AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಅಶ್ವಿನ್ ದಿಢೀರ್ ಅಲಭ್ಯ: ಬದಲಿ ಆಟಗಾರ ಯಾರು?, ಆತ ಬೌಲಿಂಗ್ ಮಾಡಬಹುದಾ?

India vs England 3rd Test: ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಇವರ ಅನುಪಸ್ಥಿತಿ ಭಾರತಕ್ಕೆ ದೊಡ್ಡ ಹಿನ್ನಡೆ ಆಗುವುದು ಖಚಿತ. ಏತನ್ಮಧ್ಯೆ, ಅಶ್ವಿನ್ ಬದಲಿಗೆ ಬದಲಿ ಆಟಗಾರನನ್ನು ಆಡುವ ಹನ್ನೊಂದರಲ್ಲಿ ಸೇರಿಸಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ.

Vinay Bhat
|

Updated on: Feb 17, 2024 | 8:44 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಇಂದು ಟೆಸ್ಟ್ ಪಂದ್ಯದ ಮೂರನೇ ದಿನ. ಆದರೆ ಮೂರನೇ ದಿನದಾಟದ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾ ಹಿನ್ನಡೆ ಅನುಭವಿಸಿದೆ. ರವಿಚಂದ್ರನ್ ಅಶ್ವಿನ್ ಇದ್ದಕ್ಕಿದ್ದಂತೆ ಪಂದ್ಯದಿಂದ ಹಿಂದೆ ಸರಿದಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಇಂದು ಟೆಸ್ಟ್ ಪಂದ್ಯದ ಮೂರನೇ ದಿನ. ಆದರೆ ಮೂರನೇ ದಿನದಾಟದ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾ ಹಿನ್ನಡೆ ಅನುಭವಿಸಿದೆ. ರವಿಚಂದ್ರನ್ ಅಶ್ವಿನ್ ಇದ್ದಕ್ಕಿದ್ದಂತೆ ಪಂದ್ಯದಿಂದ ಹಿಂದೆ ಸರಿದಿದ್ದಾರೆ.

1 / 7
ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮನೆಗೆ ಮರಳಬೇಕಾಯಿತು. ಆರ್ ಅಶ್ವಿನ್ ನಿನ್ನೆ ಒಂದು ವಿಕೆಟ್‌ನೊಂದಿಗೆ 500 ವಿಕೆಟ್‌ಗಳ ಮೈಲಿಗಲ್ಲನ್ನು ತಲುಪಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಿದೆ.

ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮನೆಗೆ ಮರಳಬೇಕಾಯಿತು. ಆರ್ ಅಶ್ವಿನ್ ನಿನ್ನೆ ಒಂದು ವಿಕೆಟ್‌ನೊಂದಿಗೆ 500 ವಿಕೆಟ್‌ಗಳ ಮೈಲಿಗಲ್ಲನ್ನು ತಲುಪಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಿದೆ.

2 / 7
ರವಿಚಂದ್ರನ್ ಅಶ್ವಿನ್ ಅವರ ಅನುಪಸ್ಥಿತಿಯು ಇಂದು ಭಾರತಕ್ಕೆ ದೊಡ್ಡ ಮಟ್ಟದಲ್ಲಿ ಹಿನ್ನಡೆ ಆಗುವುದು ಖಚಿತ. ಏತನ್ಮಧ್ಯೆ, ಅಶ್ವಿನ್ ಬದಲಿಗೆ ಟೀಮ್ ಇಂಡಿಯಾ ಬದಲಿ ಆಟಗಾರನನ್ನು ಆಡುವ ಹನ್ನೊಂದರಲ್ಲಿ ಸೇರಿಸಬಹುದೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ರವಿಚಂದ್ರನ್ ಅಶ್ವಿನ್ ಅವರ ಅನುಪಸ್ಥಿತಿಯು ಇಂದು ಭಾರತಕ್ಕೆ ದೊಡ್ಡ ಮಟ್ಟದಲ್ಲಿ ಹಿನ್ನಡೆ ಆಗುವುದು ಖಚಿತ. ಏತನ್ಮಧ್ಯೆ, ಅಶ್ವಿನ್ ಬದಲಿಗೆ ಟೀಮ್ ಇಂಡಿಯಾ ಬದಲಿ ಆಟಗಾರನನ್ನು ಆಡುವ ಹನ್ನೊಂದರಲ್ಲಿ ಸೇರಿಸಬಹುದೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

3 / 7
ಐಸಿಸಿ ನಿಯಮದ ಪ್ರಕಾರ, ಅಶ್ವಿನ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಉಳಿದ ನಾಲ್ವರು ಬೌಲರ್‌ಗಳನ್ನು ಮಾತ್ರ ಅವಲಂಬಿಸಬೇಕಾಗಿದೆ. ಬದಲಿ ಆಟಗಾರರಿಗೆ ಸಂಬಂಧಿಸಿದಂತೆ ಐಸಿಸಿ ನಿಯಮಗಳು ಸ್ಪಷ್ಟವಾಗಿವೆ. ಪಂದ್ಯದ ಸಮಯದಲ್ಲಿ ಫೀಲ್ಡಿಂಗ್ ಮಾಡಲು ಬದಲಿ ಆಟಗಾರನನ್ನು ಬಳಸಬಹುದಷ್ಟೆ.

ಐಸಿಸಿ ನಿಯಮದ ಪ್ರಕಾರ, ಅಶ್ವಿನ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಉಳಿದ ನಾಲ್ವರು ಬೌಲರ್‌ಗಳನ್ನು ಮಾತ್ರ ಅವಲಂಬಿಸಬೇಕಾಗಿದೆ. ಬದಲಿ ಆಟಗಾರರಿಗೆ ಸಂಬಂಧಿಸಿದಂತೆ ಐಸಿಸಿ ನಿಯಮಗಳು ಸ್ಪಷ್ಟವಾಗಿವೆ. ಪಂದ್ಯದ ಸಮಯದಲ್ಲಿ ಫೀಲ್ಡಿಂಗ್ ಮಾಡಲು ಬದಲಿ ಆಟಗಾರನನ್ನು ಬಳಸಬಹುದಷ್ಟೆ.

4 / 7
ನಿಯಮ ಏನು ಹೇಳುತ್ತದೆ ಎಂದರೆ, ಮೈದಾನದಲ್ಲಿ ಗಂಭೀರವಾದ ಗಾಯ ಅಥವಾ ಕೋವಿಡ್ -19 ಸೋಂಕಿನ ಸಂದರ್ಭದಲ್ಲಿ ಬದಲಿ ಆಟಗಾರನನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು, ಆ ಆಟಗಾರನ ಸ್ಥಾನ ತುಂಬಬಹುದು. ಆದರೆ, ಕೌಟುಂಬಿಕ ಕಾರಣಗಳಿಂದ ಅಶ್ವಿನ್ ಮೈದಾನ ತೊರೆದಿರುವ ಕಾರಣ ಬದಲಿ ಆಟಗಾರ ಫೀಲ್ಡಿಂಗ್ ಮಾತ್ರ ಮಾಡಬಹುದು.

ನಿಯಮ ಏನು ಹೇಳುತ್ತದೆ ಎಂದರೆ, ಮೈದಾನದಲ್ಲಿ ಗಂಭೀರವಾದ ಗಾಯ ಅಥವಾ ಕೋವಿಡ್ -19 ಸೋಂಕಿನ ಸಂದರ್ಭದಲ್ಲಿ ಬದಲಿ ಆಟಗಾರನನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು, ಆ ಆಟಗಾರನ ಸ್ಥಾನ ತುಂಬಬಹುದು. ಆದರೆ, ಕೌಟುಂಬಿಕ ಕಾರಣಗಳಿಂದ ಅಶ್ವಿನ್ ಮೈದಾನ ತೊರೆದಿರುವ ಕಾರಣ ಬದಲಿ ಆಟಗಾರ ಫೀಲ್ಡಿಂಗ್ ಮಾತ್ರ ಮಾಡಬಹುದು.

5 / 7
ಅಶ್ವಿನ್​ಗೆ ಬದಲಿ ಆಟಗಾರನಾಗಿ ಬಂದ ಆಟಗಾರನಿಗೆ ಬೌಲಿಂಗ್ ಮಾಡಲು ಅವಕಾಶವಿರುವುದಿಲ್ಲ. ಗಾಯ ಅಥವಾ ಕೋವಿಡ್‌ನಿಂದಾಗಿ ಇವರು ಮೈದಾನವನ್ನು ತೊರೆದಿಲ್ಲ. ಭಾರತಕ್ಕೆ ಮೈದಾನದಲ್ಲಿ ಬದಲಿ ಆಟಗಾರ ಫೀಲ್ಡಿಂಗ್​ಗೆ ಮಾತ್ರ ಸಿಗಲಿದೆ. ಇದು ರೋಹಿತ್ ಪಡೆಗೆ ದೊಡ್ಡ ಹಿನ್ನಡೆ ಆಗುವುದು ಖಚಿತ. ಬದಲಿ ಆಟಗಾರ ಅಕ್ಷರ್ ಪಟೇಲ್ ಅಥವಾ ವಾಷಿಂಗ್ಟನ್ ಸುಂದರ್ ಆಗುವ ಸಾಧ್ಯತೆ ಇದೆ.

ಅಶ್ವಿನ್​ಗೆ ಬದಲಿ ಆಟಗಾರನಾಗಿ ಬಂದ ಆಟಗಾರನಿಗೆ ಬೌಲಿಂಗ್ ಮಾಡಲು ಅವಕಾಶವಿರುವುದಿಲ್ಲ. ಗಾಯ ಅಥವಾ ಕೋವಿಡ್‌ನಿಂದಾಗಿ ಇವರು ಮೈದಾನವನ್ನು ತೊರೆದಿಲ್ಲ. ಭಾರತಕ್ಕೆ ಮೈದಾನದಲ್ಲಿ ಬದಲಿ ಆಟಗಾರ ಫೀಲ್ಡಿಂಗ್​ಗೆ ಮಾತ್ರ ಸಿಗಲಿದೆ. ಇದು ರೋಹಿತ್ ಪಡೆಗೆ ದೊಡ್ಡ ಹಿನ್ನಡೆ ಆಗುವುದು ಖಚಿತ. ಬದಲಿ ಆಟಗಾರ ಅಕ್ಷರ್ ಪಟೇಲ್ ಅಥವಾ ವಾಷಿಂಗ್ಟನ್ ಸುಂದರ್ ಆಗುವ ಸಾಧ್ಯತೆ ಇದೆ.

6 / 7
ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಎರಡನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಭಾರತ ಇನ್ನೂ 238 ರನ್‌ಗಳ ಮುನ್ನಡೆ ಹೊಂದಿದೆ. ಟೆಸ್ಟ್‌ನಲ್ಲಿ ಹಿಡಿತ ಸಾಧಿಸಲು ಟೀಮ್ ಇಂಡಿಯಾ ಇಂದು ಇಂಗ್ಲೆಂಡ್‌ನ ಇನ್ನಿಂಗ್ಸ್ ಅನ್ನು ಬೇಗನೆ ಮುಗಿಸಬೇಕಾಗಿದೆ.

ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಎರಡನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಭಾರತ ಇನ್ನೂ 238 ರನ್‌ಗಳ ಮುನ್ನಡೆ ಹೊಂದಿದೆ. ಟೆಸ್ಟ್‌ನಲ್ಲಿ ಹಿಡಿತ ಸಾಧಿಸಲು ಟೀಮ್ ಇಂಡಿಯಾ ಇಂದು ಇಂಗ್ಲೆಂಡ್‌ನ ಇನ್ನಿಂಗ್ಸ್ ಅನ್ನು ಬೇಗನೆ ಮುಗಿಸಬೇಕಾಗಿದೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!