AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್ ಅನ್​ಸೋಲ್ಡ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿಸದ್ದರು. ಆದರೀಗ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ.

ಝಾಹಿರ್ ಯೂಸುಫ್
|

Updated on: Oct 02, 2025 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

1 / 5
ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

2 / 5
ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

3 / 5
ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

5 / 5
Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್