AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಹಾಗೂ ಬಿಸಿಸಿಐ ವಿವಾದದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ರವಿಶಾಸ್ತ್ರಿ

Ravi Shastri: ಬಿಸಿಸಿಐ ಹಾಗೂ ವಿರಾಟ್ ಕೊಹ್ಲಿ ನಡುವಣ ಈ ವಿವಾದದ ಬಗ್ಗೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಸೌರವ್ ಗಂಗೂಲಿ ಬಾಯ್ದಿಡಲಿ ಎಂದು ಖಡಕ್ ಆಗಿ ರವಿಶಾಸ್ತ್ರಿ ಹೇಳಿದ್ದಾರೆ.

TV9 Web
| Edited By: |

Updated on:Dec 24, 2021 | 9:57 AM

Share
ಈ ವರ್ಷಾಂತ್ಯದ ವೇಳೆಗೆ ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ಚರ್ಚೆಯಾದ ವಿಷಯ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ. ಎಲ್ಲರಿಗೂ ತಿಳಿದಿರುವಂತೆ ಏಕದಿನ ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿತು. ಈ ಬಗ್ಗೆ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಾಗ ಅನೇಕ ವಿಚಾರಗಳು ಹೊರಬಿದ್ದವು.

ಈ ವರ್ಷಾಂತ್ಯದ ವೇಳೆಗೆ ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ಚರ್ಚೆಯಾದ ವಿಷಯ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ. ಎಲ್ಲರಿಗೂ ತಿಳಿದಿರುವಂತೆ ಏಕದಿನ ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿತು. ಈ ಬಗ್ಗೆ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಾಗ ಅನೇಕ ವಿಚಾರಗಳು ಹೊರಬಿದ್ದವು.

1 / 7
ಕೊಹ್ಲಿ ಟಿ20 ನಾಯಕತ್ವದಿಂದ ಕೆಳಗಿಳಿಯುವ ಮುನ್ನ ಖಾಸಗಿಯಾಗಿ ಕರೆ ಮಾಡಿ, ನಾಯಕತ್ವ ತ್ಯಜಿಸದಂತೆ ಕೇಳಿಕೊಂಡಿದ್ದೆ, ಆದ್ರೆ ವಿರಾಟ್ ಒಪ್ಪಲಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ  ಹೇಳಿಕೆ ನೀಡಿದ್ದರು. ಆದ್ರೆ ವಿರಾಟ್ ಇದಕ್ಕೆ ತದ್ವಿರುದ್ದ ಹೇಳಿಕೆ ನೀಡುವ ಮೂಲಕ ಆಶ್ಚರ್ಯ ಮೂಡಿಸಿದರು. ಜೊತೆಗೆ ಏಕದಿನ ನಾಯಕತ್ವದಿಂದ ತೆಗೆದುಹಾಕಿದ ಬಗ್ಗೆಯೂ ಕೊಹ್ಲಿ ಅಸಮಾಧಾನ ಹೊರಹಾಕಿದ್ದರು.

ಕೊಹ್ಲಿ ಟಿ20 ನಾಯಕತ್ವದಿಂದ ಕೆಳಗಿಳಿಯುವ ಮುನ್ನ ಖಾಸಗಿಯಾಗಿ ಕರೆ ಮಾಡಿ, ನಾಯಕತ್ವ ತ್ಯಜಿಸದಂತೆ ಕೇಳಿಕೊಂಡಿದ್ದೆ, ಆದ್ರೆ ವಿರಾಟ್ ಒಪ್ಪಲಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿಕೆ ನೀಡಿದ್ದರು. ಆದ್ರೆ ವಿರಾಟ್ ಇದಕ್ಕೆ ತದ್ವಿರುದ್ದ ಹೇಳಿಕೆ ನೀಡುವ ಮೂಲಕ ಆಶ್ಚರ್ಯ ಮೂಡಿಸಿದರು. ಜೊತೆಗೆ ಏಕದಿನ ನಾಯಕತ್ವದಿಂದ ತೆಗೆದುಹಾಕಿದ ಬಗ್ಗೆಯೂ ಕೊಹ್ಲಿ ಅಸಮಾಧಾನ ಹೊರಹಾಕಿದ್ದರು.

2 / 7
ಸದ್ಯ ಬಿಸಿಸಿಐ ಹಾಗೂ ವಿರಾಟ್ ಕೊಹ್ಲಿ ನಡುವಣ ಈ ವಿವಾದದ ಬಗ್ಗೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಸೌರವ್ ಗಂಗೂಲಿ ಬಾಯ್ದಿಡಲಿ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಸದ್ಯ ಬಿಸಿಸಿಐ ಹಾಗೂ ವಿರಾಟ್ ಕೊಹ್ಲಿ ನಡುವಣ ಈ ವಿವಾದದ ಬಗ್ಗೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಸೌರವ್ ಗಂಗೂಲಿ ಬಾಯ್ದಿಡಲಿ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

3 / 7
"ವಿರಾಟ್ ಕೊಹ್ಲಿ ತಮ್ಮ ಕಥೆಯ ಒಂದು ಭಾಗವನ್ನು ಹೇಳಿದ್ದಾರೆ. ಅದೇ ರೀತಿ ಮಂಡಳಿಯ ಅಧ್ಯಕ್ಷರು ತಮ್ಮ ಕಥೆಯನ್ನು ಹೇಳುವ ಅಗತ್ಯವಿದೆ. ಉತ್ತಮ ಸಂವಹನದಿಂದ, ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬಹುದಿತ್ತು'' ಎಂದು ರವಿಶಾಸ್ತ್ರಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

"ವಿರಾಟ್ ಕೊಹ್ಲಿ ತಮ್ಮ ಕಥೆಯ ಒಂದು ಭಾಗವನ್ನು ಹೇಳಿದ್ದಾರೆ. ಅದೇ ರೀತಿ ಮಂಡಳಿಯ ಅಧ್ಯಕ್ಷರು ತಮ್ಮ ಕಥೆಯನ್ನು ಹೇಳುವ ಅಗತ್ಯವಿದೆ. ಉತ್ತಮ ಸಂವಹನದಿಂದ, ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬಹುದಿತ್ತು'' ಎಂದು ರವಿಶಾಸ್ತ್ರಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

4 / 7
ಸದ್ಯ ಟೀಮ್ ಇಂಡಿಯಾ ಕೋಚಿಂಗ್ ಹುದ್ದೆಯಿಂದ ಹೊರ ಬಂದಿರುವ ರವಿ ಶಾಸ್ತ್ರಿ ಇದೀಗ ಐಪಿಎಲ್ನಲ್ಲಿ ಫ್ರಾಂಚೈಸಿ ಒಂದರ ಮೆಂಟರ್ ಹುದ್ದೆ ಅಲಂಕರಿಸುವ ಸಾಧ್ಯತೆ ಇದೆ. ಜೊತೆಗೆ ತಮ್ಮ ನೆಚ್ಚಿನ ಕಾಮೆಂಟರಿ ವೃತ್ತಿ ಬದುಕು ಮರಳಿ ಆರಂಭಿಸುವುದಾಗಿಯೂ ಹೇಳಿಕೊಂಡಿದ್ದಾರೆ.

ಸದ್ಯ ಟೀಮ್ ಇಂಡಿಯಾ ಕೋಚಿಂಗ್ ಹುದ್ದೆಯಿಂದ ಹೊರ ಬಂದಿರುವ ರವಿ ಶಾಸ್ತ್ರಿ ಇದೀಗ ಐಪಿಎಲ್ನಲ್ಲಿ ಫ್ರಾಂಚೈಸಿ ಒಂದರ ಮೆಂಟರ್ ಹುದ್ದೆ ಅಲಂಕರಿಸುವ ಸಾಧ್ಯತೆ ಇದೆ. ಜೊತೆಗೆ ತಮ್ಮ ನೆಚ್ಚಿನ ಕಾಮೆಂಟರಿ ವೃತ್ತಿ ಬದುಕು ಮರಳಿ ಆರಂಭಿಸುವುದಾಗಿಯೂ ಹೇಳಿಕೊಂಡಿದ್ದಾರೆ.

5 / 7
ಇದೇವೇಳೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಬಗ್ಗೆ ಮಾತನಾಡಿದ ರವಿಶಾಸ್ತ್ರಿ, "ತಮ್ಮ ಶಕ್ತಿ ಸಾಮರ್ಥ್ಯ ಸಾಬೀತುಪಡಿಸಲು ಇದಕ್ಕಿಂತ ಒಳ್ಳೆಯ ಸಮಯ ಭಾರತಕ್ಕೆ ಸಿಗುವುದಿಲ್ಲ. ವಿರಾಟ್ ಕೊಹ್ಲಿ ಧೋಷರಹಿತ ನಾಯಕ ಮತ್ತು ಅವರು ತಮ್ಮ ಜೊತೆಗೆ ಪ್ರತಿಭಾನ್ವಿತ ತಂಡವನ್ನು ಹೊಂದಿದ್ದಾರೆ" ಎಂದು ಹೇಳಿದ್ದಾರೆ.

ಇದೇವೇಳೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಬಗ್ಗೆ ಮಾತನಾಡಿದ ರವಿಶಾಸ್ತ್ರಿ, "ತಮ್ಮ ಶಕ್ತಿ ಸಾಮರ್ಥ್ಯ ಸಾಬೀತುಪಡಿಸಲು ಇದಕ್ಕಿಂತ ಒಳ್ಳೆಯ ಸಮಯ ಭಾರತಕ್ಕೆ ಸಿಗುವುದಿಲ್ಲ. ವಿರಾಟ್ ಕೊಹ್ಲಿ ಧೋಷರಹಿತ ನಾಯಕ ಮತ್ತು ಅವರು ತಮ್ಮ ಜೊತೆಗೆ ಪ್ರತಿಭಾನ್ವಿತ ತಂಡವನ್ನು ಹೊಂದಿದ್ದಾರೆ" ಎಂದು ಹೇಳಿದ್ದಾರೆ.

6 / 7
ದಕ್ಷಿಣ ಆಫ್ರಿಕಾವು ಭಾರತೀಯರು ಜಯಿಸದ ಭದ್ರಕೋಟೆಯಾಗಿ ಉಳಿದಿದೆ. ನೆನಪಿರಲಿ, ಹರಿಣಗಳು ತವರಿನಲ್ಲಿ ತಮ್ಮದೇ ಆದ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಆ ತಂಡವನ್ನು ಸರಿದೂಗಿಸುವ ಸಾಮರ್ಥ್ಯವುಳ್ಳ ಮತ್ತು ತಂತ್ರಗಾರಿಕೆಯನ್ನು ನಾವು ಪಡೆದುಕೊಂಡಿದ್ದೇವೆ. ಎಂದಿನಂತೆ, ನನ್ನ ಬೆಂಬಲ ಟೀಮ್ ಇಂಡಿಯಾ ಯಾವಾಗಲೂ ಇರುತ್ತದೆ – ರವಿಶಾಸ್ತ್ರಿ.

ದಕ್ಷಿಣ ಆಫ್ರಿಕಾವು ಭಾರತೀಯರು ಜಯಿಸದ ಭದ್ರಕೋಟೆಯಾಗಿ ಉಳಿದಿದೆ. ನೆನಪಿರಲಿ, ಹರಿಣಗಳು ತವರಿನಲ್ಲಿ ತಮ್ಮದೇ ಆದ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಆ ತಂಡವನ್ನು ಸರಿದೂಗಿಸುವ ಸಾಮರ್ಥ್ಯವುಳ್ಳ ಮತ್ತು ತಂತ್ರಗಾರಿಕೆಯನ್ನು ನಾವು ಪಡೆದುಕೊಂಡಿದ್ದೇವೆ. ಎಂದಿನಂತೆ, ನನ್ನ ಬೆಂಬಲ ಟೀಮ್ ಇಂಡಿಯಾ ಯಾವಾಗಲೂ ಇರುತ್ತದೆ – ರವಿಶಾಸ್ತ್ರಿ.

7 / 7

Published On - 8:31 am, Fri, 24 December 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ