AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್

Ravichandran Ashwin: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಒಂದು ವಿಕೆಟ್ ಕಬಳಿಸಿದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಟೀಮ್ ಇಂಡಿಯಾ ಸ್ಪಿನ್ನರ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Sep 17, 2024 | 9:30 AM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಅದರಲ್ಲೂ ಈ ಸರಣಿಯ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಸ್​ನಲ್ಲಿ ಅತ್ಯಧಿಕ ವಿಕೆಟ್​ ಕಬಳಿಸಿ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್​ ಅಗ್ರಸ್ಥಾನಕ್ಕೇರಬಹುದು.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಅದರಲ್ಲೂ ಈ ಸರಣಿಯ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಸ್​ನಲ್ಲಿ ಅತ್ಯಧಿಕ ವಿಕೆಟ್​ ಕಬಳಿಸಿ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್​ ಅಗ್ರಸ್ಥಾನಕ್ಕೇರಬಹುದು.

1 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಈವರೆಗೆ 187 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಈವರೆಗೆ 187 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

2 / 5
ಇದೀಗ ಈ ದಾಖಲೆ ಮುರಿಯಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ ಹದಿನಾಲ್ಕು ವಿಕೆಟ್ ಪಡೆದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎನಿಸಿಕೊಳ್ಳಲಿದ್ದಾರೆ.

ಇದೀಗ ಈ ದಾಖಲೆ ಮುರಿಯಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ ಹದಿನಾಲ್ಕು ವಿಕೆಟ್ ಪಡೆದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎನಿಸಿಕೊಳ್ಳಲಿದ್ದಾರೆ.

3 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 35 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 7794 ಎಸೆತಗಳನ್ನು ಎಸೆದು 174 ವಿಕೆಟ್​ ಕಬಳಿಸಿದ್ದಾರೆ. ಅಂದರೆ WTC ನಲ್ಲಿ 200 ವಿಕೆಟ್​ಗಳ ಮೈಲುಗಲ್ಲು ಮುಟ್ಟಲು ಅಶ್ವಿನ್​ಗೆ ಬೇಕಿರುವುದು ಕೇವಲ 26 ವಿಕೆಟ್​ಗಳು ಮಾತ್ರ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 35 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 7794 ಎಸೆತಗಳನ್ನು ಎಸೆದು 174 ವಿಕೆಟ್​ ಕಬಳಿಸಿದ್ದಾರೆ. ಅಂದರೆ WTC ನಲ್ಲಿ 200 ವಿಕೆಟ್​ಗಳ ಮೈಲುಗಲ್ಲು ಮುಟ್ಟಲು ಅಶ್ವಿನ್​ಗೆ ಬೇಕಿರುವುದು ಕೇವಲ 26 ವಿಕೆಟ್​ಗಳು ಮಾತ್ರ.

4 / 5
ಒಂದು ವೇಳೆ ಬಾಂಗ್ಲಾದೇಶ್ ವಿರುದ್ಧದ 2 ಟೆಸ್ಟ್ ಪಂದ್ಯಗಳ 4 ಇನಿಂಗ್ಸ್​ಗಳಿಂದ ಒಟ್ಟು 26 ವಿಕೆಟ್ ಕಬಳಿಸಿದರೆ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಲಿದೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.

ಒಂದು ವೇಳೆ ಬಾಂಗ್ಲಾದೇಶ್ ವಿರುದ್ಧದ 2 ಟೆಸ್ಟ್ ಪಂದ್ಯಗಳ 4 ಇನಿಂಗ್ಸ್​ಗಳಿಂದ ಒಟ್ಟು 26 ವಿಕೆಟ್ ಕಬಳಿಸಿದರೆ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಲಿದೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ