ್ಲಿ ರವಿ ಬಿಷ್ಣೋಯ್ ಕೂಡ ಸ್ಥಾನ ಪಡೆದರು.

4 / 6
17 ರನ್​ ನೀಡಿ 2 ವಿಕೆಟ್ ಉರುಳಿಸಿ ಬಿಷ್ಣೋಯ್ ಪದಾರ್ಪಣೆ ಪಂದ್ಯದಲ್ಲಿ ಅತೀ ಕಡಿಮೆ ನೀಡಿದ 3ನೇ ಬೌಲರ್ ಎನಿಸಿಕೊಂಡರು. ಇದಕ್ಕೂ ಮುನ್ನ ಪ್ರಗ್ಯಾನ್ ಓಜಾ 2009 ರಲ್ಲಿ ಬಾಂಗ್ಲಾದೇಶದ ವಿರುದ್ದ 21 ರನ್​ ನೀಡಿ 4 ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು. ಇನ್ನು 2ನೇ ಸ್ಥಾನದಲ್ಲಿ ಅಕ್ಷರ್ ಪಟೇಲ್ ಇದ್ದು, 2015 ರಲ್ಲಿ ಅಕ್ಷರ್ ಪಟೇಲ್ ಜಿಂಬಾಬ್ವೆ ವಿರುದ್ದ 17 ರನ್ ನೀಡಿ 3 ಪಡೆದಿದ್ದರು.

17 ರನ್​ ನೀಡಿ 2 ವಿಕೆಟ್ ಉರುಳಿಸಿ ಬಿಷ್ಣೋಯ್ ಪದಾರ್ಪಣೆ ಪಂದ್ಯದಲ್ಲಿ ಅತೀ ಕಡಿಮೆ ನೀಡಿದ 3ನೇ ಬೌಲರ್ ಎನಿಸಿಕೊಂಡರು. ಇದಕ್ಕೂ ಮುನ್ನ ಪ್ರಗ್ಯಾನ್ ಓಜಾ 2009 ರಲ್ಲಿ ಬಾಂಗ್ಲಾದೇಶದ ವಿರುದ್ದ 21 ರನ್​ ನೀಡಿ 4 ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು. ಇನ್ನು 2ನೇ ಸ್ಥಾನದಲ್ಲಿ ಅಕ್ಷರ್ ಪಟೇಲ್ ಇದ್ದು, 2015 ರಲ್ಲಿ ಅಕ್ಷರ್ ಪಟೇಲ್ ಜಿಂಬಾಬ್ವೆ ವಿರುದ್ದ 17 ರನ್ ನೀಡಿ 3 ಪಡೆದಿದ್ದರು.

5 / 6
ಇದೀಗ ರವಿ ಬಿಷ್ಣೋಯ್ ಕೂಡ ಕೇವಲ 17 ರನ್​ ನೀಡಿ 2 ವಿಕೆಟ್ ಪಡೆಯುವ ಮೂಲಕ ಪದಾರ್ಪಣೆ ಪಂದ್ಯದಲ್ಲಿ ಅತೀ ಕಡಿಮೆ ರನ್ ನೀಡಿದ ಟೀಮ್ ಇಂಡಿಯಾದ ಮೂರನೇ ಬೌಲರ್ ಎಂಬ ದಾಖಲೆಯನ್ನು ಬರೆದಿದ್ದಾರೆ.

ಇದೀಗ ರವಿ ಬಿಷ್ಣೋಯ್ ಕೂಡ ಕೇವಲ 17 ರನ್​ ನೀಡಿ 2 ವಿಕೆಟ್ ಪಡೆಯುವ ಮೂಲಕ ಪದಾರ್ಪಣೆ ಪಂದ್ಯದಲ್ಲಿ ಅತೀ ಕಡಿಮೆ ರನ್ ನೀಡಿದ ಟೀಮ್ ಇಂಡಿಯಾದ ಮೂರನೇ ಬೌಲರ್ ಎಂಬ ದಾಖಲೆಯನ್ನು ಬರೆದಿದ್ದಾರೆ.

6 / 6

Published On - 9:07 pm, Wed, 16 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ