AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್ ಅನ್​ಸೋಲ್ಡ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿಸದ್ದರು. ಆದರೀಗ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ.

ಝಾಹಿರ್ ಯೂಸುಫ್
|

Updated on: Oct 02, 2025 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

1 / 5
ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

2 / 5
ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

3 / 5
ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ